Latest Updates
-
ವಿಶ್ವ ಮೆದುಳು ದಿನ: ದಿನವಿಡೀ ಚುರುಕಾಗಿರಲು ಬೆಳಿಗ್ಗೆ ಈ 10 ನಿಮಿಷದ 'ನ್ಯೂರೋ-ವಾರ್ಮಪ್' ಮಾಡಿ! -
ದೆಹಲಿ ಮೆಟ್ರೋ ಸಂಚಾರ ವ್ಯತ್ಯಯ: ಸಂಗಾತಿಯೊಂದಿಗೆ ಟೆನ್ಷನ್ ಇಲ್ಲದೆ ಪ್ರಯಾಣಿಸುವುದು ಹೇಗೆ? -
ಹಿಮಾಚಲ ಪ್ರದೇಶದಲ್ಲಿ ರೆಡ್ ಅಲರ್ಟ್: ಭಾರಿ ಮಳೆ ಮತ್ತು ಭೂಕುಸಿತದಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ದೆಹಲಿಯಲ್ಲಿ ಯೆಲ್ಲೋ ಅಲರ್ಟ್: ಮಳೆಗಾಲದಲ್ಲಿ ಕಚೇರಿಗೆ ಹೋಗುವವರು ಆರೋಗ್ಯವಾಗಿರಲು ಈ ಟಿಪ್ಸ್ ಪಾಲಿಸಿ -
ಸ್ಯಾಮ್ಸಂಗ್ ಗ್ಯಾಲಕ್ಸಿ ಅನ್ಪ್ಯಾಕ್ಡ್: ಹೊಸ ಫೋಲ್ಡಬಲ್ ಫೋನ್ಗಳ ಲಾಂಚ್ಗೆ ಕೌಂಟ್ಡೌನ್, ನೀವು ರೆಡಿನಾ? -
ಅಂತರಾಷ್ಟ್ರೀಯ ಚೆಸ್ ದಿನ: ಆಟದ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸರಳ ಟಿಪ್ಸ್! -
ಭಾರಿ ಮಳೆ: ಅಮರನಾಥ-ವೈಷ್ಣೋದೇವಿ ಯಾತ್ರೆ ಸ್ಥಗಿತ; ಯಾತ್ರಿಕರು ಈಗ ಏನು ಮಾಡಬೇಕು? -
ಬಿರುಗಾಳಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿ -
ಆನ್ಲೈನ್ ಫುಡ್ ಆರ್ಡರ್ ಮಾಡ್ತೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು! -
ಲಾರ್ಡ್ಸ್ ಅಂಗಳದಲ್ಲಿ ಹೈ-ವೋಲ್ಟೇಜ್ ಕದನ: ಭಾರತ-ಇಂಗ್ಲೆಂಡ್ ಸರಣಿ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲೋದು ಯಾರು?
ದೇಹದ ಕೊಬ್ಬು ಕರಗಿಸಿ, ಶಕ್ತಿ ಹೆಚ್ಚಿಸುವ ಜೇನುತುಪ್ಪ+ಲಿಂಬೆ ಸೀರಮ್!
ಮನೆಯಲ್ಲಿ ತಯಾರಿಸುವ ಜೇನುತುಪ್ಪ ಮತ್ತು ಲಿಂಬೆಯ ಸೀರಮ್ ಕೊಬ್ಬು ಕರಗಿಸುವುದಲ್ಲದೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು
ಪದೇ ಪದೇ ನೀವು ಜ್ವರ ಮತ್ತು ಶೀತದಿಂದ ತೊಂದರೆ ಅನುಭವಿಸಿ ವೈದ್ಯರಲ್ಲಿಗೆ ಚಿಕಿತ್ಸೆ ಹೋಗುತ್ತಾ ಇದ್ದರೆ ನೀವು ಲೇಖನ ಓದಲೇಬೇಕು.
ಇಂತಹ ಸಮಸ್ಯೆಯಿರುವವರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿದೆ ಎಂದು ಹೇಳಲಾಗುತ್ತದೆ. ವೈದ್ಯರಲ್ಲಿ ಪದೇ ಪದೇ ಚಿಕಿತ್ಸೆಗೆ ಹೋಗುವ ಬದಲು ಮನೆಯಲ್ಲೇ ತಯಾರಿಸಿದ ಸೀರಮ್ ಬಳಸುವುದರಿಂದ ನಿಮ್ಮ ಸಮಸ್ಯೆ ಪರಿಹಾರವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು. ಇಲ್ಲಿ ನೈಸರ್ಗಿಕವಾದ ಮನೆಮದ್ದಿಗೆ ಬಳಸುತ್ತಾ ಇರುವುದು ಲಿಂಬೆರಸ ಮತ್ತು ಜೇನುತುಪ್ಪ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಈ ಸೀರಮ್ ತೂಕ ಕಳೆದುಕೊಳ್ಳಲು ನಿಮಗೆ ನೆರವಾಗುವುದು.

ಲಿಂಬೆಯಲ್ಲಿ ವಿಟಮಿನ್ ಸಿಯಂತಹ ತುಂಬಾ ಬಲಶಾಲಿ ಆ್ಯಂಟಿಆಕ್ಸಿಡೆಂಟ್ ಇದೆ. ಇದು ದೇಹ ಶುದ್ದೀಕರಿಸುವುದು. ಜೇನುತುಪ್ಪದಲ್ಲಿ ರೋಗನಿರೋಧಕ ಶಕ್ತಿಯು ಹೆಚ್ಚಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿಯಾಗಿಯೂ ಕೆಲಸ ಮಾಡುವುದು. ಈ ಸೀರಮ್ ಗೆ ಶುಂಠಿ ಬಳಸಿಕೊಂಡರೆ ಮತ್ತಷ್ಟು ಒಳ್ಳೆಯದು.
ಇದರಲ್ಲಿ ಹಲವಾರು ರೀತಿಯ ಚಿಕಿತ್ಸಕ ಗುಣಗಳು ಮತ್ತು ಆ್ಯಂಟಿಆಕ್ಸಿಡೆಂಟ್ ಇದೆ. ಇದು ಉರಿಯೂತ ಉಂಟು ಮಾಡುವ ಅಂಶಗಳನ್ನು ನಿವಾರಣೆ ಮಾಡುವುದು. ಗಂಟಲು ನೋವಿಗೂ ಈ ಸೀರಮ್ ತುಂಬಾ ಒಳ್ಳೆಯದು. ಇದು ರೋಗನಿರೋಧಕ ಶಕ್ತಿ ಹೆಚ್ಚಿಸಿ ತೂಕ ಕಳೆದುಕೊಳ್ಳಲು ನೆರವಾಗುವುದು.
ಬೇಕಾಗುವ ಸಾಮಗ್ರಿಗಳು
ಲಿಂಬೆ
ಹಸಿ ಜೇನುತುಪ್ಪ
ಸಿಪ್ಪೆ ತೆಗೆದು ಕತ್ತರಿಸಿದ ಶುಂಠಿ
ಒಂದು ಗಾಜಿನ ಶುದ್ಧ ಜಾರ್
ವಿಧಾನ
ಲಿಂಬೆ ಮತ್ತು ಶುಂಠಿ ಕತ್ತರಿಸಿಕೊಂಡು ಜಾರ್ ಗೆ ಹಾಕಿ. ಲಿಂಬೆ ಮತ್ತು ಶುಂಠಿಯನ್ನು ಕಳಸಿಕೊಂಡರೆ ರಸ ಬರುವುದು. ಈ ಜಾರ್ ಗೆ ¾ ಭಾಗದಷ್ಟು ಲಿಂಬೆರಸ ಹಾಕಿ. ಉಳಿದ ¼ ಭಾಗ ಜೇನುತುಪ್ಪ ತುಂಬಿಸಿ ಎಲ್ಲವನ್ನು ಸರಿಯಾಗಿ ಕಲಸಿಕೊಳ್ಳಿ. ಇದರ ಮುಚ್ಚಲ ಮುಚ್ಚಿಕೊಂಡು ಫ್ರಿಡ್ಜ್ನಲ್ಲಿ ಇಟ್ಟುಬಿಡಿ. ಇದು ತಯಾರಾಗುವ ತನಕ ಕಾಯಿರಿ. ತಯಾರಾದ ಬಳಿಕ ಇದರ ಒಂದು ಚಮಚ ತೆಗೆದು ಬಿಸಿ ನೀರಿಗೆ ಹಾಕಿಕೊಂಡು ದಿನವಿಡಿ ಸೇವಿಸಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

