Just In
- 23 min ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
- 2 hrs ago UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- 2 hrs ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 4 hrs ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
Don't Miss
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಲ್ಲಂಗಡಿ ಜ್ಯೂಸ್: ಬೇಸಿಗೆಗೆ ದೇವರು ಕೊಟ್ಟಿರುವ ವರ!!
ಉರಿ ಬೇಸಿಗೆ ಸಮಯಕ್ಕಿಂತ ಮೊದಲೇ ಶುರುವಾಗಿದೆ. ಈಗಾಗಲೇ ದೆಹಲಿ ಹಾಗೂ ಕೆಲವೊಂದು ಕಡೆಗಳಲ್ಲಿ ಉರಿಬಿಸಿಲಿನಿಂದ ಪ್ರಾಣ ಕಳೆದುಕೊಂಡ ಬಗ್ಗೆ ಕೂಡ ಸುದ್ದಿಯಾಗಿದೆ. ಉಷ್ಣಾಂಶ 40 ಡಿಗ್ರಿಗಿಂತಲೂ ಹೆಚ್ಚಾದಾಗ ಹೊರಗಡೆ ಹೋಗುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಪ್ರಮುಖವಾಗಿ ದೇಹದಲ್ಲಿ ಹೆಚ್ಚಿನ ನೀರಿನಾಂಶ ಇರುವಂತೆ ನೋಡಿಕೊಳ್ಳಬೇಕು. ನೀರಿನ ಅಂಶ ಕಡಿಮೆಯಾದಾಗ ದೇಹವು ಬೇಗನೆ ಬಿಸಿಲಿನ ತಾಪಕ್ಕೆ ಬಲಿಯಾಗುತ್ತದೆ. ಬಿರು ಬೇಸಿಗೆಗೆ ತಂಪಾದ ಮಸಾಲಾ ಕಲ್ಲಂಗಡಿ ಜ್ಯೂಸ್!
ನೀರಿನೊಂದಿಗೆ ಹಣ್ಣಿನ ಜ್ಯೂಸ್ ಇತ್ಯಾದಿಗಳನ್ನು ಕುಡಿಯುತ್ತಾ ಇರಬೇಕು. ಅದರಲ್ಲೂ ಕಲ್ಲಂಗಡಿ ಜ್ಯೂಸ್ ಬೇಸಿಗೆಗೆ ದೇವರು ಕೊಟ್ಟಿರುವ ವರ ಎಂದರೆ ತಪ್ಪಾಗಲಾರದು. ಯಾಕೆಂದರೆ ಕಲ್ಲಂಗಡಿಯಲ್ಲಿ ಇತರ ಹಣ್ಣುಗಳಿಗಿಂತ ಹೆಚ್ಚಿನ ನೀರಿನಾಂಶವಿದೆ. ಇಷ್ಟು ಮಾತ್ರವಲ್ಲದೆ ಬೆಟಾ ಕ್ಯಾರೋಟಿನ್, ವಿಟಮಿನ್ ಎ, ಬಿ1, ಬಿ6, ಸಿ, ಪೊಟಾಶಿಯಂ, ಮೆಗ್ನಿಶಿಯಂ, ಬಿಯೊಟಿನ್ ಇತ್ಯಾದಿಗಳಿವೆ. ಬಿಸಿಲಿನ ಝಳಕ್ಕೆ, ತಂಪುಣಿಸುವ ಕಲ್ಲಂಗಡಿ ಹಣ್ಣು
ಕಲ್ಲಂಗಡಿಯಲ್ಲಿ
ಸುಮಾರು
92
ಶೇ.
ನೀರಿನಾಂಶವಿರುವ
ಕಾರಣದಿಂದಾಗಿ
ಇದು
ಬೇಸಿಗೆ
ಹೇಳಿ
ಮಾಡಿಸಿದ
ಹಣ್ಣಾಗಿದೆ.
ಉರಿ
ಬಿಸಿಲಿನಿಂದ
ದೂರ
ಉಳಿಯಲು
ಕಲ್ಲಂಗಡಿ
ಹಣ್ಣನ್ನು
ಹಾಗೆ
ತಿನ್ನಬಹುದು
ಅಥವಾ
ಜ್ಯೂಸ್,
ಸಲಾಡ್
ಮಾಡಿಕೊಂಡು
ತಿನ್ನಬಹುದು.
ಇದರಿಂದ
ದೇಹವು
ನಿರ್ಜಲೀಕರಣದಿಂದ
ಬಳಲುವುದು
ತಪ್ಪುತ್ತದೆ....
ತೇವಾಂಶದಿಂದ ಇಡುವುದು
ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಸೇವಿಸಿದರೆ ಅದರಲ್ಲಿ ಇರುವಂತಹ ಹೆಚ್ಚಿನ ನೀರಿನಾಂಶವು ದೇಹವನ್ನು ತೇವಾಂಶದಿಂದ ಇಡುವುದು. ಬೇಸಿಗೆಯಲ್ಲಿ ದೇಹದಲ್ಲಿನ ನೀರಿನಾಂಶವು ವೇಗವಾಗಿ ಕಡಿಮೆಯಾಗುತ್ತದೆ. ಕಲ್ಲಂಗಡಿ ಹಣ್ಣನ್ನು ಆಹಾರ ಕ್ರಮದಲ್ಲಿ ಸೇರಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ದೇಹದ ಕಲ್ಮಶ ಹೊರಹಾಕುವುದು
ಬೇಸಿಗೆ ಕಾಲದಲ್ಲಿ ಹೆಚ್ಚಿನ ಬೆವರು ಹೊರಹೋಗಿ ನೀರಿನಾಂಶವು ಕಡಿಮೆಯಾಗುವುದು. ಆದರೆ ಈ ವೇಳೆ ವಿಷವು ಸರಿಯಾಗಿ ಹೊರಹೋಗುವುದಿಲ್ಲ. ಹಲವಾರು ಪೋಷಕಾಂಶಗಳಿಂದ ಕೂಡಿರುವಂತಹ ಕಲ್ಲಂಗಡಿ ಹಣ್ಣು ನೈಸರ್ಗಿಕವಾಗಿ ದೇಹದ ಕಲ್ಮಶ ಹೊರಹಾಕಿ ಎಲ್ಲಾ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ದೇಹದಿಂದ ಕಲ್ಮಶ ಹೊರಹಾಕಲು ಸೇವಿಸಿ ಕಲ್ಲಂಗಡಿ ಸ್ಮೂತಿ
ಕಾಂತಿಯುತ ಚರ್ಮಕ್ಕಾಗಿ
ವಿಟಮಿನ್ ಎ ಹಾಗೂ ಸಿಯ ಕೊರತೆಯಿಂದ ನಿಮ್ಮ ಚರ್ಮವು ತುಂಬಾ ಒಣ ಹಾಗೂ ಚರ್ಮ ಎದ್ದುಬಂದಂತೆ ಕಾಣಬಹುದು. ಇದನ್ನು ನೈಸರ್ಗಿಕವಾಗಿ ನಿವಾರಣೆ ಮಾಡಬೇಕಾದರೆ ನಿಮ್ಮ ಆಹಾರ ಕ್ರಮದಲ್ಲಿ ಕಲ್ಲಂಗಡಿ ಹಣ್ಣನ್ನು ಸೇರಿಸಿಕೊಳ್ಳಿ. ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಬೆಟಾ ಕ್ಯಾರೋಟಿನ್ ಮತ್ತು ಲೈಕೊಪೆನ್ ಸೂರ್ಯನಿಂದ ಅಗುವಂತಹ ಸುಟ್ಟ ಕಲೆಗಳನ್ನು ನಿವಾರಣೆ ಮಾಡುವುದು.
ಜೀರ್ಣಕ್ರಿಯೆ ಸುಧಾರಣೆ
ಬೇಸಿಗೆಯಲ್ಲಿ ಅತಿಯಾದ ಸೆಕೆಯಿಂದ ಹಸಿವು ಕೂಡ ಸರಿಯಾಗಿ ಆಗುವುದಿಲ್ಲ. ಕಲ್ಲಂಗಡಿ ಹಣ್ಣಿನಲ್ಲಿ ಹೆಚ್ಚಿನ ನೀರು ಮತ್ತು ನಾರಿನಾಂಶವು ಇರುವ ಕಾರಣದಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು. ಇದು ಕಲ್ಲಂಗಡಿಯ ಮತ್ತೊಂದು ಆರೋಗ್ಯ ಲಾಭವಾಗಿದೆ.
ಸುಂದರ ಕೂದಲಿಗಾಗಿ
ಉರಿ ಬಿಸಿಲಿನಲ್ಲಿ ಕೂದಲಿನ ಆರೈಕೆ ಬಗ್ಗೆ ತಲೆ ಚಿಂತೆಯಾಗಿದ್ದರೆ ಇದನ್ನು ಬಿಟ್ಟು ಕೇವಲ ಕಲ್ಲಂಗಡಿ ಹಣ್ಣನ್ನು ಸೇವಿಸುವತ್ತ ಗಮನಹರಿಸಿ. ಕಲ್ಲಂಗಡಿ ಹಣ್ಣಿನಲ್ಲಿರುವ ವಿಟಮಿನ್ ಸಿ ದೇಹವು ಕೆರ್ಟೈನ್ ಉತ್ಪತ್ತಿಸುವಂತೆ ಮಾಡುತ್ತದೆ. ಇದರಿಂದ ಕೂದಲು ತುಂಬಾ ಸುಂದರ ಹಾಗೂ ಬಲಗೊಳ್ಳುತ್ತದೆ.
ರಕ್ತದೊತ್ತಡ ನಿಯಂತ್ರಿಸುವುದು
ಕಲ್ಲಂಗಡಿಯು ರಕ್ತದೊತ್ತಡವನ್ನು ನಿವಾರಿಸುವಲ್ಲಿ ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತನಾಳಗಳನ್ನು ಸರಿಯಾಗಿಟ್ಟುಕೊಂಡು ರಕ್ತಚಲನೆಯು ಸರಿಯಾಗಿ ಆಗುವಂತೆ ಮಾಡುವುದು. ಇದರಿಂದ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಸೇವಿಸಿ. ಕಲ್ಲಂಗಡಿ ಹಣ್ಣಿನ ಬೀಜದ ಪ್ರಯೋಜನಗಳನ್ನು ಕೇಳಿದರೆ ಅಚ್ಚರಿ ಪಡುವಿರಿ!