Latest Updates
-
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ -
ಖರ್ಜೂರದಲ್ಲಿ ಹುಳುಗಳ ಆತಂಕ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ! -
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ 2026: ಬಾರ್ಸಿಲೋನಾದಲ್ಲಿ ಇಂದು ಹೈ-ವೋಲ್ಟೇಜ್ ರೇಸ್, ಮಿಸ್ ಮಾಡ್ಬೇಡಿ! -
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ -
ವೀಕೆಂಡ್ ಪ್ಲಾನ್ ಮಾಡಿದ್ದೀರಾ? ಹವಾಮಾನ ವೈಪರೀತ್ಯದ ಎಚ್ಚರಿಕೆ: ನಿಮ್ಮ ಸುರಕ್ಷತೆಗಾಗಿ ಈ ಬದಲಾವಣೆ ಮಾಡಿಕೊಳ್ಳಿ! -
ಮುಂಬೈ ಬಿಸಿಲು ಮತ್ತು ಆರ್ದ್ರತೆ: 15 ನಿಮಿಷದಲ್ಲಿ ನಿಮ್ಮ ಮನೆಯನ್ನು ತಂಪಾಗಿರಿಸುವ ಸರಳ ಉಪಾಯಗಳು! -
ನಿಮ್ಮ ಆಹಾರದ ಪ್ಯಾಕೆಟ್ನಲ್ಲಿ ಸ್ಟೇಪ್ಲರ್ ಪಿನ್ ಇದೆಯೇ? ಎಚ್ಚರ, FSSAI ಕಠಿಣ ಆದೇಶ! -
ಧರ್ಮಶಾಲಾದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಮಳೆ ಆತಂಕದ ನಡುವೆ ಗೆಲ್ಲೋರು ಯಾರು?
ಪ್ರಯಾಣ ಮಾಡುವಾಗ ವಾಂತಿ ಮಾಡುತ್ತೀರಾ? ಇಲ್ಲಿದೆ ನೋಡಿ ಮನೆಮದ್ದುಗಳು
ಎಷ್ಟೋ ಕುಟುಂಬಗಳ ಹಿರಿಯರಿಗೆ ಪ್ರಯಾಣದ ವಿಷಯ ಬಂದ ಕೂಡಲೇ ಹಣೆಯಲ್ಲಿ ಚಿಂತೆಯ ಗೆರೆಗಳು ಮೂಡುತ್ತವೆ. ಏಕೆಂದರೆ ಕುಟುಂಬದಲ್ಲಿ ಒಂದಿಬ್ಬರಿಗಾಗರೂ ಇರುವ ಪ್ರಯಾಣದ ವಾಕರಿಕೆ. ಚಿಕ್ಕವರಿದ್ದಾಗ ಹೆಚ್ಚಿರುವ ಈ ತೊಂದರೆ ವಯಸ್ಸಾಗುತ್ತಿದ್ದಂತೆ ತನ್ನಿಂತಾನೇ ಕಡಿಮೆಯಾಗುತ್ತಾ ಹೋಗುತ್ತದೆ.
ಆದರೆ ಕೆಲವರಿಗೆ ಮಾತ್ರ ಎಷ್ಟೇ ಪ್ರಯತ್ನಪಟ್ಟರೂ ಬಸ್ಸಿನ ಅಥವಾ ಕಾರಿನ ಕುಲುಕಾಟ ಪ್ರಾರಂಭವಾದ ತಕ್ಷಣ ವಾಕರಿಕೆ ಕಡ್ಡಾಯ ಎಂಬಂತೆ ಪ್ರಾರಂಭವಾಗಿಬಿಡುತ್ತದೆ. ಕೆಲವರಿಗಂತೂ ವಾಕರಿಕೆ ಪ್ರಾರಂಭವಾದ ಬಳಿಕ ಸಾಮಾನ್ಯ ಸ್ಥಿತಿಗೆ ಬರಲು ಹಲವಾರು ದಿನಗಳೇ ಬೇಕಾಗುತ್ತವೆ. ಆದರೆ ಇದೇನೂ ನಿಯಂತ್ರಣಕ್ಕೆ ಬಾರದೇ ಇರುವ ತೊಂದರೆಯಂತೂ ಅಲ್ಲ. ಇಂದು ಈ ತೊಂದರೆಗೆ ಸಿಲುಕದಿರಲು ಸಹಾಯ ಮಾಡುವ ಹಲವರು ಮನೆ ಔಷಧಿಗಳಿವೆ...ಬನ್ನಿ ಅವು ಯಾವುದು ಎಂಬುದನ್ನು ನೋಡೋಣ....

ಕಾಳುಮೆಣಸು
ಒಂದು ಕಪ್ ಲಿಂಬೆ ರಸ ಬೆರೆಸಿದ ನೀರಿಗೆ ಚಿಟಿಕೆಯಷ್ಟು ಕಾಳುಮೆಣಸಿನ ಪುಡಿಯನ್ನು ಕುಡಿದ ಬಳಿಕ ಪ್ರಯಾಣ ಆರಂಭಿಸಿ. ಈ ಮಿಶ್ರಣ ಪ್ರಯಾಣದ ಅವಧಿಯಲ್ಲಿ ಎದುರಾಗುವ ತಲೆನೋವು, ವಾಕರಿಕೆ ಮೊದಲಾದವುಗಳಿಂದಲೂ ರಕ್ಷಿಸುತ್ತದೆ.

ಪುದೀನಾ ಟೀ
ಪ್ರಯಾಣಕ್ಕೂ ಮುನ್ನ ಒಂದು ಲೋಟ ಬಿಸಿಯಾದ ಪುದೀನಾ ಟೀ ಸೇವಿಸಿ. ಇನ್ನೂ ಉತ್ತಮವೆಂದರೆ ಕೆಲವು ಪುದೀನಾ ಎಲೆಗಳನ್ನು ಚಿಕ್ಕ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಕೈಯಲ್ಲಿಯೇ ಹಿಡಿದಿರಿ. ವಾಹನ ಪ್ರಯಾಣ ಆರಂಭಿಸಿದ ತಕ್ಷಣ ಒಂದೆರಡು ಪುದೀನಾ ಎಲೆಗಳನ್ನು ಬಾಯಿಗೆ ಹಾಕಿಕೊಂಡು ಜಗಿಯುತ್ತಾ ಪೂರ್ಣವಾಗಿ ನೀರಾಗಿಸಿ ನುಂಗಿ. ಇದರಿಂದ ವಾಕರಿಕೆ ಬರುವುದಿಲ್ಲ.

ಶುಂಠಿಯ ಟೀ
ಒಂದು ವೇಳೆ ಊಟ ಮಾಡಿದ ಬಳಿಕ ಪ್ರಯಾಣಿಸುತ್ತಿದ್ದರೆ ಪ್ರಯಾಣಕ್ಕೂ ಮುನ್ನ ಒಂದು ಲೋಟ ಹಸಿಶುಂಠಿಯ ಟೀ ಕುಡಿದು ಹೊರಡಿ. ಇದು ಜೀರ್ಣಕ್ರಿಯೆಗೂ ಉತ್ತಮವಾಗಿದೆ.

ದಾಲ್ಚಿನ್ನಿ(ಚಕ್ಕೆ)
ಒಂದು ಲೋಟ ನೀರನ್ನು ಕುದಿಸಿ ಇದಕ್ಕೆ ಒಂದು ಚಿಕ್ಕಚಮಚ ಚೆಕ್ಕಪುಡಿ ಹಾಗೂ ಒಂದು ಚಿಕ್ಕ ಚಮಚ ಜೇನನ್ನು ಬೆರೆಸಿ. ಪ್ರಯಾಣಕ್ಕೂ ಮುನ್ನ ಈ ನೀರನ್ನು ಬಿಸಿಬಿಸಿಯಾಗಿ ಸೇವಿಸಿ ಹೊರಡಿ. ಇದರಿಂದಲೂ ವಾಕರಿಕೆಯಾಗುವುದಿಲ್ಲ.

ಲವಂಗ
ವಿಶೇಷವಾಗಿ ಬಸ್ ಪ್ರಯಾಣದ ಅವಧಿಗೂ ಮುನ್ನ ಒಂದೆರಡು ಲವಂಗಗಳನ್ನು ಬಾಯಿಗೆ ಹಾಕಿ ಜಗಿಯುತ್ತಿರಿ. ಪೂರ್ಣ ನೀರಾದ ಬಳಿಕ ನುಂಗಿ. ಆದರೆ ಲವಂಗ ಕೊಂಚ ಖಾರವಾಗಿರುವ ಕಾರಣ ಕೊಂಚ ಜೇನನ್ನೂ ಕೊಂಡು ಹೋಗಿ ಲವಂಗವನ್ನು ಜೇನಿನಲ್ಲಿ ಅದ್ದಿ ಸೇವಿಸಿ. ಇದರಿಂದ ವಾಕರಿಕೆ ಇಲ್ಲವಾಗುತ್ತದೆ.

ಏಲಕ್ಕಿ
ಒಂದು ವೇಳೆ ಪ್ರಯಾಣದ ಅವಧಿಯಲ್ಲಿ ವಾಕರಿಕೆ ಉಂಟಾದರೆ ತಕ್ಷಣ ಏಲಕ್ಕಿಯೊಂದನ್ನು ಬಾಯಿಗೆ ಹಾಕಿ ಜಗಿಯಲು ಪ್ರಾರಂಭಿಸಿ.

ಕಾಳುಮೆಣಸು ಮತ್ತು ಲಿಂಬೆ
ಇದು ತಲೆನೋವು, ಪಿತ್ತೋದ್ರೇಕ ಮತ್ತು ತಲೆತಿರುಗುವಿಕೆಯನ್ನು ತಡೆಯುತ್ತದೆ. ಉಪ್ಪು ಅಥವಾ ಕರಿಮೆಣಸನ್ನು ಬಿಸಿಯಾದ ಲಿಂಬೆರಸದೊಂದಿಗೆ ಮಿಶ್ರಣ ಮಾಡಿ ಮತ್ತು ಪ್ರಯಾಣಕ್ಕೆ ಮೊದಲು ಇದನ್ನು ಕುಡಿಯಿರಿ. ಇದು ಪಿತ್ತೋದ್ರೇಕ ಮತ್ತು ವಾಂತಿಯನ್ನು ತಡೆಯುತ್ತದೆ.

ಈರುಳ್ಳಿ ರಸ
ಇದು ವಾಂತಿ ಮತ್ತು ಪಿತ್ತೋದ್ರೇಕವನ್ನು ಕ್ಷಣಮಾತ್ರದಲ್ಲಿ ನಿಲ್ಲಿಸುತ್ತದೆ. ಮಿಕ್ಸಿಗೆ ಹಾಕಿ ಕೆಲವು ಈರುಳ್ಳಿಗಳನ್ನು ಪುಡಿಮಾಡಿ ಮತ್ತು ಅದರಿಂದ ರಸ ತೆಗೆಯಿರಿ. ಇದಕ್ಕೆ ನೀವು ಪುದೀನಾ ಸಾರವನ್ನು ಸೇರಿಸಬಹುದು. ಈ ಮಿಶ್ರಣವು ಪಿತ್ತೋದ್ರೇಕ ಮತ್ತು ವಾಂತಿಯನ್ನು ನಿಲ್ಲಿಸುವಲ್ಲಿ ಅದ್ಭುತವಾಗಿ ಕೆಲಸ ಮಾಡಲಿದೆ.



Click it and Unblock the Notifications