Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಒಂದೆರಡು ದಿನಗಳಲ್ಲಿಯೇ ಕೆಮ್ಮು, ಕಫ ಹೋಗಲಾಡಿಸುವ ಮನೆಮದ್ದುಗಳು
ಕೆಮ್ಮು ಒಂದು ವ್ಯಾಧಿಯಲ್ಲ, ಬದಲಿಗೆ ನಮ್ಮ ರೋಗ ನಿರೋಧಕ ವ್ಯವಸ್ಥೆಯ ಒಂದು ಅಂಗವಾಗಿದೆ. ನಮ್ಮ ಶ್ವಾಸನಾಳಗಳ ಒಳಗೆ ಅಂಟಿಕೊಳ್ಳುವ ದ್ರವ ಜಿನುಗುತ್ತದೆ. ಇದು ಗಾಳಿಯಲ್ಲಿ ತೇಲಿ ಬರುವ ರೋಗಾಣುಗಳು ಹಾಗೂ ಧೂಳನ್ನು ಅಂಟಿಸಿಕೊಳ್ಳುವ ಮೂಲಕ ಶ್ವಾಸಕೋಶಗಳ ಒಳಗೆ ಇವುಗಳ ಪ್ರವೇಶವನ್ನು ಪ್ರತಿಬಂಧಿಸುತ್ತದೆ. ಹೀಗೆ ವೈರಾಣುಗಳನ್ನು ಅಂಟಿಸಿಕೊಂಡ ದ್ರವ ಗಟ್ಟಿಯಾಗಿ ಕಫದ ರೂಪ ಪಡೆಯುತ್ತದೆ. ಇದನ್ನು ಕೆರೆದು ನಿವಾರಿಸುವ ಕ್ರಿಯೆಯೇ ಕೆಮ್ಮು.
ಕೆಮ್ಮನ್ನು ನಿವಾರಿಸಬೇಕೆಂದರೆ ಅಂಟಿಕೊಂಡಿರುವ ಈ ಕಫವನ್ನು ನಿವಾರಿಸಬೇಕು. ಕಫ ಗಟ್ಟಿಯಾಗಿದ್ದಷ್ಟೂ ಇದನ್ನು ನಿವಾರಿಸಲು ಕಷ್ಟವಾಗುತ್ತಾ ಕೆಮ್ಮು ಅನವರತವಾಗುತ್ತದೆ. ಕೆಲವು ಸಾಮಾಗ್ರಿಗಳು ಈ ಕಫವನ್ನು ಸಡಿಲಿಸಲು ಸಮರ್ಥವಾಗಿವೆ. ಮಾರುಕಟ್ಟೆಯಲ್ಲಿ ಕೆಮ್ಮಿನ ಸಿರಪ್ಗಳು ಸಿಗುತ್ತವೆ.

ಬಾದಾಮಿ
ಕೆಮ್ಮು ನಿವಾರಿಸಲು ಬಲು ಪ್ರಾಚೀನವಾದ ವಿಧಾನವೆಂದರೆ ಬಾದಾಮಿ ಅರೆದು ಸೇವಿಸುವುದು. ಸುಮಾರು ಏಳೆಂಟು ಬಾದಾಮಿಗಳನ್ನು ರಾತ್ರಿಯಿಡೀ ತಣ್ಣೀರಿನಲ್ಲಿ ನೆನೆಸಿಡಿ. ಮರುದಿನ ಸಿಪ್ಪೆ ಸುಲಿದು ನುಣ್ಣಗೆ ಅರೆಯಿರಿ. ಇದಕ್ಕೆ ಕೊಂಚ ಬೆಣ್ಣೆ ಮತ್ತು ಸಕ್ಕರೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಈರುಳ್ಳಿ
ಈರುಳ್ಳಿಯನ್ನು ಹೆಚ್ಚಿ ಜಜ್ಜಿ ಹಿಂಡಿ ರಸವನ್ನು ಸೇವಿಸುವ ಮೂಲಕ ಕೆಮ್ಮು ಕಡಿಮೆಯಾಗುವುದು ಮಾತ್ರವಲ್ಲ ಕಟ್ಟಿಕೊಂಡಿರುವ ಎದೆಯೂ ಸಡಿಲಗೊಳ್ಳುತ್ತದೆ. ಪ್ರತಿ ಆರು ಗಂಟೆಗಳಿಗೊಮ್ಮೆ ಒಂದರಿಂದ ಎರಡು ಚಿಕ್ಕ ಚಮಚ ಈರುಳ್ಳಿ ರಸವನ್ನು ಸಮಪ್ರಮಾಣದ ಜೇನಿನೊಂದಿಗೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಲಿಂಬೆ
ಲಿಂಬೆರಸ ಅತ್ಯುತ್ತಮವಾ ಕಫಹಾರಿಯಾಗಿದ್ದು ವಿಶೇಷವಾಗಿ ಕೆಮ್ಮಿನ ಮೂಲಕ ಎದುರಾಗಿದ್ದ ಗಂಟಲಿನ ಕಿರಿಕಿರಿ ಹಾಗೂ ತುರಿಕೆಯನ್ನು ನಿವಾರಿಸುತ್ತವೆ.

ವೀಳ್ಯದೆಲೆ
ಕೆಲವು ವೀಳ್ಯದೆಲೆಗಳನ್ನು ನುಣ್ಣಗೆ ಅರೆದು ಎದೆಯ ಮೇಲೆ ಹಚ್ಚಿ. ಇದರಿಂದ ನಿಧಾನವಾಗಿ ಕೆಮ್ಮು ಕಡಿಮೆಯಾಗುತ್ತದೆ. ಕೆಮ್ಮು ಎದುರಾದರೆ ರೋಗಿ ಧೂಮಪಾನ, ಮಾಂಸಾಹಾರ, ಸಕ್ಕರೆ, ಟೀ, ಕಾಫಿ ಸಂಸ್ಕರಿತ ಆಹಾರಗಳಿಂದ ದೂರವಿದ್ದಷ್ಟೂ ಒಳ್ಳೆಯದು.



Click it and Unblock the Notifications











