Latest Updates
-
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ!
ಒಂದೆರಡು ದಿನಗಳಲ್ಲಿಯೇ ಕೆಮ್ಮು, ಕಫ ಹೋಗಲಾಡಿಸುವ ಮನೆಮದ್ದುಗಳು
ಕೆಮ್ಮು ಒಂದು ವ್ಯಾಧಿಯಲ್ಲ, ಬದಲಿಗೆ ನಮ್ಮ ರೋಗ ನಿರೋಧಕ ವ್ಯವಸ್ಥೆಯ ಒಂದು ಅಂಗವಾಗಿದೆ. ನಮ್ಮ ಶ್ವಾಸನಾಳಗಳ ಒಳಗೆ ಅಂಟಿಕೊಳ್ಳುವ ದ್ರವ ಜಿನುಗುತ್ತದೆ. ಇದು ಗಾಳಿಯಲ್ಲಿ ತೇಲಿ ಬರುವ ರೋಗಾಣುಗಳು ಹಾಗೂ ಧೂಳನ್ನು ಅಂಟಿಸಿಕೊಳ್ಳುವ ಮೂಲಕ ಶ್ವಾಸಕೋಶಗಳ ಒಳಗೆ ಇವುಗಳ ಪ್ರವೇಶವನ್ನು ಪ್ರತಿಬಂಧಿಸುತ್ತದೆ. ಹೀಗೆ ವೈರಾಣುಗಳನ್ನು ಅಂಟಿಸಿಕೊಂಡ ದ್ರವ ಗಟ್ಟಿಯಾಗಿ ಕಫದ ರೂಪ ಪಡೆಯುತ್ತದೆ. ಇದನ್ನು ಕೆರೆದು ನಿವಾರಿಸುವ ಕ್ರಿಯೆಯೇ ಕೆಮ್ಮು.
ಕೆಮ್ಮನ್ನು ನಿವಾರಿಸಬೇಕೆಂದರೆ ಅಂಟಿಕೊಂಡಿರುವ ಈ ಕಫವನ್ನು ನಿವಾರಿಸಬೇಕು. ಕಫ ಗಟ್ಟಿಯಾಗಿದ್ದಷ್ಟೂ ಇದನ್ನು ನಿವಾರಿಸಲು ಕಷ್ಟವಾಗುತ್ತಾ ಕೆಮ್ಮು ಅನವರತವಾಗುತ್ತದೆ. ಕೆಲವು ಸಾಮಾಗ್ರಿಗಳು ಈ ಕಫವನ್ನು ಸಡಿಲಿಸಲು ಸಮರ್ಥವಾಗಿವೆ. ಮಾರುಕಟ್ಟೆಯಲ್ಲಿ ಕೆಮ್ಮಿನ ಸಿರಪ್ಗಳು ಸಿಗುತ್ತವೆ.

ಬಾದಾಮಿ
ಕೆಮ್ಮು ನಿವಾರಿಸಲು ಬಲು ಪ್ರಾಚೀನವಾದ ವಿಧಾನವೆಂದರೆ ಬಾದಾಮಿ ಅರೆದು ಸೇವಿಸುವುದು. ಸುಮಾರು ಏಳೆಂಟು ಬಾದಾಮಿಗಳನ್ನು ರಾತ್ರಿಯಿಡೀ ತಣ್ಣೀರಿನಲ್ಲಿ ನೆನೆಸಿಡಿ. ಮರುದಿನ ಸಿಪ್ಪೆ ಸುಲಿದು ನುಣ್ಣಗೆ ಅರೆಯಿರಿ. ಇದಕ್ಕೆ ಕೊಂಚ ಬೆಣ್ಣೆ ಮತ್ತು ಸಕ್ಕರೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಈರುಳ್ಳಿ
ಈರುಳ್ಳಿಯನ್ನು ಹೆಚ್ಚಿ ಜಜ್ಜಿ ಹಿಂಡಿ ರಸವನ್ನು ಸೇವಿಸುವ ಮೂಲಕ ಕೆಮ್ಮು ಕಡಿಮೆಯಾಗುವುದು ಮಾತ್ರವಲ್ಲ ಕಟ್ಟಿಕೊಂಡಿರುವ ಎದೆಯೂ ಸಡಿಲಗೊಳ್ಳುತ್ತದೆ. ಪ್ರತಿ ಆರು ಗಂಟೆಗಳಿಗೊಮ್ಮೆ ಒಂದರಿಂದ ಎರಡು ಚಿಕ್ಕ ಚಮಚ ಈರುಳ್ಳಿ ರಸವನ್ನು ಸಮಪ್ರಮಾಣದ ಜೇನಿನೊಂದಿಗೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಲಿಂಬೆ
ಲಿಂಬೆರಸ ಅತ್ಯುತ್ತಮವಾ ಕಫಹಾರಿಯಾಗಿದ್ದು ವಿಶೇಷವಾಗಿ ಕೆಮ್ಮಿನ ಮೂಲಕ ಎದುರಾಗಿದ್ದ ಗಂಟಲಿನ ಕಿರಿಕಿರಿ ಹಾಗೂ ತುರಿಕೆಯನ್ನು ನಿವಾರಿಸುತ್ತವೆ.

ವೀಳ್ಯದೆಲೆ
ಕೆಲವು ವೀಳ್ಯದೆಲೆಗಳನ್ನು ನುಣ್ಣಗೆ ಅರೆದು ಎದೆಯ ಮೇಲೆ ಹಚ್ಚಿ. ಇದರಿಂದ ನಿಧಾನವಾಗಿ ಕೆಮ್ಮು ಕಡಿಮೆಯಾಗುತ್ತದೆ. ಕೆಮ್ಮು ಎದುರಾದರೆ ರೋಗಿ ಧೂಮಪಾನ, ಮಾಂಸಾಹಾರ, ಸಕ್ಕರೆ, ಟೀ, ಕಾಫಿ ಸಂಸ್ಕರಿತ ಆಹಾರಗಳಿಂದ ದೂರವಿದ್ದಷ್ಟೂ ಒಳ್ಳೆಯದು.



Click it and Unblock the Notifications