Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಮೊಣಕಾಲು ನೋವು ನಿವಾರಣೆಗೆ ನೈಸರ್ಗಿಕ ಆಯುರ್ವೇದ ಚಿಕಿತ್ಸೆ
ಮಂಡಿನೋವಿನಿಂದಾಗಿ ದೈನಂದಿನ ಚಟುವಟಿಕೆಗಳು ಕೂಡ ಅಸಾಧ್ಯವಾಗುತ್ತದೆ. ಕೆಲವೊಂದು ಸಲ ಮಂಡಿನೋವನ್ನು ಕಡಿಮೆ ಮಾಡಲು ಶಸ್ತ್ರಚಿಕಿತ್ಸೆ ಕೂಡ ಮಾಡಬೇಕಾಗುತ್ತದೆ. ಆದರೆ ಆಯುರ್ವೇದದ ಮೂಲಕ ಮಂಡಿನೋವನ್ನು ಕಡಿಮೆ ಮಾಡಬಹುದು.
ವಯಸ್ಸಾಗುತ್ತಿರುವಂತೆ ಮೂಳೆಗಳು ದುರ್ಬಲಗೊಳ್ಳುವ ಕಾರಣದಿಂದಾಗಿ ಮೊಣಕಾಲು ನೋವು ಅಥವಾ ಮಂಡಿ ನೋವು ಆರಂಭವಾಗುವುದು ಸಹಜ. ಇದರಿಂದಾಗಿ ಯಾವುದೇ ಕೆಲಸಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ನೋವು ತಡೆಯಲಾರದಷ್ಟು ಇರುತ್ತದೆ. ಇಂತಹ ನೋವನ್ನು ಸಹಿಸಿಕೊಂಡು ಜೀವನ ಸಾಗಿಸುವುದು ಕಷ್ಟದ ಕೆಲಸ. ಯಮಯಾತನೆ ನೀಡುವ ಮೊಣಕಾಲು ನೋವಿಗೆ ಪರಿಹಾರವೇನು?
ಸಾಮಾನ್ಯವಾಗಿ ಸ್ನಾಯುಗಳು ಮತ್ತು ಅಂಗಾಂಶಗಳು ದುರ್ಬಲವಾಗುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಅದರಲ್ಲೂ ಪ್ರಮುಖವಾಗಿ ಮೊಣಕಾಲು ನೋವು ವಯಸ್ಸಾಗುವ ಸಮಯದಲ್ಲಿ ಜೀವನವನ್ನು ದುಸ್ತರ ಮಾಡಿಬಿಡುತ್ತದೆ. ದೈನಂದಿನ ಚಟುವಟಿಕೆಗಳು ಕೂಡ ಮಂಡಿನೋವಿನಿಂದಾಗಿ ಅಸಾಧ್ಯವಾಗುತ್ತದೆ. ಮೊಣಕಾಲು ನೋವನ್ನು ನಿವಾರಿಸಲು 5 ಸಲಹೆಗಳು

ಕೆಲವೊಂದು ಸಲ ಮೊಣಕಾಲು ನೋವನ್ನು ಕಡಿಮೆ ಮಾಡಲು ಶಸ್ತ್ರಚಿಕಿತ್ಸೆ ಕೂಡ ಮಾಡಬೇಕಾಗುತ್ತದೆ. ಆದರೆ ಆಯುರ್ವೇದದ ಮೂಲಕ ಮೊಣಕಾಲು ನೋವನ್ನು ಕಡಿಮೆ ಮಾಡಬಹುದು. ಆ ಆಯುರ್ವೇದದ ಔಷಧಿ ಯಾವುದು ಎಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ.
ಬೇಕಾಗುವ ಸಾಮಗ್ರಿಗಳು
ಅರಿಶಿನ 2 ಚಮಚ
ಆ್ಯಪಲ್ ಸೀಡರ್ ವಿನೇಗರ್ 2 ಚಮಚ
ಅರಿಶಿನದಲ್ಲಿ ಇರುವಂತಹ ಕರ್ಕ್ಯುಮಿನ್ ನಂತಹ ಅಂಶವು ಉರಿಯೂತ ಶಮನಕಾರಿ ಗುಣವನ್ನು ಹೊಂದಿದೆ. ಇದು ಸಂಧಿಯ ಸ್ನಾಯುಗಳಲ್ಲಿ ಕಾಣಿಸಿಕೊಳ್ಳುವ ಊತವನ್ನು ಕಡಿಮೆ ಮಾಡುತ್ತದೆ. ಇದರಿಂದ ನೋವು ಕಡಿಮೆಯಾಗುವುದು.
ಆ್ಯಪಲ್ ಸೀಡರ್ ವಿನೇಗರ್ನಲ್ಲಿ ಆ್ಯಂಟಿಆಕ್ಸಿಡೆಂಟ್ ಸಮೃದ್ಧವಾಗಿದೆ. ಇದು ಗಂಟುಗಳಲ್ಲಿ ಕೀಲೆಣ್ಣೆಯನ್ನು ಉತ್ಪತ್ತಿ ಮಾಡುತ್ತದೆ. ಇದರಿಂದ ನೋವು ಕಡಿಮೆಯಾಗುತ್ತದೆ. ಮಂಡಿ ನೋವೇ? ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದು
ತಯಾರಿಸುವ ವಿಧಾನ
*ಹೇಳಿದಷ್ಟು ಪ್ರಮಾಣದ ಸಾಮಗ್ರಿಗಳನ್ನು ಒಂದು ಕಪ್ಗೆ ಹಾಕಿಕೊಳ್ಳಿ.
*ಇದನ್ನು ಸರಿಯಾಗಿ ಮಿಶ್ರಣ ಮಾಡಿಕೊಳ್ಳಿ.
*ಈಗ ಮದ್ದು ಸೇವಿಸಲು ತಯಾರಾಗಿದೆ.
*ಪ್ರತೀ ನಿತ್ಯ ರಾತ್ರಿ ಊಟದ ಬಳಿಕ ಎರಡು ತಿಂಗಳ ಕಾಲ ಸೇವಿಸಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



