Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಒಂದೆರಡು ದಿನಗಳಲ್ಲಿಯೇ ಕೆಮ್ಮು, ಕಫ ಹೋಗಲಾಡಿಸುವ ಮನೆಮದ್ದುಗಳು
ಕೆಮ್ಮು ಒಂದು ವ್ಯಾಧಿಯಲ್ಲ, ಬದಲಿಗೆ ನಮ್ಮ ರೋಗ ನಿರೋಧಕ ವ್ಯವಸ್ಥೆಯ ಒಂದು ಅಂಗವಾಗಿದೆ. ನಮ್ಮ ಶ್ವಾಸನಾಳಗಳ ಒಳಗೆ ಅಂಟಿಕೊಳ್ಳುವ ದ್ರವ ಜಿನುಗುತ್ತದೆ. ಇದು ಗಾಳಿಯಲ್ಲಿ ತೇಲಿ ಬರುವ ರೋಗಾಣುಗಳು ಹಾಗೂ ಧೂಳನ್ನು ಅಂಟಿಸಿಕೊಳ್ಳುವ ಮೂಲಕ ಶ್ವಾಸಕೋಶಗಳ ಒಳಗೆ ಇವುಗಳ ಪ್ರವೇಶವನ್ನು ಪ್ರತಿಬಂಧಿಸುತ್ತದೆ. ಹೀಗೆ ವೈರಾಣುಗಳನ್ನು ಅಂಟಿಸಿಕೊಂಡ ದ್ರವ ಗಟ್ಟಿಯಾಗಿ ಕಫದ ರೂಪ ಪಡೆಯುತ್ತದೆ. ಇದನ್ನು ಕೆರೆದು ನಿವಾರಿಸುವ ಕ್ರಿಯೆಯೇ ಕೆಮ್ಮು.
ಕೆಮ್ಮನ್ನು ನಿವಾರಿಸಬೇಕೆಂದರೆ ಅಂಟಿಕೊಂಡಿರುವ ಈ ಕಫವನ್ನು ನಿವಾರಿಸಬೇಕು. ಕಫ ಗಟ್ಟಿಯಾಗಿದ್ದಷ್ಟೂ ಇದನ್ನು ನಿವಾರಿಸಲು ಕಷ್ಟವಾಗುತ್ತಾ ಕೆಮ್ಮು ಅನವರತವಾಗುತ್ತದೆ. ಕೆಲವು ಸಾಮಾಗ್ರಿಗಳು ಈ ಕಫವನ್ನು ಸಡಿಲಿಸಲು ಸಮರ್ಥವಾಗಿವೆ. ಮಾರುಕಟ್ಟೆಯಲ್ಲಿ ಕೆಮ್ಮಿನ ಸಿರಪ್ಗಳು ಸಿಗುತ್ತವೆ.

ಬಾದಾಮಿ
ಕೆಮ್ಮು ನಿವಾರಿಸಲು ಬಲು ಪ್ರಾಚೀನವಾದ ವಿಧಾನವೆಂದರೆ ಬಾದಾಮಿ ಅರೆದು ಸೇವಿಸುವುದು. ಸುಮಾರು ಏಳೆಂಟು ಬಾದಾಮಿಗಳನ್ನು ರಾತ್ರಿಯಿಡೀ ತಣ್ಣೀರಿನಲ್ಲಿ ನೆನೆಸಿಡಿ. ಮರುದಿನ ಸಿಪ್ಪೆ ಸುಲಿದು ನುಣ್ಣಗೆ ಅರೆಯಿರಿ. ಇದಕ್ಕೆ ಕೊಂಚ ಬೆಣ್ಣೆ ಮತ್ತು ಸಕ್ಕರೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಈರುಳ್ಳಿ
ಈರುಳ್ಳಿಯನ್ನು ಹೆಚ್ಚಿ ಜಜ್ಜಿ ಹಿಂಡಿ ರಸವನ್ನು ಸೇವಿಸುವ ಮೂಲಕ ಕೆಮ್ಮು ಕಡಿಮೆಯಾಗುವುದು ಮಾತ್ರವಲ್ಲ ಕಟ್ಟಿಕೊಂಡಿರುವ ಎದೆಯೂ ಸಡಿಲಗೊಳ್ಳುತ್ತದೆ. ಪ್ರತಿ ಆರು ಗಂಟೆಗಳಿಗೊಮ್ಮೆ ಒಂದರಿಂದ ಎರಡು ಚಿಕ್ಕ ಚಮಚ ಈರುಳ್ಳಿ ರಸವನ್ನು ಸಮಪ್ರಮಾಣದ ಜೇನಿನೊಂದಿಗೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಲಿಂಬೆ
ಲಿಂಬೆರಸ ಅತ್ಯುತ್ತಮವಾ ಕಫಹಾರಿಯಾಗಿದ್ದು ವಿಶೇಷವಾಗಿ ಕೆಮ್ಮಿನ ಮೂಲಕ ಎದುರಾಗಿದ್ದ ಗಂಟಲಿನ ಕಿರಿಕಿರಿ ಹಾಗೂ ತುರಿಕೆಯನ್ನು ನಿವಾರಿಸುತ್ತವೆ.

ವೀಳ್ಯದೆಲೆ
ಕೆಲವು ವೀಳ್ಯದೆಲೆಗಳನ್ನು ನುಣ್ಣಗೆ ಅರೆದು ಎದೆಯ ಮೇಲೆ ಹಚ್ಚಿ. ಇದರಿಂದ ನಿಧಾನವಾಗಿ ಕೆಮ್ಮು ಕಡಿಮೆಯಾಗುತ್ತದೆ. ಕೆಮ್ಮು ಎದುರಾದರೆ ರೋಗಿ ಧೂಮಪಾನ, ಮಾಂಸಾಹಾರ, ಸಕ್ಕರೆ, ಟೀ, ಕಾಫಿ ಸಂಸ್ಕರಿತ ಆಹಾರಗಳಿಂದ ದೂರವಿದ್ದಷ್ಟೂ ಒಳ್ಳೆಯದು.



Click it and Unblock the Notifications
