Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಒಂದೆರಡು ದಿನಗಳಲ್ಲಿಯೇ ಕೆಮ್ಮು, ಕಫ ಹೋಗಲಾಡಿಸುವ ಮನೆಮದ್ದುಗಳು
ಕೆಮ್ಮು ಒಂದು ವ್ಯಾಧಿಯಲ್ಲ, ಬದಲಿಗೆ ನಮ್ಮ ರೋಗ ನಿರೋಧಕ ವ್ಯವಸ್ಥೆಯ ಒಂದು ಅಂಗವಾಗಿದೆ. ನಮ್ಮ ಶ್ವಾಸನಾಳಗಳ ಒಳಗೆ ಅಂಟಿಕೊಳ್ಳುವ ದ್ರವ ಜಿನುಗುತ್ತದೆ. ಇದು ಗಾಳಿಯಲ್ಲಿ ತೇಲಿ ಬರುವ ರೋಗಾಣುಗಳು ಹಾಗೂ ಧೂಳನ್ನು ಅಂಟಿಸಿಕೊಳ್ಳುವ ಮೂಲಕ ಶ್ವಾಸಕೋಶಗಳ ಒಳಗೆ ಇವುಗಳ ಪ್ರವೇಶವನ್ನು ಪ್ರತಿಬಂಧಿಸುತ್ತದೆ. ಹೀಗೆ ವೈರಾಣುಗಳನ್ನು ಅಂಟಿಸಿಕೊಂಡ ದ್ರವ ಗಟ್ಟಿಯಾಗಿ ಕಫದ ರೂಪ ಪಡೆಯುತ್ತದೆ. ಇದನ್ನು ಕೆರೆದು ನಿವಾರಿಸುವ ಕ್ರಿಯೆಯೇ ಕೆಮ್ಮು.
ಕೆಮ್ಮನ್ನು ನಿವಾರಿಸಬೇಕೆಂದರೆ ಅಂಟಿಕೊಂಡಿರುವ ಈ ಕಫವನ್ನು ನಿವಾರಿಸಬೇಕು. ಕಫ ಗಟ್ಟಿಯಾಗಿದ್ದಷ್ಟೂ ಇದನ್ನು ನಿವಾರಿಸಲು ಕಷ್ಟವಾಗುತ್ತಾ ಕೆಮ್ಮು ಅನವರತವಾಗುತ್ತದೆ. ಕೆಲವು ಸಾಮಾಗ್ರಿಗಳು ಈ ಕಫವನ್ನು ಸಡಿಲಿಸಲು ಸಮರ್ಥವಾಗಿವೆ. ಮಾರುಕಟ್ಟೆಯಲ್ಲಿ ಕೆಮ್ಮಿನ ಸಿರಪ್ಗಳು ಸಿಗುತ್ತವೆ.

ಬಾದಾಮಿ
ಕೆಮ್ಮು ನಿವಾರಿಸಲು ಬಲು ಪ್ರಾಚೀನವಾದ ವಿಧಾನವೆಂದರೆ ಬಾದಾಮಿ ಅರೆದು ಸೇವಿಸುವುದು. ಸುಮಾರು ಏಳೆಂಟು ಬಾದಾಮಿಗಳನ್ನು ರಾತ್ರಿಯಿಡೀ ತಣ್ಣೀರಿನಲ್ಲಿ ನೆನೆಸಿಡಿ. ಮರುದಿನ ಸಿಪ್ಪೆ ಸುಲಿದು ನುಣ್ಣಗೆ ಅರೆಯಿರಿ. ಇದಕ್ಕೆ ಕೊಂಚ ಬೆಣ್ಣೆ ಮತ್ತು ಸಕ್ಕರೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಈರುಳ್ಳಿ
ಈರುಳ್ಳಿಯನ್ನು ಹೆಚ್ಚಿ ಜಜ್ಜಿ ಹಿಂಡಿ ರಸವನ್ನು ಸೇವಿಸುವ ಮೂಲಕ ಕೆಮ್ಮು ಕಡಿಮೆಯಾಗುವುದು ಮಾತ್ರವಲ್ಲ ಕಟ್ಟಿಕೊಂಡಿರುವ ಎದೆಯೂ ಸಡಿಲಗೊಳ್ಳುತ್ತದೆ. ಪ್ರತಿ ಆರು ಗಂಟೆಗಳಿಗೊಮ್ಮೆ ಒಂದರಿಂದ ಎರಡು ಚಿಕ್ಕ ಚಮಚ ಈರುಳ್ಳಿ ರಸವನ್ನು ಸಮಪ್ರಮಾಣದ ಜೇನಿನೊಂದಿಗೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.

ಲಿಂಬೆ
ಲಿಂಬೆರಸ ಅತ್ಯುತ್ತಮವಾ ಕಫಹಾರಿಯಾಗಿದ್ದು ವಿಶೇಷವಾಗಿ ಕೆಮ್ಮಿನ ಮೂಲಕ ಎದುರಾಗಿದ್ದ ಗಂಟಲಿನ ಕಿರಿಕಿರಿ ಹಾಗೂ ತುರಿಕೆಯನ್ನು ನಿವಾರಿಸುತ್ತವೆ.

ವೀಳ್ಯದೆಲೆ
ಕೆಲವು ವೀಳ್ಯದೆಲೆಗಳನ್ನು ನುಣ್ಣಗೆ ಅರೆದು ಎದೆಯ ಮೇಲೆ ಹಚ್ಚಿ. ಇದರಿಂದ ನಿಧಾನವಾಗಿ ಕೆಮ್ಮು ಕಡಿಮೆಯಾಗುತ್ತದೆ. ಕೆಮ್ಮು ಎದುರಾದರೆ ರೋಗಿ ಧೂಮಪಾನ, ಮಾಂಸಾಹಾರ, ಸಕ್ಕರೆ, ಟೀ, ಕಾಫಿ ಸಂಸ್ಕರಿತ ಆಹಾರಗಳಿಂದ ದೂರವಿದ್ದಷ್ಟೂ ಒಳ್ಳೆಯದು.



Click it and Unblock the Notifications