Latest Updates
-
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ?
'ಧೂಮಪಾನಿಯ ಕೆಮ್ಮನ್ನು' ಸರಳವಾಗಿ ನಿಯಂತ್ರಿಸುವ ಟ್ರಿಕ್ಸ್!
ಒಂದು ದಮ್ಮು ಎಳೆದರೆ ಎರಡು ಕೆಮ್ಮು ಫ್ರೀ! ಧೂಮಪಾನದ ದುಷ್ಪರಿಣಾಮವನ್ನು ವಿವರಿಸುವ ಮಕ್ಕಳ ಈ ಅಣಕ ವಾಸ್ತವವನ್ನು ಸ್ಪಷ್ಟವಾಗಿಯೇ ವಿವರಿಸುತ್ತಿದೆ. ಒಮ್ಮೆ ಈ ಕೆಮ್ಮು ಆವರಿಸಿತು ಎಂದರೆ ಮುಂದಿನ ಹದಿನೈದು ಇಪ್ಪತ್ತು ದಿನಗಳವರೆಗೆ ಕಡಿಮೆಯಾಗುವುದೇ ಇಲ್ಲ..!
ಧೂಮಪಾನ ಮಾಡಿದ್ದಕ್ಕೇ ನಿಮಗೆ ಕೆಮ್ಮು ಬಂದಿದ್ದರೆ, ಹಾಗೇ ಆಗಬೇಕು ನಿಮಗೆ ಎಂದು ಹೇಳಿ ಸಮಾಧಾನಪಟ್ಟುಕೊಳ್ಳಬಹುದು. ಆದರೆ ಧೂಮಪಾನಿಗಳು ಬಿಟ್ಟ ಹೊಗೆಯನ್ನು ಸೇವಿಸಿ ಮನೆಯ ಸದಸ್ಯರು, ಸಹೋದ್ಯೋಗಿಗಳಿಗೆ ಈ ಕೆಮ್ಮು ಎದುರಾದರೆ?
ಸಾಮಾನ್ಯವಾಗಿ ಈ ಕೆಮ್ಮು ಒಣದಾಗಿದ್ದು ಕೆಲವರಿಗೆ ಮಾತ್ರ ಕಫವೂ ಒಳಗೊಂಡಿರುತ್ತದೆ. ಮತ್ತೆ ಹೊಗೆಯನ್ನು ಸೇವಿಸದೇ ಇದ್ದರೆ ಒಂದೆರಡು ದಿನಗಳಲ್ಲಿಯೇ ಇದು ತನ್ನಿಂತಾನೇ ಕಡಿಮೆಯಾಗುತ್ತದೆ. ಒಂದು ವೇಳೆ ಆಗದೇ ಇದ್ದರೆ ಮಾತ್ರ ವೈದ್ಯರ ಬಳಿ ಭೇಟಿ ನೀಡುವುದು ಅಗತ್ಯ. ಇದಕ್ಕೂ ಮುನ್ನ ಮನೆಯಲ್ಲಿಯೇ ತಯಾರಿಸಬಹುದಾದ ಕೆಲವು ಮನೆಮದ್ದುಗಳ ಮೂಲಕ ಈ ಕೆಮ್ಮನ್ನು ಸುಲಭವಾಗಿ ಮಣಿಸಬಹುದು.....

ಪರಿಹಾರ #1
ಅತ್ಯಂತ ಸುಲಭವಾದ ಪರಿಹಾರವೆಂದರೆ ನೀರು ಕುಡಿಯುವುದು. ದಿನವಿಡೀ ಸಾಧ್ಯವಾದಷ್ಟು ನೀರನ್ನು ಸತತವಾಗಿ ಕುಡಿಯಬೇಕು. ಈ ನೀರು ಸಾಧ್ಯವಾದಷ್ಟು ಬಿಸಿ ಇರುವುದು ಅಗತ್ಯ. ಇದರಿಂದ ಗಂಟಲಿನ ಒಳಭಾಗದಲ್ಲಿ ಅಂಟಿಕೊಂಡಿದ್ದ ಕಫ ಕರಗಿ ಸಡಿಲಗೊಂಡು ನಿವಾರಣೆಯಾಗಲು ಸಾಧ್ಯವಾಗುತ್ತದೆ. ಅಲ್ಲದೇ ದೇಹಕ್ಕೆ ಹೆಚ್ಚಿನ ನೀರು ಲಭ್ಯವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಲೂ ಸಾಧ್ಯವಾಗುತ್ತದೆ.

ಪರಿಹಾರ #2
ಮಧುಮೇಹವಿಲ್ಲದ ವ್ಯಕ್ತಿಗಳು ದಿನಕ್ಕೆ ಮೂರು ಬಾರಿ ಒಂದು ಚಿಕ್ಕ ಚಮಚ ಜೇನನ್ನು ಸೇವಿಸಿದರೆ ಉತ್ತಮ. ಇದರ ಉರಿಯೂತ ನಿವಾರಕ ಗುಣ ಸೋಂಕನ್ನು ನಿವಾರಿಸುವ ಜೊತೆಗೇ ಬ್ಯಾಕ್ಟೀರಿಯಾಗಳನ್ನೂ ಎದುರಿಸಿ ಕಫವನ್ನು ಇಲ್ಲವಾಗಿಸಲು ನೆರವಾಗುತ್ತದೆ.

ಪರಿಹಾರ #3
ಒಂದು ಲೋಟ ಉಗುರುಬೆಚ್ಚನೆಯ ನೀರಿಗೆ ಒಂಚು ಚಿಕ್ಕ ಚಮಚ ಉಪ್ಪು ಸೇರಿಸಿ ಈ ನೀರಿನಿಂದ ಗಳಗಳಿಸಿ. ದಿನಕ್ಕೆ ಮೂರು ಬಾರಿ ಹೀಗೆ ಮಾಡುವ ಮೂಲಕ ಬಾಯಿಯ ಒಳಗಿನ ತೇವಭಾಗದಲ್ಲಿ ಅಡಗಿದ್ದ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಕೆಮ್ಮಿನಿಂದ ಹೊರಬರಲು ಸಾಧ್ಯವಾಗುತ್ತದೆ.

ಪರಿಹಾರ #4
ಒಂದು ಕಪ್ ಹಾಲನ್ನು ಕುದಿಸಿ ಇದಕ್ಕೆ ಒಂದೆರಡು ಎಸಳು ಬೆಳ್ಳುಳ್ಳಿಯನ್ನು ಜಜ್ಜಿ ಸೇರಿಸಿ. ಈ ಹಾಲನ್ನು ಇನ್ನೂ ಒಂದೆರಡು ನಿಮಿಷ ಕುದಿಸಿ ಬಿಸಿಬಿಸಿಯಿದ್ದಂತೆಯೇ ಕುಡಿಯಿರಿ. ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿವಾರಕ ಗುಣ ಗಂಟಲಿನ ಸೋಂಕನ್ನು ನಿವಾರಿಸಲು ನೆರವಾಗುತ್ತದೆ.

ಪರಿಹಾರ #5
ಒಂದು ಲೋಟ ನೀರಿನಲ್ಲಿ ಒಂದು ಚಿಕ್ಕ ತುಂಡು ಹಸಿಶುಂಠಿಯನ್ನು ಸುಮಾರು ಐದು ನಿಮಿಷಗಳ ಕಾಲ ಕುದಿಸಿ ಬಳಿಕ ಇದಕ್ಕೆ ಕೊಂಚ ಹಾಲು ಬೆರೆಸಿ. ನಂತರ ಇನ್ನೂ ಐದು ನಿಮಿಷ ಕುದಿಸಿದ ನಂತರ ಒಂದು ಚಿಟಿಕೆ ಅರಿಶಿನ ಬೆರೆಸಿ ಕುಡಿಯಿರಿ. ಶುಂಠಿ ಮತ್ತು ಅರಿಶಿನದಲ್ಲಿರುವ ಗುಣಪಡಿಸುವ ಗುಣ ಮತ್ತು ಉರಿಯೂತ ನಿವಾರಕ ಗುಣಗಳು ಕೆಮ್ಮನ್ನು ಗುಣಪಡಿಸಲು ನೆರವಾಗುತ್ತವೆ.

ಪರಿಹಾರ #6
ದಿನಕ್ಕೆ ಕೆಲವು ಕಪ್ ಗಳಂತೆ ಹಸಿರು ಟೀ ಪೇಯವನ್ನು (ಗ್ರೀನ್ ಟೀ) ಕುಡಿಯುತ್ತಾ ಬಂದರೆ ಕೆಮ್ಮಿನಿಂದ ಶೀಘ್ರವಾಗಿ ಹೊರಬರಲು ಸಾಧ್ಯವಾಗುತ್ತದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಕೆಮ್ಮನ್ನು ಶೀಘ್ರವಾಗಿ ಗುಣಪಡಿಸುತ್ತದೆ.

ಪರಿಹಾರ #7
ಒಂದು ಕಪ್ ನೀರನ್ನು ಕುದಿಸಿ ಇದಕ್ಕೆ ಒಂದು ಇಂಚಿನಷ್ಟು ದೊಡ್ಡ ಹಸಿಶುಂಠಿಯ ತುಂಡನ್ನು ಜಜ್ಜಿ ಬೆರೆಸಿ. ಇದಕ್ಕೆ ಕೆಲವು ಹನಿ ಲಿಂಬೆರಸವನ್ನು ಬೆರೆಸಿ ಕುಡಿಯಿರಿ. ಇವೆರಡೂ ಕೆಮ್ಮನ್ನು ಕಡಿಮೆಗೊಳಿಸಲು ನೆರವಾಗುತ್ತವೆ.



Click it and Unblock the Notifications