Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಹಣ್ಣು-ತರಕಾರಿಗಳಲ್ಲಿ ಔಷಧೀಯ ಗುಣಗಳಿವೆ, ನಿರ್ಲಕ್ಷ್ಯ ಬೇಡ...
ಪ್ರತಿ ಹಣ್ಣು ತರಕಾರಿಯಲ್ಲಿಯೂ ಒಂದೊಂದು ಔಷಧೀಯ ಗುಣವಿದ್ದು ಆರೋಗ್ಯವನ್ನು ವೃದ್ಧಿಸುತ್ತದೆ.
ನಮ್ಮ ಆರೋಗ್ಯಕ್ಕೆ ಹಣ್ಣು ಮತ್ತು ತರಕಾರಿಗಳು ಅವಶ್ಯ. ಏಕೆಂದರೆ ಇವುಗಳು ಆಹಾರ ಒದಗಿಸುವ ಜೊತೆಗೇ ಔಷಧಿ ನೀಡುವ ಸೇವೆಯನ್ನೂ ನೀಡುತ್ತವೆ. ಪ್ರತಿ ಹಣ್ಣು ತರಕಾರಿಯಲ್ಲಿಯೂ ಒಂದೊಂದು ಔಷಧೀಯ ಗುಣವಿದ್ದು ಆರೋಗ್ಯವನ್ನು ವೃದ್ಧಿಸುತ್ತದೆ. ನಿತ್ಯ ಹಣ್ಣು-ತರಕಾರಿ ತಿಂದು ಸಂತೋಷವಾಗಿರಿ
ಕೆಲವು ಅಲ್ಪಾವಧಿಯ ಪರಿಣಾಮ ನೀಡಿದರೆ ಕೆಲವು ದೀರ್ಘಾವಧಿಯ ಪರಿಣಾಮವನ್ನು ನೀಡುತ್ತವೆ. ಇದೇ ಕಾರಣಕ್ಕೆ ನಿಮ್ಮ ಆಹಾರದಲ್ಲಿ ಸಾಕಷ್ಟು ಹಣ್ಣು ಮತ್ತು ತರಕಾರಿಗಳಿರಬೇಕು ಎಂದು ವೈದ್ಯರು ತಿಳಿಸುತ್ತಾರೆ. ಇವುಗಳು ಆರೋಗ್ಯವನ್ನು ವೃದ್ಧಿಸುವ ಜೊತೆಗೇ ಹೆಚ್ಚಿನ ಆಯಸ್ಸು ಹೊಂದಲೂ ನೆರವಾಗುತ್ತವೆ. ಬನ್ನಿ, ಕೆಲವು ಪ್ರಮುಖ ಹಣ್ಣು ಮತ್ತು ತರಕಾರಿಗಳ ಔಷಧೀಯ ಗುಣಗಳ ಬಗ್ಗೆ ಅರಿಯೋಣ...

ಸೇಬು ಹಣ್ಣು
ಸೇಬಿನ ಸೇವನೆಯಿಂದ ಹೃದಯ ಉತ್ತಮಗೊಳ್ಳುತ್ತದೆ. ಇವುಗಳಲ್ಲಿರುವ ಕರಗದ ನಾರು ಅತಿಸಾರದಿಂದ, ಮಲಬದ್ಧತೆಯಿಂದ ರಕ್ಷಿಸುತ್ತದೆ ಹಾಗೂ ಶ್ವಾಸಕೋಶದ ಕ್ಯಾನ್ಸರ್ ಬರುವುದರಿಂದ ಕಾಪಾಡುತ್ತದೆ. ಅಲ್ಲದೇ ಮೂಳೆಗಳ ಸಂಧುಗಳನ್ನೂ ದೃಢಗೊಳಿಸುತ್ತದೆ.ದಿನಕ್ಕೊಂದು ಸೇಬು ಬಿಪಿ -ಹೃದಯ ಕಾಯಿಲೆಗಳನ್ನು ದೂರವಿಡುವುದು

ಬೀನ್ಸ್
ಕನ್ನಡದಲ್ಲಿ ತಿಂಗಳಾವರೆ ಎಂದು ಕರೆಯಲ್ಪಡುವ ಬೀನ್ಸ್ ಅನ್ನು ಹಸಿಯಾಗಿಯೇ ತಿನ್ನುವ ಮೂಲಕ ಕೊಲೆಸ್ಟ್ರಾಲ್ ನಿವಾರಿಸಲು ಸಾಧ್ಯವಾಗುತ್ತದೆ. ಅಲ್ಲದೇ ಮಲಬದ್ಧತೆ, ದೊಡ್ಡಕರುಳಿನ ಒಳಭಾಗದ ಗಂಟುಗಳು (hemorrhoids) ಮೊದಲಾದವುಗಳಿಗೆ ಔಷಧಿಯಂತೆ ಕೆಲಸ ಮಾಡುತ್ತದೆ. ಅಲ್ಲದೇ ಕೆಲವು ಬಗೆಯ ಕ್ಯಾನ್ಸರ್ ಬರುವುದರ ವಿರುದ್ಧ ರಕ್ಷಣೆ ನೀಡುತ್ತದೆ. ಕೆಲವೊಮ್ಮೆ ಹಠಾತ್ತಾಗಿ ಏರುವ ಸಕ್ಕರೆಯ ಮಟ್ಟವನ್ನೂ ನಿಯಂತ್ರಿಸುತ್ತದೆ. ಸರಳ ತಯಾರಿಕೆಯ ಹರಿಕಾರ ಆಲೂ-ಬೀನ್ಸ್ ಪಲ್ಯ

ಆಪ್ರಿಕಾಟ್
ಈ ಹಣ್ಣುಗಳಿಗೆ ಕ್ಯಾನ್ಸರ್ ತಡೆಯುವ ಶಕ್ತಿಯಿದೆ. ಅಲ್ಲದೇ ಇವುಗಳ ಸೇವನೆಯಿಂದ ಕಣ್ಣುಗಳ ದೃಷ್ಟಿ ಉತ್ತಮಗೊಳ್ಳುತ್ತದೆ, ರಕ್ತದ ಒತ್ತಡ ನಿಯಂತ್ರಣದಲ್ಲಿರುತ್ತದೆ, ಸಂಧಿವಾತ ಅಥವಾ ಅಲ್ಜೀಮರ್ಸ್ ಕಾಯಿಲೆ ಬರುವ ಸಾಧ್ಯತೆಯನ್ನು ಕಡಿಮೆಗೊಳಿಸುತ್ತದೆ ಹಾಗೂ ದೇಹಕ್ಕೆ ವಯಸ್ಸಾಗುವ ಗತಿಯನ್ನು ನಿಧಾನಗೊಳಿಸುತ್ತದೆ.

ಬಾಳೆಹಣ್ಣು
ಬಾಳೆಹಣ್ಣಿನ ಸೇವನೆಯಿಂದ ಹೃದಯದ ಕ್ಷಮತೆ ಹೆಚ್ಚುತ್ತದೆ ಹಾಗೂ ಮೂಳೆಗಳೂ ದೃಢಗೊಳ್ಳುತ್ತವೆ. ಅಲ್ಲದೇ ಕೆಮ್ಮನ್ನು ಕಡಿಮೆ ಮಾಡುವುದು, ಅಧಿಕ ರಕ್ತದೊತ್ತಡ ಕಡಿಮೆಗೊಳಿಸುವುದು ಹಾಗೂ ಅತಿಸಾರವಾಗದಂತೆ ತಡೆಯುವುದು ಮೊದಲಾದವು ಬಾಳೆಹಣ್ಣು ಸೇವಿಸುವ ಪಡೆಯುವ ಪ್ರಯೋಜನಗಳಾಗಿವೆ.ದಿನಕ್ಕೆರಡು ಬಾಳೆಹಣ್ಣು ಸೇವಿಸಿ, ವೈದ್ಯರಿಂದ ದೂರವಿರಿ!

ಬೆಣ್ಣೆಹಣ್ಣು (Avocado)
ಈ ಹಣ್ಣಿನ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ, ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ, ಪಾರ್ಶ್ವವಾಯು ಬರುವುದರಿಂದ ರಕ್ಷಿಸುತ್ತದೆ ಹಾಗೂ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.ಬೆಣ್ಣೆ ಹಣ್ಣು ತಿನ್ನಿ, ವೈದ್ಯರಿಂದ ದೂರವಿರಿ!

ಕ್ಯಾರೆಟ್
ಕಣ್ಣುಗಳಿಗೆ ಕ್ಯಾರೆಟ್ ಉತ್ತಮವಾಗಿದ್ದು ಹೃದಯದ ಆರೋಗ್ಯ ಉತ್ತಮವಾಗಿರಲು ಸಹಕರಿಸುತ್ತದೆ. ಅಲ್ಲದೇ ಕ್ಯಾರೆಟ್ ಸೇವನೆಯಿಂದ ಮಲಬದ್ದತೆಯಾಗದಂತೆ ನೋಡಿಕೊಳ್ಳಬಹುದು. ಕ್ಯಾರೆಟ್ ಸೇವನೆಯಿಂದ ಕೆಲವು ಬಗೆಯ ಕ್ಯಾನ್ಸರ್ ಬರದಂತೆ ತಡೆಗಟ್ಟಲು ಹಾಗೂ ತೂಕ ಇಳಿಸಿಕೊಳ್ಳಲೂ ನೆರವಾಗುತ್ತದೆ.ಲವಲವಿಕೆಯ ಆರೋಗ್ಯಕ್ಕೆ, 'ಕ್ಯಾರೆಟ್' ಹೇಳಿ ಮಾಡಿಸಿದ ತರಕಾರಿ

ಬೀಟ್ರೂಟ್
ಈ ತರಕಾರಿಯ ರಸದ ಸೇವನೆಯಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತದೆ. ಅಲ್ಲದೇ ಮೂಳೆಗಳು ದೃಢಗೊಳ್ಳುತ್ತವೆ, ಕೆಲವು ವಿಧದ ಕ್ಯಾನ್ಸರ್ ಬರದಂತೆ ತಡೆಗಟ್ಟುತ್ತದೆ, ಹೃದಯದ ಕ್ಷಮತೆಯನ್ನು ಹೆಚ್ಚಿಸುತ್ತದೆ ಹಾಗೂ ತೂಕ ಇಳಿಸಲು ನೆರವಾಗುತ್ತದೆ.ಅಬ್ಬಬ್ಬಾ ಬೀಟ್ರೂಟ್ನಲ್ಲಿ ಇಷ್ಟೆಲ್ಲಾ ಪ್ರಯೋಜನಗಳಿವೆಯೇ..?

ಬ್ಲೂ ಬೆರ್ರೀಸ್
ಇವುಗಳ ಸೇವನೆಯಿಂದ ಹೃದಯಕ್ಕೆ ಎದುರಾಗುವ ತೊಂದರೆಗಳಿಂದ ರಕ್ಷಣೆ ಪಡೆಯಬಹುದು. ಅಲ್ಲದೇ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣದ ನಿಯಂತ್ರಣ ಹಾಗೂ ಸ್ಮರಣಶಕ್ತಿ ಹೆಚ್ಚಿವುವುದು ಹಾಗೂ ಮಲಬದ್ದತೆಯಿಂದ ಕಾಪಾಡುವುದು ಈ ಹಣ್ಣುಗಳ ಸೇವನೆಯ ಇತರ ಪ್ರಯೋಜನಗಳಾಗಿವೆ.



Click it and Unblock the Notifications










