Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಮೈ ಕೈ ನೋವಿದ್ದರೆ, ಈ ಮನೆಮದ್ದು ಸೇವಿಸಿ, ಕೂಡಲೇ ಕಡಿಮೆಯಾಗುವುದು!
ಕೆಲವೊಮ್ಮೆ ಮೈ ಕೈ ನೋವು ಒಂದು ಕಿರಿಕಿರಿ ತರಿಸುವ ತೊಂದರೆಯಾಗಿದ್ದು ನಿತ್ಯದ ಇತರ ಚಟುವಟಿಕೆಗಳನ್ನೆಲ್ಲಾ ಕಷ್ಟಕರವಾಗಿಸುತ್ತದೆ. ಚಿಕ್ಕ ಪುಟ್ಟ ಕೆಲಸಗಳೂ ಭಾರೀ ತ್ರಾಸವಾದಂತೆ ಅನ್ನಿಸುತ್ತದೆ.
ಬೆಳಿಗ್ಗೆ ಹಾಸಿಗೆಯಿಂದ ಏಳಬೇಕಾದರೆ ದೇಹಪೂರ್ತಿ ನೋವು ಕಾಣಿಸಿಕೊಂಡರೆ ಆ ದಿನ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಮೈ ಪೂರ್ತಿ ನೋವು ಕಾಣಿಸಿಕೊಂಡರೆ ಅದಕ್ಕೆ ಒಂದು ನೋವು ನಿವಾರಕ ಮಾತ್ರೆ ತೆಗೆದುಕೊಂಡು ಸುಮ್ಮನಿರುವುದು ಹೆಚ್ಚಿನವರ ಅಭ್ಯಾಸವಾಗಿದೆ. ಪ್ರಯಾಣದ ನಂತರ ಕಾಡುವ ಮೈ ಕೈ ನೋವಿಗೆ ಮನೆಮದ್ದು
ಆದರೆ ಈ ಮೈ ನೋವು ಹಿಂದೆ ಆಗಿರುವಂತಹ ಅಪಘಾತದಲ್ಲಿ ಆದಂತಹ ಗಾಯಗಳು, ಸರಿಯಾದ ಭಂಗಿಯಲ್ಲಿ ಕುಳಿತುಕೊಳ್ಳದೆ ಇರುವುದು, ಭಾರವಾದ ವಸ್ತುವನ್ನು ಒಮ್ಮೆಲೇ ಎತ್ತುವುದರಿಂದ ಬೆನ್ನಿಗೆ ನೋವಾಗಬಹುದು. ದೇಹಕ್ಕೆ ಅತಿಯಾಗಿ ಶ್ರಮವಹಿಸಿದರೂ ಮೈಕೈ ನೋವು ಕಾಣಿಸಿಕೊಳ್ಳುವುದು. ಈ ನೋವಿನಿಂದ ಯಾವುದೇ ಕೆಲಸಗಳನ್ನು ಮಾಡುವುದು ಅಸಾಧ್ಯವೆನಿಸುತ್ತದೆ. ದೇಹದ ನೋವನ್ನು ಕಡಿಮೆ ಮಾಡುವ ಆಹಾರಗಳು
ಇಂತಹ ಸಮಯದಲ್ಲಿ ನೀವು ನೈಸರ್ಗಿಕವಾಗಿರುವ ಒಂದು ಪಾನೀಯವನ್ನು ಕುಡಿದರೆ ನೋವು ಮಾಯವಾಗಿ ನೀವು ಉಲ್ಲಾಸದಿಂದ ಓಡಾಡಬಹುದು. ನೋವು ಯಾವಾಗಲೂ ಕಾಡುತ್ತಾ ಇದ್ದರೆ ಅಗತ್ಯವಾಗಿ ವೈದ್ಯರನ್ನು ಭೇಟಿಯಾಗಿ ಸಲಹೆ ಪಡೆಯಿರಿ. ನೈಸರ್ಗಿಕ ಪಾನೀಯ ತಯಾರಿಸುವ ಬಗ್ಗೆ ಮುಂದೆ ತಿಳಿಯಿರಿ....

ಅರಿಶಿನ
ಒಂದು ಚಮಚ ಅರಿಶಿನ ಹುಡಿಯನ್ನು ಹಾಕಿಕೊಂಡು ಅದಕ್ಕೆ ಸ್ವಲ್ಪ ನೀರು ಹಾಕಿ ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಅರಿಶಿನದಲ್ಲಿ ಇರುವಂತಹ ಕುರ್ಕುಮಿನ್ ಎನ್ನುವ ಅಂಶವು ಉರಿಯೂತ ಶಮನಕಾರಿ ಗುಣವನ್ನು ಹೊಂದಿದೆ.

ಅರಿಶಿನ
ಒಂದು ಚಮಚ ಅರಿಶಿನ ಹುಡಿಯನ್ನು ಹಾಕಿಕೊಂಡು ಅದಕ್ಕೆ ಸ್ವಲ್ಪ ನೀರು ಹಾಕಿ ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಅರಿಶಿನದಲ್ಲಿ ಇರುವಂತಹ ಕುರ್ಕುಮಿನ್ ಎನ್ನುವ ಅಂಶವು ಉರಿಯೂತ ಶಮನಕಾರಿ ಗುಣವನ್ನು ಹೊಂದಿದೆ.

ಕರಿಮೆಣಸು
ಒಂದು ಚಿಟಿಕೆ ಕರಿಮೆಣಸಿನ ಹುಡಿಯನ್ನು ತೆಗೆದುಕೊಳ್ಳಿ. ಇದು ಆ್ಯಂಟಿಆಕ್ಸಿಡೆಂಟ್ ಮತ್ತು ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿದೆ. 9 ಭಯಂಕರ ಕಾಯಿಲೆಗೆ ಮನೆಮದ್ದು ಈ ಕರಿಮೆಣಸು!

ಬಾದಾಮಿ ಹಾಲು/ತೆಂಗಿನ ಹಾಲು
ಒಂದು ಕಪ್ ಬಾದಾಮಿ ಹಾಲು ಅಥವಾ ತೆಂಗಿನ ಹಾಲು ತೆಗೆದುಕೊಳ್ಳಿ. ಬಾದಾಮಿ ಹಾಲಿನಲ್ಲಿ ವಿಟಮಿನ್ ಸಿ, ಇ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಯಥೇಚ್ಛವಾಗಿದೆ. ತೆಂಗಿನ ಹಾಲಿನಲ್ಲಿ ನಾರಿನಾಂಶ, ವಿಟಮಿನ್ ಸಿ, ಇ, ಕಬ್ಬಿಣ ಮತ್ತು ಕ್ಯಾಲ್ಸಿಯಂ ಇದೆ.ಬಾದಾಮಿ ಹಾಲು+ ಜೇನುತುಪ್ಪದ ಜೋಡಿಗೆ ನಮ್ಮದೊಂದು ಸಲಾಂ!

ತೆಂಗಿನ ಹಾಲು
ಒಂದು ಚಮಚ ತೆಂಗಿನ ಹಾಲು ತೆಗೆದುಕೊಳ್ಳಿ. ತೆಂಗಿನ ಹಾಲಿನಲ್ಲಿ ಉರಿಯೂತ ಶಮನಕಾರಿ ಗುಣಗಳು ಸಮೃದ್ಧವಾಗಿದೆ.

ಜೇನುತುಪ್ಪ
ಜೇನುತುಪ್ಪದಲ್ಲಿ ಉರಿಯೂತ ಶಮನಕಾರಿ ಗುಣ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಇವೆ. ಒಂದು ಚಮಚ ತಾಜಾ ಜೇನುತುಪ್ಪ ತೆಗೆದುಕೊಳ್ಳಿ.

ತಯಾರಿಸುವ ವಿಧಾನ
*ಜೇನುತುಪ್ಪವನ್ನು ಬಿಟ್ಟು ಬೇರೆ ಎಲ್ಲಾ ಸಾಮಗ್ರಿಗಳನ್ನು ಒಂದು ತವಾಗೆ ಹಾಕಿಕೊಂಡು ಬಿಸಿ ಮಾಡಿ.

ತಯಾರಿಸುವ ವಿಧಾನ
*ಇದು ಕುದಿಯುವುದು ಬೇಡ, ಉಗುರು ಬೆಚ್ಚಗೆ ಬಿಸಿಯಾದರೆ ಸಾಕು. ಇದು ತಯಾರಾದರೆ ಅದಕ್ಕೆ ಜೇನುತುಪ್ಪ ಹಾಕಿಕೊಳ್ಳಿ ಮತ್ತು ಸರಿಯಾಗಿ ಮಿಶ್ರಣ ಮಾಡಿ.

ತಯಾರಿಸುವ ವಿಧಾನ
*ಮಲಗುವ ಮೊದಲು ಒಂದು ಕಪ್ ಬಿಸಿಯಾಗಿರುವ ಪಾನೀಯವನ್ನು ಸೇವಿಸಿದರೆ ಮೈ ನೋವು ಮಾಯವಾಗುವುದು.



Click it and Unblock the Notifications










