Latest Updates
-
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ
ಒಂದೆರಡು ದಿನಗಳಲ್ಲಿಯೇ ಕೆಮ್ಮು, ಕಫ ಹೋಗಲಾಡಿಸುವ ಮನೆಮದ್ದುಗಳು
ಕೆಮ್ಮು ಒಂದು ವ್ಯಾಧಿಯಲ್ಲ, ಬದಲಿಗೆ ನಮ್ಮ ರೋಗ ನಿರೋಧಕ ವ್ಯವಸ್ಥೆಯ ಒಂದು ಅಂಗವಾಗಿದೆ. ನಮ್ಮ ಶ್ವಾಸನಾಳಗಳ ಒಳಗೆ ಅಂಟಿಕೊಳ್ಳುವ ದ್ರವ ಜಿನುಗುತ್ತದೆ. ಇದು ಗಾಳಿಯಲ್ಲಿ ತೇಲಿ ಬರುವ ರೋಗಾಣುಗಳು ಹಾಗೂ ಧೂಳನ್ನು ಅಂಟಿಸಿಕೊಳ್ಳುವ ಮೂಲಕ ಶ್ವಾಸಕೋಶಗಳ ಒಳಗೆ ಇವುಗಳ ಪ್ರವೇಶವನ್ನು ಪ್ರತಿಬಂಧಿಸುತ್ತದೆ. ಹೀಗೆ ವೈರಾಣುಗಳನ್ನು ಅಂಟಿಸಿಕೊಂಡ ದ್ರವ ಗಟ್ಟಿಯಾಗಿ ಕಫದ ರೂಪ ಪಡೆಯುತ್ತದೆ. ಇದನ್ನು ಕೆರೆದು ನಿವಾರಿಸುವ ಕ್ರಿಯೆಯೇ ಕೆಮ್ಮು.
ಕೆಮ್ಮನ್ನು ನಿವಾರಿಸಬೇಕೆಂದರೆ ಅಂಟಿಕೊಂಡಿರುವ ಈ ಕಫವನ್ನು ನಿವಾರಿಸಬೇಕು. ಕಫ ಗಟ್ಟಿಯಾಗಿದ್ದಷ್ಟೂ ಇದನ್ನು ನಿವಾರಿಸಲು ಕಷ್ಟವಾಗುತ್ತಾ ಕೆಮ್ಮು ಅನವರತವಾಗುತ್ತದೆ. ಕೆಲವು ಸಾಮಾಗ್ರಿಗಳು ಈ ಕಫವನ್ನು ಸಡಿಲಿಸಲು ಸಮರ್ಥವಾಗಿವೆ. ಮಾರುಕಟ್ಟೆಯಲ್ಲಿ ಕೆಮ್ಮಿನ ಸಿರಪ್ಗಳು ಸಿಗುತ್ತವೆ.

ಬಾದಾಮಿ
ಕೆಮ್ಮು ನಿವಾರಿಸಲು ಬಲು ಪ್ರಾಚೀನವಾದ ವಿಧಾನವೆಂದರೆ ಬಾದಾಮಿ ಅರೆದು ಸೇವಿಸುವುದು. ಸುಮಾರು ಏಳೆಂಟು ಬಾದಾಮಿಗಳನ್ನು ರಾತ್ರಿಯಿಡೀ ತಣ್ಣೀರಿನಲ್ಲಿ ನೆನೆಸಿಡಿ. ಮರುದಿನ ಸಿಪ್ಪೆ ಸುಲಿದು ನುಣ್ಣಗೆ ಅರೆಯಿರಿ. ಇದಕ್ಕೆ ಕೊಂಚ ಬೆಣ್ಣೆ ಮತ್ತು ಸಕ್ಕರೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಈರುಳ್ಳಿ
ಈರುಳ್ಳಿಯನ್ನು ಹೆಚ್ಚಿ ಜಜ್ಜಿ ಹಿಂಡಿ ರಸವನ್ನು ಸೇವಿಸುವ ಮೂಲಕ ಕೆಮ್ಮು ಕಡಿಮೆಯಾಗುವುದು ಮಾತ್ರವಲ್ಲ ಕಟ್ಟಿಕೊಂಡಿರುವ ಎದೆಯೂ ಸಡಿಲಗೊಳ್ಳುತ್ತದೆ. ಪ್ರತಿ ಆರು ಗಂಟೆಗಳಿಗೊಮ್ಮೆ ಒಂದರಿಂದ ಎರಡು ಚಿಕ್ಕ ಚಮಚ ಈರುಳ್ಳಿ ರಸವನ್ನು ಸಮಪ್ರಮಾಣದ ಜೇನಿನೊಂದಿಗೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಲಿಂಬೆ
ಲಿಂಬೆರಸ ಅತ್ಯುತ್ತಮವಾ ಕಫಹಾರಿಯಾಗಿದ್ದು ವಿಶೇಷವಾಗಿ ಕೆಮ್ಮಿನ ಮೂಲಕ ಎದುರಾಗಿದ್ದ ಗಂಟಲಿನ ಕಿರಿಕಿರಿ ಹಾಗೂ ತುರಿಕೆಯನ್ನು ನಿವಾರಿಸುತ್ತವೆ.

ವೀಳ್ಯದೆಲೆ
ಕೆಲವು ವೀಳ್ಯದೆಲೆಗಳನ್ನು ನುಣ್ಣಗೆ ಅರೆದು ಎದೆಯ ಮೇಲೆ ಹಚ್ಚಿ. ಇದರಿಂದ ನಿಧಾನವಾಗಿ ಕೆಮ್ಮು ಕಡಿಮೆಯಾಗುತ್ತದೆ. ಕೆಮ್ಮು ಎದುರಾದರೆ ರೋಗಿ ಧೂಮಪಾನ, ಮಾಂಸಾಹಾರ, ಸಕ್ಕರೆ, ಟೀ, ಕಾಫಿ ಸಂಸ್ಕರಿತ ಆಹಾರಗಳಿಂದ ದೂರವಿದ್ದಷ್ಟೂ ಒಳ್ಳೆಯದು.



Click it and Unblock the Notifications