Latest Updates
-
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ!
ಶೀತ, ಜ್ವರ ಹಾಗೂ ಗಂಟಲು ಕೆರೆತವೇ? ಇಲ್ಲಿದೆ ನೋಡಿ ಕಷಾಯ
ಮಳೆಗಾಲ ಆರಂಭವಾದರೆ ಸಾಕು ಒಂದು ರೀತಿಯ ತಂಪಾದ ವಾತಾವರಣ, ತಂಗಾಳಿ ಸೋನೆ ಮಳೆ ಎಲ್ಲವೂ ಒಮ್ಮಿಂದೊಮ್ಮೆಲೆ ಆರಂಭಗೊಂಡಿರುತ್ತವೆ. ಒಂದೇ ಸಮನೆ ಬದಲಾಗುವ ವಾತಾವರಣ ಹಾಗೂ ಹೆಚ್ಚುವ ತೇವಾಂಶದಿಂದ ದೇಹದ ಆರೋಗ್ಯದಲ್ಲೂ ಕೊಂಚ ಏರುಪೇರು ಉಂಟಾಗುವುದು ಸಹಜ. ಈ ವ್ಯತ್ಯಾಸಕ್ಕೆ ಭಯ ಪಡುವ ಅಗತ್ಯ ಇರುವುದಿಲ್ಲ. ಸ್ವಲ್ಪ ಬಿಸಿಯಾದ ಪಾನೀಯ ಮತ್ತು ಮಸಾಲೆ ಭರಿತ ಆಹಾರವನ್ನು ಸೇವಿಸುವುದರ ಮೂಲಕ ದೇಹವನ್ನು ಬಲಪಡಿಸಿಕೊಳ್ಳಬಹುದು.
ಬಿಸಿಯ ಬೇಗೆಯಿಂದ ಮಳೆಗಾಲದ ತಂಪು ಅನುಭವಿಸುತ್ತಿದ್ದಂತೆಯೇ ಕೆಲವು ರೋಗಗಳೂ ಹುಟ್ಟಿಕೊಳ್ಳುತ್ತವೆ. ಸೊಳ್ಳೆಗಳು, ಸೂಕ್ಷ್ಮಾಣುಗಳ ಸಂಖ್ಯೆಯೂ ಹೆಚ್ಚುತ್ತವೆ. ಇವುಗಳಿಂದ ಸಾಮಾನ್ಯವಾಗಿ ಜ್ವರ, ಶೀತ ಮತ್ತು ಗಂಟಲು ನೋವು ಪ್ರಾರಂಭವಾಗುವುದು. ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬರುವ ಈ ರೋಗಗಳು ಮಳೆಗಾಲದಲ್ಲಿ ಸ್ವಲ್ಪ ಜಾಸ್ತಿ ಎನ್ನಬಹುದು. ಈ ಕಾಯಿಲೆಗಳ ಸಲುವಾಗಿ ಆಸ್ಪತ್ರೆಗೆ ಅಲೆದಾಡುವ ಬದಲು ಮನೆ ಮದ್ದಿನಿಂದಲೇ ಆರೈಕೆ ಮಾಡಿಕೊಳ್ಳಬಹುದು.

ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಪ್ರಮಾಣದಲ್ಲಿರುವಾಗಲೇ ಅನೇಕ ಕಾಯಿಲೆಗಳು ನಮ್ಮನ್ನು ಆವರಿಸಿಕೊಳ್ಳುತ್ತವೆ. ಯಾವಾಗ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತವೆಯೋ ಆಗ ಎಲ್ಲ ಬಗೆಯ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ಹಾಗಾಗಿ ನಾವು ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವಂತೆ ಮಾಡಿಕೊಳ್ಳಬೇಕು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸಣ್ಣ ಪುಟ್ಟ ಶೀತ, ಗಂಟಲು ನೋವನ್ನು ಓಡಿಸುವ ಚಿಕಿತ್ಸೆ ಇಲ್ಲಿದೆ ನೋಡಿ...
ಮನೆ ಔಷಧಿ
* ಬ್ರೌನ್ ಶುಗರ್ -1 ಚಮಚ
* ಲವಂಗ 4-5
* ತುಳಸಿ 5-6
* ಅರಿಶಿನ 1 ಚಮಚ
ವಿಧಾನ
* ಒಂದು ಪಾತ್ರೆಯಲ್ಲಿ ನೀರು ಮತ್ತು ಮೇಲೆ ಹೇಳಿರುವ ಎಲ್ಲಾ ಸಾಮಾಗ್ರಿಯನ್ನು ಹಾಕಿ ಕುದಿಯಲು ಬಿಡಿ.
* ಪಾತ್ರೆಯಲ್ಲಿ ಇದ್ದ ನೀರಿನ ಪ್ರಮಾಣ ಕುದಿಯುತ್ತಲೇ ಕಡಿಮೆಯಾಗುತ್ತಾ ಬರುತ್ತದೆ, ಎಂದು ಅದು ಒಂದು ಕಪ್ ನಷ್ಟು ಉಳಿದಿರುತ್ತದೋ, ಆಗ ಉರಿಯನ್ನು ಆರಿಸಿ.
* ಒಂದು ಕಪ್ನಲ್ಲಿ ಸೋಸಿಕೊಳ್ಳಬೇಕು.
* ಸ್ವಲ್ಪ ಬಿಸಿ ಬಿಸಿ ಇರುವಾಗಲೇ ಇದನ್ನು ಕುಡಿಯಿರಿ.
* ಹೀಗೆ ದಿನಕ್ಕೊಮ್ಮೆ ಈ ಕಷಾಯವನ್ನು ಸೇವಿಸಿದರೆ ಕಾಯಿಲೆ ಕಡಿಮೆಯಾಗುವುದು.
ರೋಗದ ಲಕ್ಷಣ ಕಾಣಿಸಿಕೊಂಡಾಗ ಹಾಗೂ ರೋಗ ಗುಣಮುಖವಾಗುವವರೆಗೂ ಎಣ್ಣೆಯುಕ್ತ ಆಹಾರದಿಂದ ದೂರ ಇರಬೇಕು. ದೇಹವನ್ನು ಆದಷ್ಟು ಬೆಚ್ಚಗಿರುವಂತೆ ನೋಡಿಕೊಳ್ಳಬೇಕು.
ಹಾಗೊಮ್ಮೆ ಜ್ವರ, ಶೀತವು ಅತಿಯಾಗುತ್ತಿದ್ದರೆ ವೈದ್ಯರಲ್ಲಿ ಪರೀಕ್ಷಿಸಿ ಕೊಳ್ಳುವುದು ಸೂಕ್ತ. ವೈರಲ್ ಫ್ಲೂ ಆಗಿದ್ದರೆ ಸೂಕ್ತ ಚಿಕಿತ್ಸೆ ಪಡೆದು ಗುಣಮುಖ ಹೊಂದಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


