Latest Updates
-
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ
ಒಂದೆರಡು ದಿನಗಳಲ್ಲಿಯೇ ಕೆಮ್ಮು, ಕಫ ಹೋಗಲಾಡಿಸುವ ಮನೆಮದ್ದುಗಳು
ಕೆಮ್ಮು ಒಂದು ವ್ಯಾಧಿಯಲ್ಲ, ಬದಲಿಗೆ ನಮ್ಮ ರೋಗ ನಿರೋಧಕ ವ್ಯವಸ್ಥೆಯ ಒಂದು ಅಂಗವಾಗಿದೆ. ನಮ್ಮ ಶ್ವಾಸನಾಳಗಳ ಒಳಗೆ ಅಂಟಿಕೊಳ್ಳುವ ದ್ರವ ಜಿನುಗುತ್ತದೆ. ಇದು ಗಾಳಿಯಲ್ಲಿ ತೇಲಿ ಬರುವ ರೋಗಾಣುಗಳು ಹಾಗೂ ಧೂಳನ್ನು ಅಂಟಿಸಿಕೊಳ್ಳುವ ಮೂಲಕ ಶ್ವಾಸಕೋಶಗಳ ಒಳಗೆ ಇವುಗಳ ಪ್ರವೇಶವನ್ನು ಪ್ರತಿಬಂಧಿಸುತ್ತದೆ. ಹೀಗೆ ವೈರಾಣುಗಳನ್ನು ಅಂಟಿಸಿಕೊಂಡ ದ್ರವ ಗಟ್ಟಿಯಾಗಿ ಕಫದ ರೂಪ ಪಡೆಯುತ್ತದೆ. ಇದನ್ನು ಕೆರೆದು ನಿವಾರಿಸುವ ಕ್ರಿಯೆಯೇ ಕೆಮ್ಮು.
ಕೆಮ್ಮನ್ನು ನಿವಾರಿಸಬೇಕೆಂದರೆ ಅಂಟಿಕೊಂಡಿರುವ ಈ ಕಫವನ್ನು ನಿವಾರಿಸಬೇಕು. ಕಫ ಗಟ್ಟಿಯಾಗಿದ್ದಷ್ಟೂ ಇದನ್ನು ನಿವಾರಿಸಲು ಕಷ್ಟವಾಗುತ್ತಾ ಕೆಮ್ಮು ಅನವರತವಾಗುತ್ತದೆ. ಕೆಲವು ಸಾಮಾಗ್ರಿಗಳು ಈ ಕಫವನ್ನು ಸಡಿಲಿಸಲು ಸಮರ್ಥವಾಗಿವೆ. ಮಾರುಕಟ್ಟೆಯಲ್ಲಿ ಕೆಮ್ಮಿನ ಸಿರಪ್ಗಳು ಸಿಗುತ್ತವೆ.

ಬಾದಾಮಿ
ಕೆಮ್ಮು ನಿವಾರಿಸಲು ಬಲು ಪ್ರಾಚೀನವಾದ ವಿಧಾನವೆಂದರೆ ಬಾದಾಮಿ ಅರೆದು ಸೇವಿಸುವುದು. ಸುಮಾರು ಏಳೆಂಟು ಬಾದಾಮಿಗಳನ್ನು ರಾತ್ರಿಯಿಡೀ ತಣ್ಣೀರಿನಲ್ಲಿ ನೆನೆಸಿಡಿ. ಮರುದಿನ ಸಿಪ್ಪೆ ಸುಲಿದು ನುಣ್ಣಗೆ ಅರೆಯಿರಿ. ಇದಕ್ಕೆ ಕೊಂಚ ಬೆಣ್ಣೆ ಮತ್ತು ಸಕ್ಕರೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಈರುಳ್ಳಿ
ಈರುಳ್ಳಿಯನ್ನು ಹೆಚ್ಚಿ ಜಜ್ಜಿ ಹಿಂಡಿ ರಸವನ್ನು ಸೇವಿಸುವ ಮೂಲಕ ಕೆಮ್ಮು ಕಡಿಮೆಯಾಗುವುದು ಮಾತ್ರವಲ್ಲ ಕಟ್ಟಿಕೊಂಡಿರುವ ಎದೆಯೂ ಸಡಿಲಗೊಳ್ಳುತ್ತದೆ. ಪ್ರತಿ ಆರು ಗಂಟೆಗಳಿಗೊಮ್ಮೆ ಒಂದರಿಂದ ಎರಡು ಚಿಕ್ಕ ಚಮಚ ಈರುಳ್ಳಿ ರಸವನ್ನು ಸಮಪ್ರಮಾಣದ ಜೇನಿನೊಂದಿಗೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಲಿಂಬೆ
ಲಿಂಬೆರಸ ಅತ್ಯುತ್ತಮವಾ ಕಫಹಾರಿಯಾಗಿದ್ದು ವಿಶೇಷವಾಗಿ ಕೆಮ್ಮಿನ ಮೂಲಕ ಎದುರಾಗಿದ್ದ ಗಂಟಲಿನ ಕಿರಿಕಿರಿ ಹಾಗೂ ತುರಿಕೆಯನ್ನು ನಿವಾರಿಸುತ್ತವೆ.

ವೀಳ್ಯದೆಲೆ
ಕೆಲವು ವೀಳ್ಯದೆಲೆಗಳನ್ನು ನುಣ್ಣಗೆ ಅರೆದು ಎದೆಯ ಮೇಲೆ ಹಚ್ಚಿ. ಇದರಿಂದ ನಿಧಾನವಾಗಿ ಕೆಮ್ಮು ಕಡಿಮೆಯಾಗುತ್ತದೆ. ಕೆಮ್ಮು ಎದುರಾದರೆ ರೋಗಿ ಧೂಮಪಾನ, ಮಾಂಸಾಹಾರ, ಸಕ್ಕರೆ, ಟೀ, ಕಾಫಿ ಸಂಸ್ಕರಿತ ಆಹಾರಗಳಿಂದ ದೂರವಿದ್ದಷ್ಟೂ ಒಳ್ಳೆಯದು.



Click it and Unblock the Notifications