Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ದಿನಕ್ಕೊಂದು ಗ್ಲಾಸ್ ಅರಿಶಿನ ಬೆರೆಸಿದ ನೀರು- ಆರೋಗ್ಯ ಗಟ್ಟಿ-ಮುಟ್ಟು
ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಏನಾದರೂ ಮಾಡುತ್ತಲೇ ಇರಬೇಕಾಗುತ್ತದೆ. ಅದರಲ್ಲೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಾವು ತೆಗೆದುಕೊಳ್ಳುವಂತಹ ಕೆಲವೊಂದು ಆಹಾರಗಳು, ಪಾನೀಯ ನಮ್ಮ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಇದಕ್ಕಾಗಿಯೇ ನಾವು ಬೆಳಿಗ್ಗೆ ಎದ್ದು ಬಿಸಿ ನೀರಿಗೆ ಲಿಂಬೆ ರಸ ಹಾಕಿ ಕುಡಿಯುವುದು, ಯಾವುದಾದರೂ ಹಣ್ಣುಗಳು ಜ್ಯೂಸ್ ಕುಡಿಯುವುದು ನಮ್ಮ ದೇಹಕ್ಕೆ ಒಳ್ಳೆಯದೇ. ಆದರೆ ನಾವು ಅಡುಗೆಯಲ್ಲಿ ಬಳಸುವಂತಹ ಅರಿಶಿನವು ನಮ್ಮ ಆರೋಗ್ಯಕ್ಕೆ ತುಂಬಾ ಪರಿಣಾಮಕಾರಿ ಎಂದು ನಿಮಗೆ ತಿಳಿದಿದೆಯಾ?
ಹೌದು, ಇದರಲ್ಲಿರುವ ಊರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ಗಳು, ಆಗಾಧ ಪ್ರಮಾಣದಲ್ಲಿರುವುದರಿಂದ. ಅರಿಶಿನ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅದರಲ್ಲೂ ಕರ್ಕ್ಯೂಮಿನಂತಹ ಅಂಶವು ವೈಜ್ಞಾನಿಕ ವಲಯದಲ್ಲಿ ಅರಿಶಿನಕ್ಕೆ ಒಂದು ಉನ್ನತ ಸ್ಥಾನವನ್ನು ನೀಡಿದೆ. ಅರಿಶಿನಲ್ಲಿ ಶಮನಕಾರಿ ಗುಣಗಳು ಇವೆ ಎನ್ನುವುದು ಇತ್ತೀಚಿನ ಕೆಲವೊಂದು ಅಧ್ಯಯನಗಳಿಂದ ತಿಳಿದುಬಂದಿದೆ. ಹಾಗಾದರೆ ಅರಿಶಿನದ ನೀರನ್ನು ಮಾಡುವುದು ಹೇಗೆ ಎನ್ನುವುದು ನೀವು ತಿಳಿದುಕೊಳ್ಳಿ.....
ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಒಂದು ಚಿಕ್ಕ ಚಮಚ ಅರಿಶಿನ, ಕೊಂಚ ಲಿಂಬೆರಸ ಹಾಗೂ ಕೊಂಚ ಜೇನು ಬೆರೆಸಿದರೆ ಹಲವು ಕಾಯಿಲೆಗಳನ್ನು ಗುಣಪಡಿಸಬಲ್ಲ ಸಿದ್ಧೌಷದ ತಯಾರಾದಂತೆ. ಇದನ್ನು ಸರಿಯಾಗಿ ಕಳಸಿ, ಬೆಳಗ್ಗಿನ ವೇಳೆ ಬಿಸಿ ಇರುವಾಗಲೇ ಬರೀ ಹೊಟ್ಟೆಗೆ ಸೇವಿಸಿ....

ಮಧುಮೇಹವನ್ನು ನಿಯಂತ್ರಣದಲ್ಲಿರಿಸುತ್ತದೆ
ಅರಿಶಿನದ ನೀರು ಸೇವಿಸುವ ಮೂಲಕ ಇನ್ಸುಲಿನ್ ಪ್ರಮಾಣವನ್ನು ಕಡಿಮೆಗೊಳಿಸುತ್ತದೆ ಹಾಗೂ ಈ ಮೂಲಕ ಟೈಪ್ 2 ಮಧುಮೇಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಲು ಸಾಧ್ಯವಾಗುತ್ತದೆ.

ಉರಿಯೂತ ನಿವಾರಕ ಹಾಗೂ ಆಂಟಿ ಆಕ್ಸಿಡೆಂಟ್ ಗುಣಗಳು
ಒಂದು ವೇಳೆ ಉರಿಯೂತ ತೀರಾ ಹೆಚ್ಚಾಗಿದ್ದರೆ ಪ್ರಾಣಾಪಾಯವೂ ಉಂಟಾಗಬಹುದು...ಅರಿಶಿನದಲ್ಲಿರುವ ಕುರ್ಕುಮಿನ್ ಅತ್ಯುತ್ತಮ ಉರಿಯೂತ ನಿವಾರಕವಾಗಿದ್ದು ಹಲವಾರು ಉರಿಯೂತಗಳಿಂದ ರಕ್ಷಿಸುತ್ತದೆ.

ಸಂಧಿವಾತದಿಂದ ಶಮನ ನೀಡುತ್ತದೆ...
ಅರಿಶಿನ ಬೆರೆಸಿದ ನೀರು ಕುಡಿಯುವ ಮೂಲಕ ದೇಹಕ್ಕೆ ಹಾನಿ ಮಾಡುವ ಫ್ರೀ ರ್ಯಾಡಿಕಲ್ ಎಂಬ ಕಣಗಳು ದೇಹದ ಜೀವಕೋಶಗಳನ್ನು ಇನ್ನಷ್ಟು ಘಾಸಿಗೊಳಿಸುವುದರಿಂದ ರಕ್ಷಿಸುತ್ತದೆ. ತನ್ಮೂಲಕ ಸಂಧಿವಾತ ಹಾಗೂ ಉರಿಯಿಂದ ಕೂಡಿದ್ದ ಗಂಟುಗಳ ಕಷ್ಟವನ್ನು ನಿವಾರಿಸುತ್ತದೆ.

ಹೃದಯ ಸಂಬಂಧಿ ತೊಂದರೆಗಳಿಂದ ರಕ್ಷಿಸುತ್ತದೆ
ನರಗಳ ಒಳಗೆ ಅಂಟಿಕೊಳ್ಳುವ ಜಿಡ್ಡನ್ನು ತಡೆಯಲು ಕುರ್ಕುಮಿನ್ ನೆರವಾಗುತ್ತದೆ. ಈ ಮೂಲಕ ಹೃದಯದ ಮೇಲೆ ಬೀಳುವ ಒತ್ತಡವನ್ನು ಕಡಿಮೆಗೊಳಿಸಿ ಹಲವಾರು ಹೃದಯಸಂಬಂಧಿ ತೊಂದರೆಗಳಿಂದ ರಕ್ಷಿಸುತ್ತದೆ.

ಕ್ಯಾನ್ಸರ್ ಆವರಿಸುವುದರಿಂದ ರಕ್ಷಣೆ ನೀಡುತ್ತದೆ
ಒಮ್ಮೆ ಕ್ಯಾನ್ಸರ್ಗೆ ಒಳಗಾದ ಜೀವಕೋಶಗಳು ಪ್ರಾರಂಭವಾದರೆ ಇದು ಬೆಳೆದು ಹರಡಲು ಹೆಚ್ಚು ಸಮಯ ಬೇಕಾಗಿಲ್ಲ. ಆದರೆ ಅರಿಶಿನ ಬೆರೆತ ನೀರನ್ನು ಕುಡಿಯುತ್ತಾ ಬರುವ ಮೂಲಕ ಈ ಜೀವಕೋಶಗಳು ಮುಂದಕ್ಕೆ ಬೆಳೆಯದಂತೆ ಹಾಗೂ ಉಳಿದ ಭಾಗಗಳಿಗೆ ಹರಡದಂತೆ ತಡೆಯುವ ಮೂಲಕ ಕೆಲವು ಬಗೆಯ ಕ್ಯಾನ್ಸರ್ಗಳಿಂದ ರಕ್ಷಣೆ ನೀಡುತ್ತದೆ.



Click it and Unblock the Notifications
