Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೈ ಕೈ ನೋವಿದ್ದರೆ, ಈ ಮನೆಮದ್ದು ಸೇವಿಸಿ, ಕೂಡಲೇ ಕಡಿಮೆಯಾಗುವುದು!
ಕೆಲವೊಮ್ಮೆ ಮೈ ಕೈ ನೋವು ಒಂದು ಕಿರಿಕಿರಿ ತರಿಸುವ ತೊಂದರೆಯಾಗಿದ್ದು ನಿತ್ಯದ ಇತರ ಚಟುವಟಿಕೆಗಳನ್ನೆಲ್ಲಾ ಕಷ್ಟಕರವಾಗಿಸುತ್ತದೆ. ಚಿಕ್ಕ ಪುಟ್ಟ ಕೆಲಸಗಳೂ ಭಾರೀ ತ್ರಾಸವಾದಂತೆ ಅನ್ನಿಸುತ್ತದೆ.
ಬೆಳಿಗ್ಗೆ ಹಾಸಿಗೆಯಿಂದ ಏಳಬೇಕಾದರೆ ದೇಹಪೂರ್ತಿ ನೋವು ಕಾಣಿಸಿಕೊಂಡರೆ ಆ ದಿನ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಮೈ ಪೂರ್ತಿ ನೋವು ಕಾಣಿಸಿಕೊಂಡರೆ ಅದಕ್ಕೆ ಒಂದು ನೋವು ನಿವಾರಕ ಮಾತ್ರೆ ತೆಗೆದುಕೊಂಡು ಸುಮ್ಮನಿರುವುದು ಹೆಚ್ಚಿನವರ ಅಭ್ಯಾಸವಾಗಿದೆ. ಪ್ರಯಾಣದ ನಂತರ ಕಾಡುವ ಮೈ ಕೈ ನೋವಿಗೆ ಮನೆಮದ್ದು
ಆದರೆ ಈ ಮೈ ನೋವು ಹಿಂದೆ ಆಗಿರುವಂತಹ ಅಪಘಾತದಲ್ಲಿ ಆದಂತಹ ಗಾಯಗಳು, ಸರಿಯಾದ ಭಂಗಿಯಲ್ಲಿ ಕುಳಿತುಕೊಳ್ಳದೆ ಇರುವುದು, ಭಾರವಾದ ವಸ್ತುವನ್ನು ಒಮ್ಮೆಲೇ ಎತ್ತುವುದರಿಂದ ಬೆನ್ನಿಗೆ ನೋವಾಗಬಹುದು. ದೇಹಕ್ಕೆ ಅತಿಯಾಗಿ ಶ್ರಮವಹಿಸಿದರೂ ಮೈಕೈ ನೋವು ಕಾಣಿಸಿಕೊಳ್ಳುವುದು. ಈ ನೋವಿನಿಂದ ಯಾವುದೇ ಕೆಲಸಗಳನ್ನು ಮಾಡುವುದು ಅಸಾಧ್ಯವೆನಿಸುತ್ತದೆ. ದೇಹದ ನೋವನ್ನು ಕಡಿಮೆ ಮಾಡುವ ಆಹಾರಗಳು
ಇಂತಹ ಸಮಯದಲ್ಲಿ ನೀವು ನೈಸರ್ಗಿಕವಾಗಿರುವ ಒಂದು ಪಾನೀಯವನ್ನು ಕುಡಿದರೆ ನೋವು ಮಾಯವಾಗಿ ನೀವು ಉಲ್ಲಾಸದಿಂದ ಓಡಾಡಬಹುದು. ನೋವು ಯಾವಾಗಲೂ ಕಾಡುತ್ತಾ ಇದ್ದರೆ ಅಗತ್ಯವಾಗಿ ವೈದ್ಯರನ್ನು ಭೇಟಿಯಾಗಿ ಸಲಹೆ ಪಡೆಯಿರಿ. ನೈಸರ್ಗಿಕ ಪಾನೀಯ ತಯಾರಿಸುವ ಬಗ್ಗೆ ಮುಂದೆ ತಿಳಿಯಿರಿ....

ಅರಿಶಿನ
ಒಂದು ಚಮಚ ಅರಿಶಿನ ಹುಡಿಯನ್ನು ಹಾಕಿಕೊಂಡು ಅದಕ್ಕೆ ಸ್ವಲ್ಪ ನೀರು ಹಾಕಿ ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಅರಿಶಿನದಲ್ಲಿ ಇರುವಂತಹ ಕುರ್ಕುಮಿನ್ ಎನ್ನುವ ಅಂಶವು ಉರಿಯೂತ ಶಮನಕಾರಿ ಗುಣವನ್ನು ಹೊಂದಿದೆ.

ಅರಿಶಿನ
ಒಂದು ಚಮಚ ಅರಿಶಿನ ಹುಡಿಯನ್ನು ಹಾಕಿಕೊಂಡು ಅದಕ್ಕೆ ಸ್ವಲ್ಪ ನೀರು ಹಾಕಿ ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಅರಿಶಿನದಲ್ಲಿ ಇರುವಂತಹ ಕುರ್ಕುಮಿನ್ ಎನ್ನುವ ಅಂಶವು ಉರಿಯೂತ ಶಮನಕಾರಿ ಗುಣವನ್ನು ಹೊಂದಿದೆ.

ಕರಿಮೆಣಸು
ಒಂದು ಚಿಟಿಕೆ ಕರಿಮೆಣಸಿನ ಹುಡಿಯನ್ನು ತೆಗೆದುಕೊಳ್ಳಿ. ಇದು ಆ್ಯಂಟಿಆಕ್ಸಿಡೆಂಟ್ ಮತ್ತು ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿದೆ. 9 ಭಯಂಕರ ಕಾಯಿಲೆಗೆ ಮನೆಮದ್ದು ಈ ಕರಿಮೆಣಸು!

ಬಾದಾಮಿ ಹಾಲು/ತೆಂಗಿನ ಹಾಲು
ಒಂದು ಕಪ್ ಬಾದಾಮಿ ಹಾಲು ಅಥವಾ ತೆಂಗಿನ ಹಾಲು ತೆಗೆದುಕೊಳ್ಳಿ. ಬಾದಾಮಿ ಹಾಲಿನಲ್ಲಿ ವಿಟಮಿನ್ ಸಿ, ಇ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಯಥೇಚ್ಛವಾಗಿದೆ. ತೆಂಗಿನ ಹಾಲಿನಲ್ಲಿ ನಾರಿನಾಂಶ, ವಿಟಮಿನ್ ಸಿ, ಇ, ಕಬ್ಬಿಣ ಮತ್ತು ಕ್ಯಾಲ್ಸಿಯಂ ಇದೆ.ಬಾದಾಮಿ ಹಾಲು+ ಜೇನುತುಪ್ಪದ ಜೋಡಿಗೆ ನಮ್ಮದೊಂದು ಸಲಾಂ!

ತೆಂಗಿನ ಹಾಲು
ಒಂದು ಚಮಚ ತೆಂಗಿನ ಹಾಲು ತೆಗೆದುಕೊಳ್ಳಿ. ತೆಂಗಿನ ಹಾಲಿನಲ್ಲಿ ಉರಿಯೂತ ಶಮನಕಾರಿ ಗುಣಗಳು ಸಮೃದ್ಧವಾಗಿದೆ.

ಜೇನುತುಪ್ಪ
ಜೇನುತುಪ್ಪದಲ್ಲಿ ಉರಿಯೂತ ಶಮನಕಾರಿ ಗುಣ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಇವೆ. ಒಂದು ಚಮಚ ತಾಜಾ ಜೇನುತುಪ್ಪ ತೆಗೆದುಕೊಳ್ಳಿ.

ತಯಾರಿಸುವ ವಿಧಾನ
*ಜೇನುತುಪ್ಪವನ್ನು ಬಿಟ್ಟು ಬೇರೆ ಎಲ್ಲಾ ಸಾಮಗ್ರಿಗಳನ್ನು ಒಂದು ತವಾಗೆ ಹಾಕಿಕೊಂಡು ಬಿಸಿ ಮಾಡಿ.

ತಯಾರಿಸುವ ವಿಧಾನ
*ಇದು ಕುದಿಯುವುದು ಬೇಡ, ಉಗುರು ಬೆಚ್ಚಗೆ ಬಿಸಿಯಾದರೆ ಸಾಕು. ಇದು ತಯಾರಾದರೆ ಅದಕ್ಕೆ ಜೇನುತುಪ್ಪ ಹಾಕಿಕೊಳ್ಳಿ ಮತ್ತು ಸರಿಯಾಗಿ ಮಿಶ್ರಣ ಮಾಡಿ.

ತಯಾರಿಸುವ ವಿಧಾನ
*ಮಲಗುವ ಮೊದಲು ಒಂದು ಕಪ್ ಬಿಸಿಯಾಗಿರುವ ಪಾನೀಯವನ್ನು ಸೇವಿಸಿದರೆ ಮೈ ನೋವು ಮಾಯವಾಗುವುದು.



Click it and Unblock the Notifications