Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ದೇಹದ ಕೊಬ್ಬು ಕರಗಿಸಿ, ಶಕ್ತಿ ಹೆಚ್ಚಿಸುವ ಜೇನುತುಪ್ಪ+ಲಿಂಬೆ ಸೀರಮ್!
ಮನೆಯಲ್ಲಿ ತಯಾರಿಸುವ ಜೇನುತುಪ್ಪ ಮತ್ತು ಲಿಂಬೆಯ ಸೀರಮ್ ಕೊಬ್ಬು ಕರಗಿಸುವುದಲ್ಲದೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು
ಪದೇ ಪದೇ ನೀವು ಜ್ವರ ಮತ್ತು ಶೀತದಿಂದ ತೊಂದರೆ ಅನುಭವಿಸಿ ವೈದ್ಯರಲ್ಲಿಗೆ ಚಿಕಿತ್ಸೆ ಹೋಗುತ್ತಾ ಇದ್ದರೆ ನೀವು ಲೇಖನ ಓದಲೇಬೇಕು.
ಇಂತಹ ಸಮಸ್ಯೆಯಿರುವವರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದೆ ಎಂದು ಹೇಳಲಾಗುತ್ತದೆ. ವೈದ್ಯರಲ್ಲಿ ಪದೇ ಪದೇ ಚಿಕಿತ್ಸೆಗೆ ಹೋಗುವ ಬದಲು ಮನೆಯಲ್ಲೇ ತಯಾರಿಸಿದ ಸೀರಮ್ ಬಳಸುವುದರಿಂದ ನಿಮ್ಮ ಸಮಸ್ಯೆ ಪರಿಹಾರವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು. ಇಲ್ಲಿ ನೈಸರ್ಗಿಕವಾದ ಮನೆಮದ್ದಿಗೆ ಬಳಸುತ್ತಾ ಇರುವುದು ಲಿಂಬೆರಸ ಮತ್ತು ಜೇನುತುಪ್ಪ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಈ ಸೀರಮ್ ತೂಕ ಕಳೆದುಕೊಳ್ಳಲು ನಿಮಗೆ ನೆರವಾಗುವುದು.

ಲಿಂಬೆಯಲ್ಲಿ ವಿಟಮಿನ್ ಸಿಯಂತಹ ತುಂಬಾ ಬಲಶಾಲಿ ಆ್ಯಂಟಿಆಕ್ಸಿಡೆಂಟ್ ಇದೆ. ಇದು ದೇಹ ಶುದ್ದೀಕರಿಸುವುದು. ಜೇನುತುಪ್ಪದಲ್ಲಿ ರೋಗನಿರೋಧಕ ಶಕ್ತಿಯು ಹೆಚ್ಚಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿಯಾಗಿಯೂ ಕೆಲಸ ಮಾಡುವುದು. ಈ ಸೀರಮ್ ಗೆ ಶುಂಠಿ ಬಳಸಿಕೊಂಡರೆ ಮತ್ತಷ್ಟು ಒಳ್ಳೆಯದು.
ಇದರಲ್ಲಿ ಹಲವಾರು ರೀತಿಯ ಚಿಕಿತ್ಸಕ ಗುಣಗಳು ಮತ್ತು ಆ್ಯಂಟಿಆಕ್ಸಿಡೆಂಟ್ ಇದೆ. ಇದು ಉರಿಯೂತ ಉಂಟು ಮಾಡುವ ಅಂಶಗಳನ್ನು ನಿವಾರಣೆ ಮಾಡುವುದು. ಗಂಟಲು ನೋವಿಗೂ ಈ ಸೀರಮ್ ತುಂಬಾ ಒಳ್ಳೆಯದು. ಇದು ರೋಗನಿರೋಧಕ ಶಕ್ತಿ ಹೆಚ್ಚಿಸಿ ತೂಕ ಕಳೆದುಕೊಳ್ಳಲು ನೆರವಾಗುವುದು.
ಬೇಕಾಗುವ ಸಾಮಗ್ರಿಗಳು
ಲಿಂಬೆ
ಹಸಿ ಜೇನುತುಪ್ಪ
ಸಿಪ್ಪೆ ತೆಗೆದು ಕತ್ತರಿಸಿದ ಶುಂಠಿ
ಒಂದು ಗಾಜಿನ ಶುದ್ಧ ಜಾರ್
ವಿಧಾನ
ಲಿಂಬೆ ಮತ್ತು ಶುಂಠಿ ಕತ್ತರಿಸಿಕೊಂಡು ಜಾರ್ ಗೆ ಹಾಕಿ. ಲಿಂಬೆ ಮತ್ತು ಶುಂಠಿಯನ್ನು ಕಳಸಿಕೊಂಡರೆ ರಸ ಬರುವುದು. ಈ ಜಾರ್ ಗೆ ¾ ಭಾಗದಷ್ಟು ಲಿಂಬೆರಸ ಹಾಕಿ. ಉಳಿದ ¼ ಭಾಗ ಜೇನುತುಪ್ಪ ತುಂಬಿಸಿ ಎಲ್ಲವನ್ನು ಸರಿಯಾಗಿ ಕಲಸಿಕೊಳ್ಳಿ. ಇದರ ಮುಚ್ಚಲ ಮುಚ್ಚಿಕೊಂಡು ಫ್ರಿಡ್ಜ್ನಲ್ಲಿ ಇಟ್ಟುಬಿಡಿ. ಇದು ತಯಾರಾಗುವ ತನಕ ಕಾಯಿರಿ. ತಯಾರಾದ ಬಳಿಕ ಇದರ ಒಂದು ಚಮಚ ತೆಗೆದು ಬಿಸಿ ನೀರಿಗೆ ಹಾಕಿಕೊಂಡು ದಿನವಿಡಿ ಸೇವಿಸಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


