Just In
Don't Miss
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಪ್ರಕರಣ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೆರಡು ದಿನಗಳಲ್ಲಿಯೇ ಕೆಮ್ಮು, ಕಫ ಹೋಗಲಾಡಿಸುವ ಮನೆಮದ್ದುಗಳು
ಕೆಮ್ಮು ಒಂದು ವ್ಯಾಧಿಯಲ್ಲ, ಬದಲಿಗೆ ನಮ್ಮ ರೋಗ ನಿರೋಧಕ ವ್ಯವಸ್ಥೆಯ ಒಂದು ಅಂಗವಾಗಿದೆ. ನಮ್ಮ ಶ್ವಾಸನಾಳಗಳ ಒಳಗೆ ಅಂಟಿಕೊಳ್ಳುವ ದ್ರವ ಜಿನುಗುತ್ತದೆ. ಇದು ಗಾಳಿಯಲ್ಲಿ ತೇಲಿ ಬರುವ ರೋಗಾಣುಗಳು ಹಾಗೂ ಧೂಳನ್ನು ಅಂಟಿಸಿಕೊಳ್ಳುವ ಮೂಲಕ ಶ್ವಾಸಕೋಶಗಳ ಒಳಗೆ ಇವುಗಳ ಪ್ರವೇಶವನ್ನು ಪ್ರತಿಬಂಧಿಸುತ್ತದೆ. ಹೀಗೆ ವೈರಾಣುಗಳನ್ನು ಅಂಟಿಸಿಕೊಂಡ ದ್ರವ ಗಟ್ಟಿಯಾಗಿ ಕಫದ ರೂಪ ಪಡೆಯುತ್ತದೆ. ಇದನ್ನು ಕೆರೆದು ನಿವಾರಿಸುವ ಕ್ರಿಯೆಯೇ ಕೆಮ್ಮು.
ಮಧ್ಯರಾತ್ರಿ ಕಾಡುವ ಕೆಮ್ಮು, ಏನು ಮಾಡಬೇಕು?
ಕೆಮ್ಮನ್ನು ನಿವಾರಿಸಬೇಕೆಂದರೆ ಅಂಟಿಕೊಂಡಿರುವ ಈ ಕಫವನ್ನು ನಿವಾರಿಸಬೇಕು. ಕಫ ಗಟ್ಟಿಯಾಗಿದ್ದಷ್ಟೂ ಇದನ್ನು ನಿವಾರಿಸಲು ಕಷ್ಟವಾಗುತ್ತಾ ಕೆಮ್ಮು ಅನವರತವಾಗುತ್ತದೆ. ಕೆಲವು ಸಾಮಾಗ್ರಿಗಳು ಈ ಕಫವನ್ನು ಸಡಿಲಿಸಲು ಸಮರ್ಥವಾಗಿವೆ. ಮಾರುಕಟ್ಟೆಯಲ್ಲಿ ಕೆಮ್ಮಿನ ಸಿರಪ್ಗಳು ಸಿಗುತ್ತವೆ.
ಇದು ಕೆಮ್ಮಿನ ಔಷಧ- ಒಂದೇ ದಿನದಲ್ಲಿ ಕೆಮ್ಮು ಮಂಗಮಾಯ!
ಬಾದಾಮಿ
ಕೆಮ್ಮು ನಿವಾರಿಸಲು ಬಲು ಪ್ರಾಚೀನವಾದ ವಿಧಾನವೆಂದರೆ ಬಾದಾಮಿ ಅರೆದು ಸೇವಿಸುವುದು. ಸುಮಾರು ಏಳೆಂಟು ಬಾದಾಮಿಗಳನ್ನು ರಾತ್ರಿಯಿಡೀ ತಣ್ಣೀರಿನಲ್ಲಿ ನೆನೆಸಿಡಿ. ಮರುದಿನ ಸಿಪ್ಪೆ ಸುಲಿದು ನುಣ್ಣಗೆ ಅರೆಯಿರಿ. ಇದಕ್ಕೆ ಕೊಂಚ ಬೆಣ್ಣೆ ಮತ್ತು ಸಕ್ಕರೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.
ನೆನೆಸಿಟ್ಟ ಬಾದಾಮಿ ಬೀಜದ ಚಮತ್ಕಾರಕ್ಕೆ ಬೆರಗಾಗಲೇಬೇಕು!
ಈರುಳ್ಳಿ
ಈರುಳ್ಳಿಯನ್ನು ಹೆಚ್ಚಿ ಜಜ್ಜಿ ಹಿಂಡಿ ರಸವನ್ನು ಸೇವಿಸುವ ಮೂಲಕ ಕೆಮ್ಮು ಕಡಿಮೆಯಾಗುವುದು ಮಾತ್ರವಲ್ಲ ಕಟ್ಟಿಕೊಂಡಿರುವ ಎದೆಯೂ ಸಡಿಲಗೊಳ್ಳುತ್ತದೆ. ಪ್ರತಿ ಆರು ಗಂಟೆಗಳಿಗೊಮ್ಮೆ ಒಂದರಿಂದ ಎರಡು ಚಿಕ್ಕ ಚಮಚ ಈರುಳ್ಳಿ ರಸವನ್ನು ಸಮಪ್ರಮಾಣದ ಜೇನಿನೊಂದಿಗೆ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಿ.
ಲಿಂಬೆ
ಲಿಂಬೆರಸ ಅತ್ಯುತ್ತಮವಾ ಕಫಹಾರಿಯಾಗಿದ್ದು ವಿಶೇಷವಾಗಿ ಕೆಮ್ಮಿನ ಮೂಲಕ ಎದುರಾಗಿದ್ದ ಗಂಟಲಿನ ಕಿರಿಕಿರಿ ಹಾಗೂ ತುರಿಕೆಯನ್ನು ನಿವಾರಿಸುತ್ತವೆ.
ವೀಳ್ಯದೆಲೆ
ಕೆಲವು ವೀಳ್ಯದೆಲೆಗಳನ್ನು ನುಣ್ಣಗೆ ಅರೆದು ಎದೆಯ ಮೇಲೆ ಹಚ್ಚಿ. ಇದರಿಂದ ನಿಧಾನವಾಗಿ ಕೆಮ್ಮು ಕಡಿಮೆಯಾಗುತ್ತದೆ. ಕೆಮ್ಮು ಎದುರಾದರೆ ರೋಗಿ ಧೂಮಪಾನ, ಮಾಂಸಾಹಾರ, ಸಕ್ಕರೆ, ಟೀ, ಕಾಫಿ ಸಂಸ್ಕರಿತ ಆಹಾರಗಳಿಂದ ದೂರವಿದ್ದಷ್ಟೂ ಒಳ್ಳೆಯದು.