Latest Updates
-
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ -
ವೀಕೆಂಡ್ ಪ್ಲಾನ್ ಮಾಡಿದ್ದೀರಾ? ಹವಾಮಾನ ವೈಪರೀತ್ಯದ ಎಚ್ಚರಿಕೆ: ನಿಮ್ಮ ಸುರಕ್ಷತೆಗಾಗಿ ಈ ಬದಲಾವಣೆ ಮಾಡಿಕೊಳ್ಳಿ! -
ಮುಂಬೈ ಬಿಸಿಲು ಮತ್ತು ಆರ್ದ್ರತೆ: 15 ನಿಮಿಷದಲ್ಲಿ ನಿಮ್ಮ ಮನೆಯನ್ನು ತಂಪಾಗಿರಿಸುವ ಸರಳ ಉಪಾಯಗಳು! -
ನಿಮ್ಮ ಆಹಾರದ ಪ್ಯಾಕೆಟ್ನಲ್ಲಿ ಸ್ಟೇಪ್ಲರ್ ಪಿನ್ ಇದೆಯೇ? ಎಚ್ಚರ, FSSAI ಕಠಿಣ ಆದೇಶ! -
ಧರ್ಮಶಾಲಾದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಮಳೆ ಆತಂಕದ ನಡುವೆ ಗೆಲ್ಲೋರು ಯಾರು? -
ದೆಹಲಿ-ಎನ್ಸಿಆರ್ ಬಿರುಗಾಳಿ: ಫಿಟ್ನೆಸ್ ಪ್ರಿಯರೇ ಎಚ್ಚರ, ಇಂದಿನ ವರ್ಕೌಟ್ ಮನೆಯಲ್ಲೇ ಮಾಡುವುದು ಏಕೆ ಸುರಕ್ಷಿತ? -
ದೆಹಲಿಯಲ್ಲಿ ಇಂದು ಮಳೆ ಎಚ್ಚರಿಕೆ: ನಿಮ್ಮ ಡಿನ್ನರ್ ಪ್ಲಾನ್ ಸುರಕ್ಷಿತವಾಗಿರಲು ಈ ಟಿಪ್ಸ್ ಫಾಲೋ ಮಾಡಿ -
ಬೆಂಗಳೂರಿನಲ್ಲಿ ಭರ್ಜರಿ ಮಳೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ಈ 5 ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಪತ್ರಿಕೆಯಲ್ಲಿ ಆಹಾರ ಸುತ್ತಿ ತಿನ್ನುತ್ತಿದ್ದೀರಾ? ಇದು ನಿಮ್ಮ ಆರೋಗ್ಯಕ್ಕೆ 'ನಿಧಾನಗತಿಯ ವಿಷ' ಎಚ್ಚರ! -
ಬೆಂಗಳೂರಿನಲ್ಲಿ ಮತ್ತೆ ಮಳೆ: ಟ್ರಾಫಿಕ್ ಜಾಮ್ ತಪ್ಪಿಸಿ ಸುರಕ್ಷಿತವಾಗಿ ಮನೆ ಸೇರಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್!
ಕಲ್ಲಂಗಡಿ ಜ್ಯೂಸ್: ಬೇಸಿಗೆಗೆ ದೇವರು ಕೊಟ್ಟಿರುವ ವರ!!
ಉರಿ ಬೇಸಿಗೆ ಸಮಯಕ್ಕಿಂತ ಮೊದಲೇ ಶುರುವಾಗಿದೆ. ಈಗಾಗಲೇ ದೆಹಲಿ ಹಾಗೂ ಕೆಲವೊಂದು ಕಡೆಗಳಲ್ಲಿ ಉರಿಬಿಸಿಲಿನಿಂದ ಪ್ರಾಣ ಕಳೆದುಕೊಂಡ ಬಗ್ಗೆ ಕೂಡ ಸುದ್ದಿಯಾಗಿದೆ. ಉಷ್ಣಾಂಶ 40 ಡಿಗ್ರಿಗಿಂತಲೂ ಹೆಚ್ಚಾದಾಗ ಹೊರಗಡೆ ಹೋಗುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಪ್ರಮುಖವಾಗಿ ದೇಹದಲ್ಲಿ ಹೆಚ್ಚಿನ ನೀರಿನಾಂಶ ಇರುವಂತೆ ನೋಡಿಕೊಳ್ಳಬೇಕು. ನೀರಿನ ಅಂಶ ಕಡಿಮೆಯಾದಾಗ ದೇಹವು ಬೇಗನೆ ಬಿಸಿಲಿನ ತಾಪಕ್ಕೆ ಬಲಿಯಾಗುತ್ತದೆ. ಬಿರು ಬೇಸಿಗೆಗೆ ತಂಪಾದ ಮಸಾಲಾ ಕಲ್ಲಂಗಡಿ ಜ್ಯೂಸ್!
ನೀರಿನೊಂದಿಗೆ ಹಣ್ಣಿನ ಜ್ಯೂಸ್ ಇತ್ಯಾದಿಗಳನ್ನು ಕುಡಿಯುತ್ತಾ ಇರಬೇಕು. ಅದರಲ್ಲೂ ಕಲ್ಲಂಗಡಿ ಜ್ಯೂಸ್ ಬೇಸಿಗೆಗೆ ದೇವರು ಕೊಟ್ಟಿರುವ ವರ ಎಂದರೆ ತಪ್ಪಾಗಲಾರದು. ಯಾಕೆಂದರೆ ಕಲ್ಲಂಗಡಿಯಲ್ಲಿ ಇತರ ಹಣ್ಣುಗಳಿಗಿಂತ ಹೆಚ್ಚಿನ ನೀರಿನಾಂಶವಿದೆ. ಇಷ್ಟು ಮಾತ್ರವಲ್ಲದೆ ಬೆಟಾ ಕ್ಯಾರೋಟಿನ್, ವಿಟಮಿನ್ ಎ, ಬಿ1, ಬಿ6, ಸಿ, ಪೊಟಾಶಿಯಂ, ಮೆಗ್ನಿಶಿಯಂ, ಬಿಯೊಟಿನ್ ಇತ್ಯಾದಿಗಳಿವೆ. ಬಿಸಿಲಿನ ಝಳಕ್ಕೆ, ತಂಪುಣಿಸುವ ಕಲ್ಲಂಗಡಿ ಹಣ್ಣು
ಕಲ್ಲಂಗಡಿಯಲ್ಲಿ ಸುಮಾರು 92 ಶೇ. ನೀರಿನಾಂಶವಿರುವ ಕಾರಣದಿಂದಾಗಿ ಇದು ಬೇಸಿಗೆ ಹೇಳಿ ಮಾಡಿಸಿದ ಹಣ್ಣಾಗಿದೆ. ಉರಿ ಬಿಸಿಲಿನಿಂದ ದೂರ ಉಳಿಯಲು ಕಲ್ಲಂಗಡಿ ಹಣ್ಣನ್ನು ಹಾಗೆ ತಿನ್ನಬಹುದು ಅಥವಾ ಜ್ಯೂಸ್, ಸಲಾಡ್ ಮಾಡಿಕೊಂಡು ತಿನ್ನಬಹುದು. ಇದರಿಂದ ದೇಹವು ನಿರ್ಜಲೀಕರಣದಿಂದ ಬಳಲುವುದು ತಪ್ಪುತ್ತದೆ....

ತೇವಾಂಶದಿಂದ ಇಡುವುದು
ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಸೇವಿಸಿದರೆ ಅದರಲ್ಲಿ ಇರುವಂತಹ ಹೆಚ್ಚಿನ ನೀರಿನಾಂಶವು ದೇಹವನ್ನು ತೇವಾಂಶದಿಂದ ಇಡುವುದು. ಬೇಸಿಗೆಯಲ್ಲಿ ದೇಹದಲ್ಲಿನ ನೀರಿನಾಂಶವು ವೇಗವಾಗಿ ಕಡಿಮೆಯಾಗುತ್ತದೆ. ಕಲ್ಲಂಗಡಿ ಹಣ್ಣನ್ನು ಆಹಾರ ಕ್ರಮದಲ್ಲಿ ಸೇರಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ದೇಹದ ಕಲ್ಮಶ ಹೊರಹಾಕುವುದು
ಬೇಸಿಗೆ ಕಾಲದಲ್ಲಿ ಹೆಚ್ಚಿನ ಬೆವರು ಹೊರಹೋಗಿ ನೀರಿನಾಂಶವು ಕಡಿಮೆಯಾಗುವುದು. ಆದರೆ ಈ ವೇಳೆ ವಿಷವು ಸರಿಯಾಗಿ ಹೊರಹೋಗುವುದಿಲ್ಲ. ಹಲವಾರು ಪೋಷಕಾಂಶಗಳಿಂದ ಕೂಡಿರುವಂತಹ ಕಲ್ಲಂಗಡಿ ಹಣ್ಣು ನೈಸರ್ಗಿಕವಾಗಿ ದೇಹದ ಕಲ್ಮಶ ಹೊರಹಾಕಿ ಎಲ್ಲಾ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ದೇಹದಿಂದ ಕಲ್ಮಶ ಹೊರಹಾಕಲು ಸೇವಿಸಿ ಕಲ್ಲಂಗಡಿ ಸ್ಮೂತಿ

ಕಾಂತಿಯುತ ಚರ್ಮಕ್ಕಾಗಿ
ವಿಟಮಿನ್ ಎ ಹಾಗೂ ಸಿಯ ಕೊರತೆಯಿಂದ ನಿಮ್ಮ ಚರ್ಮವು ತುಂಬಾ ಒಣ ಹಾಗೂ ಚರ್ಮ ಎದ್ದುಬಂದಂತೆ ಕಾಣಬಹುದು. ಇದನ್ನು ನೈಸರ್ಗಿಕವಾಗಿ ನಿವಾರಣೆ ಮಾಡಬೇಕಾದರೆ ನಿಮ್ಮ ಆಹಾರ ಕ್ರಮದಲ್ಲಿ ಕಲ್ಲಂಗಡಿ ಹಣ್ಣನ್ನು ಸೇರಿಸಿಕೊಳ್ಳಿ. ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಬೆಟಾ ಕ್ಯಾರೋಟಿನ್ ಮತ್ತು ಲೈಕೊಪೆನ್ ಸೂರ್ಯನಿಂದ ಅಗುವಂತಹ ಸುಟ್ಟ ಕಲೆಗಳನ್ನು ನಿವಾರಣೆ ಮಾಡುವುದು.

ಜೀರ್ಣಕ್ರಿಯೆ ಸುಧಾರಣೆ
ಬೇಸಿಗೆಯಲ್ಲಿ ಅತಿಯಾದ ಸೆಕೆಯಿಂದ ಹಸಿವು ಕೂಡ ಸರಿಯಾಗಿ ಆಗುವುದಿಲ್ಲ. ಕಲ್ಲಂಗಡಿ ಹಣ್ಣಿನಲ್ಲಿ ಹೆಚ್ಚಿನ ನೀರು ಮತ್ತು ನಾರಿನಾಂಶವು ಇರುವ ಕಾರಣದಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು. ಇದು ಕಲ್ಲಂಗಡಿಯ ಮತ್ತೊಂದು ಆರೋಗ್ಯ ಲಾಭವಾಗಿದೆ.

ಸುಂದರ ಕೂದಲಿಗಾಗಿ
ಉರಿ ಬಿಸಿಲಿನಲ್ಲಿ ಕೂದಲಿನ ಆರೈಕೆ ಬಗ್ಗೆ ತಲೆ ಚಿಂತೆಯಾಗಿದ್ದರೆ ಇದನ್ನು ಬಿಟ್ಟು ಕೇವಲ ಕಲ್ಲಂಗಡಿ ಹಣ್ಣನ್ನು ಸೇವಿಸುವತ್ತ ಗಮನಹರಿಸಿ. ಕಲ್ಲಂಗಡಿ ಹಣ್ಣಿನಲ್ಲಿರುವ ವಿಟಮಿನ್ ಸಿ ದೇಹವು ಕೆರ್ಟೈನ್ ಉತ್ಪತ್ತಿಸುವಂತೆ ಮಾಡುತ್ತದೆ. ಇದರಿಂದ ಕೂದಲು ತುಂಬಾ ಸುಂದರ ಹಾಗೂ ಬಲಗೊಳ್ಳುತ್ತದೆ.

ರಕ್ತದೊತ್ತಡ ನಿಯಂತ್ರಿಸುವುದು
ಕಲ್ಲಂಗಡಿಯು ರಕ್ತದೊತ್ತಡವನ್ನು ನಿವಾರಿಸುವಲ್ಲಿ ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತನಾಳಗಳನ್ನು ಸರಿಯಾಗಿಟ್ಟುಕೊಂಡು ರಕ್ತಚಲನೆಯು ಸರಿಯಾಗಿ ಆಗುವಂತೆ ಮಾಡುವುದು. ಇದರಿಂದ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಸೇವಿಸಿ. ಕಲ್ಲಂಗಡಿ ಹಣ್ಣಿನ ಬೀಜದ ಪ್ರಯೋಜನಗಳನ್ನು ಕೇಳಿದರೆ ಅಚ್ಚರಿ ಪಡುವಿರಿ!



Click it and Unblock the Notifications