Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕಲ್ಲಂಗಡಿ ಜ್ಯೂಸ್: ಬೇಸಿಗೆಗೆ ದೇವರು ಕೊಟ್ಟಿರುವ ವರ!!
ಉರಿ ಬೇಸಿಗೆ ಸಮಯಕ್ಕಿಂತ ಮೊದಲೇ ಶುರುವಾಗಿದೆ. ಈಗಾಗಲೇ ದೆಹಲಿ ಹಾಗೂ ಕೆಲವೊಂದು ಕಡೆಗಳಲ್ಲಿ ಉರಿಬಿಸಿಲಿನಿಂದ ಪ್ರಾಣ ಕಳೆದುಕೊಂಡ ಬಗ್ಗೆ ಕೂಡ ಸುದ್ದಿಯಾಗಿದೆ. ಉಷ್ಣಾಂಶ 40 ಡಿಗ್ರಿಗಿಂತಲೂ ಹೆಚ್ಚಾದಾಗ ಹೊರಗಡೆ ಹೋಗುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಪ್ರಮುಖವಾಗಿ ದೇಹದಲ್ಲಿ ಹೆಚ್ಚಿನ ನೀರಿನಾಂಶ ಇರುವಂತೆ ನೋಡಿಕೊಳ್ಳಬೇಕು. ನೀರಿನ ಅಂಶ ಕಡಿಮೆಯಾದಾಗ ದೇಹವು ಬೇಗನೆ ಬಿಸಿಲಿನ ತಾಪಕ್ಕೆ ಬಲಿಯಾಗುತ್ತದೆ. ಬಿರು ಬೇಸಿಗೆಗೆ ತಂಪಾದ ಮಸಾಲಾ ಕಲ್ಲಂಗಡಿ ಜ್ಯೂಸ್!
ನೀರಿನೊಂದಿಗೆ ಹಣ್ಣಿನ ಜ್ಯೂಸ್ ಇತ್ಯಾದಿಗಳನ್ನು ಕುಡಿಯುತ್ತಾ ಇರಬೇಕು. ಅದರಲ್ಲೂ ಕಲ್ಲಂಗಡಿ ಜ್ಯೂಸ್ ಬೇಸಿಗೆಗೆ ದೇವರು ಕೊಟ್ಟಿರುವ ವರ ಎಂದರೆ ತಪ್ಪಾಗಲಾರದು. ಯಾಕೆಂದರೆ ಕಲ್ಲಂಗಡಿಯಲ್ಲಿ ಇತರ ಹಣ್ಣುಗಳಿಗಿಂತ ಹೆಚ್ಚಿನ ನೀರಿನಾಂಶವಿದೆ. ಇಷ್ಟು ಮಾತ್ರವಲ್ಲದೆ ಬೆಟಾ ಕ್ಯಾರೋಟಿನ್, ವಿಟಮಿನ್ ಎ, ಬಿ1, ಬಿ6, ಸಿ, ಪೊಟಾಶಿಯಂ, ಮೆಗ್ನಿಶಿಯಂ, ಬಿಯೊಟಿನ್ ಇತ್ಯಾದಿಗಳಿವೆ. ಬಿಸಿಲಿನ ಝಳಕ್ಕೆ, ತಂಪುಣಿಸುವ ಕಲ್ಲಂಗಡಿ ಹಣ್ಣು
ಕಲ್ಲಂಗಡಿಯಲ್ಲಿ ಸುಮಾರು 92 ಶೇ. ನೀರಿನಾಂಶವಿರುವ ಕಾರಣದಿಂದಾಗಿ ಇದು ಬೇಸಿಗೆ ಹೇಳಿ ಮಾಡಿಸಿದ ಹಣ್ಣಾಗಿದೆ. ಉರಿ ಬಿಸಿಲಿನಿಂದ ದೂರ ಉಳಿಯಲು ಕಲ್ಲಂಗಡಿ ಹಣ್ಣನ್ನು ಹಾಗೆ ತಿನ್ನಬಹುದು ಅಥವಾ ಜ್ಯೂಸ್, ಸಲಾಡ್ ಮಾಡಿಕೊಂಡು ತಿನ್ನಬಹುದು. ಇದರಿಂದ ದೇಹವು ನಿರ್ಜಲೀಕರಣದಿಂದ ಬಳಲುವುದು ತಪ್ಪುತ್ತದೆ....

ತೇವಾಂಶದಿಂದ ಇಡುವುದು
ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಸೇವಿಸಿದರೆ ಅದರಲ್ಲಿ ಇರುವಂತಹ ಹೆಚ್ಚಿನ ನೀರಿನಾಂಶವು ದೇಹವನ್ನು ತೇವಾಂಶದಿಂದ ಇಡುವುದು. ಬೇಸಿಗೆಯಲ್ಲಿ ದೇಹದಲ್ಲಿನ ನೀರಿನಾಂಶವು ವೇಗವಾಗಿ ಕಡಿಮೆಯಾಗುತ್ತದೆ. ಕಲ್ಲಂಗಡಿ ಹಣ್ಣನ್ನು ಆಹಾರ ಕ್ರಮದಲ್ಲಿ ಸೇರಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ದೇಹದ ಕಲ್ಮಶ ಹೊರಹಾಕುವುದು
ಬೇಸಿಗೆ ಕಾಲದಲ್ಲಿ ಹೆಚ್ಚಿನ ಬೆವರು ಹೊರಹೋಗಿ ನೀರಿನಾಂಶವು ಕಡಿಮೆಯಾಗುವುದು. ಆದರೆ ಈ ವೇಳೆ ವಿಷವು ಸರಿಯಾಗಿ ಹೊರಹೋಗುವುದಿಲ್ಲ. ಹಲವಾರು ಪೋಷಕಾಂಶಗಳಿಂದ ಕೂಡಿರುವಂತಹ ಕಲ್ಲಂಗಡಿ ಹಣ್ಣು ನೈಸರ್ಗಿಕವಾಗಿ ದೇಹದ ಕಲ್ಮಶ ಹೊರಹಾಕಿ ಎಲ್ಲಾ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ದೇಹದಿಂದ ಕಲ್ಮಶ ಹೊರಹಾಕಲು ಸೇವಿಸಿ ಕಲ್ಲಂಗಡಿ ಸ್ಮೂತಿ

ಕಾಂತಿಯುತ ಚರ್ಮಕ್ಕಾಗಿ
ವಿಟಮಿನ್ ಎ ಹಾಗೂ ಸಿಯ ಕೊರತೆಯಿಂದ ನಿಮ್ಮ ಚರ್ಮವು ತುಂಬಾ ಒಣ ಹಾಗೂ ಚರ್ಮ ಎದ್ದುಬಂದಂತೆ ಕಾಣಬಹುದು. ಇದನ್ನು ನೈಸರ್ಗಿಕವಾಗಿ ನಿವಾರಣೆ ಮಾಡಬೇಕಾದರೆ ನಿಮ್ಮ ಆಹಾರ ಕ್ರಮದಲ್ಲಿ ಕಲ್ಲಂಗಡಿ ಹಣ್ಣನ್ನು ಸೇರಿಸಿಕೊಳ್ಳಿ. ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಬೆಟಾ ಕ್ಯಾರೋಟಿನ್ ಮತ್ತು ಲೈಕೊಪೆನ್ ಸೂರ್ಯನಿಂದ ಅಗುವಂತಹ ಸುಟ್ಟ ಕಲೆಗಳನ್ನು ನಿವಾರಣೆ ಮಾಡುವುದು.

ಜೀರ್ಣಕ್ರಿಯೆ ಸುಧಾರಣೆ
ಬೇಸಿಗೆಯಲ್ಲಿ ಅತಿಯಾದ ಸೆಕೆಯಿಂದ ಹಸಿವು ಕೂಡ ಸರಿಯಾಗಿ ಆಗುವುದಿಲ್ಲ. ಕಲ್ಲಂಗಡಿ ಹಣ್ಣಿನಲ್ಲಿ ಹೆಚ್ಚಿನ ನೀರು ಮತ್ತು ನಾರಿನಾಂಶವು ಇರುವ ಕಾರಣದಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು. ಇದು ಕಲ್ಲಂಗಡಿಯ ಮತ್ತೊಂದು ಆರೋಗ್ಯ ಲಾಭವಾಗಿದೆ.

ಸುಂದರ ಕೂದಲಿಗಾಗಿ
ಉರಿ ಬಿಸಿಲಿನಲ್ಲಿ ಕೂದಲಿನ ಆರೈಕೆ ಬಗ್ಗೆ ತಲೆ ಚಿಂತೆಯಾಗಿದ್ದರೆ ಇದನ್ನು ಬಿಟ್ಟು ಕೇವಲ ಕಲ್ಲಂಗಡಿ ಹಣ್ಣನ್ನು ಸೇವಿಸುವತ್ತ ಗಮನಹರಿಸಿ. ಕಲ್ಲಂಗಡಿ ಹಣ್ಣಿನಲ್ಲಿರುವ ವಿಟಮಿನ್ ಸಿ ದೇಹವು ಕೆರ್ಟೈನ್ ಉತ್ಪತ್ತಿಸುವಂತೆ ಮಾಡುತ್ತದೆ. ಇದರಿಂದ ಕೂದಲು ತುಂಬಾ ಸುಂದರ ಹಾಗೂ ಬಲಗೊಳ್ಳುತ್ತದೆ.

ರಕ್ತದೊತ್ತಡ ನಿಯಂತ್ರಿಸುವುದು
ಕಲ್ಲಂಗಡಿಯು ರಕ್ತದೊತ್ತಡವನ್ನು ನಿವಾರಿಸುವಲ್ಲಿ ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತನಾಳಗಳನ್ನು ಸರಿಯಾಗಿಟ್ಟುಕೊಂಡು ರಕ್ತಚಲನೆಯು ಸರಿಯಾಗಿ ಆಗುವಂತೆ ಮಾಡುವುದು. ಇದರಿಂದ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಸೇವಿಸಿ. ಕಲ್ಲಂಗಡಿ ಹಣ್ಣಿನ ಬೀಜದ ಪ್ರಯೋಜನಗಳನ್ನು ಕೇಳಿದರೆ ಅಚ್ಚರಿ ಪಡುವಿರಿ!



Click it and Unblock the Notifications