For Quick Alerts
ALLOW NOTIFICATIONS  
For Daily Alerts

ಅಯ್ಯೋ! ಹೌದಾ? ಅಕ್ಕಿಯಿಂದಲೂ ಹಲವಾರು ಕಾಯಿಲೆ ಬರುತ್ತದೆಯಂತೆ!!

By Manu
|

ದಿನವಿಡೀ ಎಷ್ಟೇ ಬಗೆ ಬಗೆಯ ತಿಂಡಿ-ತಿನಿಸುಗಳನ್ನು ತಿಂದರೂ ಸರಿ. ಎರಡು ತುತ್ತು ಅನ್ನ ಊಟ ಮಾಡಿದಷ್ಟು ಸಮಾಧಾನ ಇರುವುದಿಲ್ಲ. ಯಾಕೆಂದರೆ ಅನ್ನದಲ್ಲಿ ಅಂತಹ ವಿಶೇಷ ಶಕ್ತಿಯಿದೆ. ಜೊತೆಗೆ ಸಮೃದ್ಧವಾದ ಪೋಷಕಾಂಶಗಳನ್ನು ಒಳಗೊಂಡಿದೆ. ಅದು ಎಂತಹದೇ ಕಾಯಿಲೆ ಇರಲಿ, ಪಥ್ಯವಿರಲಿ, ದಿನದಲ್ಲಿ ಒಂದು ಹೊತ್ತು ಅನ್ನ ಊಟ ಮಾಡಬೇಕು ಎನ್ನುವ ಬಯಕೆ ಇರುತ್ತದೆ. ಅನ್ನವನ್ನು ಇಷ್ಟ ಪಡುವವರಿಗೆಲ್ಲಾ ಒಂದು ಅಚ್ಚರಿಯ ವಿಷಯ ಇಲ್ಲಿದೆ. ಅದೇನೆಂದರೆ " ಅನ್ನ ತಿಂದರೆ ಕ್ಯಾನ್ಸರ್ ಬರುವುದು''!! ಎನ್ನುವುದು.


ಖತರ್ನಾಕ್ ಪ್ಲಾಸ್ಟಿಕ್ ಅಕ್ಕಿ ಬಂದೇ ಬಿಟ್ಟಿದೆ!-ಆದರೆ ಗುರುತಿಸುವುದು ಹೇಗೆ?

ಅಯ್ಯೋ! ಹೌದಾ? ಎನ್ನುವ ಪ್ರಶ್ನೆ ಮನಸ್ಸಿಗೆ ಕಾಡಿದರೆ ಅದು ನಿಜ. ಬೆಳೆಯ ಉತ್ತಮ ಫಸಲಿಗಾಗಿ, ಕೀಟಗಳ ಕಾಟ ತಪ್ಪಿಸಲು ಹಾಗೂ ಕಲುಷಿತ ನೀರಿನ ನೀರಾವರಿಗಳಿಂದ ಬೆಳೆಯು ವಿಷದಿಂದ ಕೂಡಿರುತ್ತದೆ. ಇದರ ಪರಿಣಾಮವಾಗಿ ಕ್ಯಾನ್ಸರ್ ಎನ್ನುವ ಮಾರಿಗೆ ಬಲಿಯಾಗಬೇಕಾಗುವುದು. ಈ ರೀತಿಯಲ್ಲಿ ಬೆಳೆದ ಅಕ್ಕಿಯನ್ನು ನಿತ್ಯವೂ ಸೇವಿಸುತ್ತಿದ್ದರೆ ಕ್ಯಾನ್ಸರ್ ಕೋಶಗಳ ಬೆಳವಣಿಗೆ ಹೆಚ್ಚುತ್ತದೆ ಎನ್ನಲಾಗುತ್ತಿದೆ. ಈ ವಿಷಯದ ಇನ್ನಷ್ಟು ಮಾಹಿತಿಗೆ ಮುಂದೆ ಓದೋಣ ಬನ್ನಿ....

ವಿಶೇಷ ಅಧ್ಯಯನ

ವಿಶೇಷ ಅಧ್ಯಯನ

ಇಂಗ್ಲೆಂಡ್‍ನ ಕ್ವೀನ್ಸ್ ವಿಶ್ವವಿದ್ಯಾಲಯ ಬೆಲ್ಫಾಸ್ಟ್ ನಡೆಸಿದ ಅಧ್ಯಯನದ ಪ್ರಕಾರ, ಮಣ್ಣಿನಲ್ಲಿ ಇರುವ ವಿಷಕಾರಿ ಮತ್ತು ಕೀಟನಾಶಕಗಳ ರಾಸಾಯನಿಕವು ಲಕ್ಷಾಂತರ ಜನರ ಆರೋಗ್ಯ ಕೆಡಿಸುವ ಸಾಧ್ಯತೆ ಇದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ವಿವಿಧ ರೋಗಗಳಿಗೆ ಆಹ್ವಾನ

ವಿವಿಧ ರೋಗಗಳಿಗೆ ಆಹ್ವಾನ

ಕ್ರಿಮಿನಾಶಕಗಳ ಹಾನಿಕಾರಕ ಅಂಶವು ವ್ಯಕ್ತಿಯ ದೇಹದ ಮೇಲೆ ನಿಧಾನವಾಗಿ ಪರಿಣಾಮ ಬೀರುತ್ತದೆ. ಇದನ್ನು ರೈಸ್ ಆರ್ಸೆನಿಕ್ ವಿಷ ಎಂದು ಕರೆಯಲಾಗುವುದು.

ಆರ್ಸೆನಿಕ್ ಎಂದರೇನು?

ಆರ್ಸೆನಿಕ್ ಎಂದರೇನು?

ಆರ್ಸೆನಿಕ್ ಎಂದರೆ ಖನಿಜಗಳಲ್ಲಿ ನೈಸರ್ಗಿಕವಾಗಿ ಇರುವ ಒಂದು ರಾಸಾಯನಿಕ ಅಂಶ. ಇದು ಗಂಧಕ ಮತ್ತು ಲೋಹಗಳ ಸಂಯೋಜನೆಯಿಂದ ಉಂಟಾಗುವ ಪದಾರ್ಥ(ರಾಸಾಯನಿಕ ಅಂಶ). ಇದನ್ನು ಕೀಟನಾಶಕ ಉತ್ಪಾದನಾ ಘಟಕ ತನ್ನ ಉತ್ಪನ್ನದಲ್ಲಿ ಬಳಸುತ್ತದೆ.

ಇದು ಹಲವೆಡೆಯಿದೆ

ಇದು ಹಲವೆಡೆಯಿದೆ

ಎಲ್ಲೆಲ್ಲಿ ಕಲುಷಿತ ನೀರು ಮತ್ತು ಅತಿಯಾದ ಕೀಟನಾಶಕ ಬಳಕೆಯಿಂದ ಬೆಳೆಯನ್ನು ಬೆಳೆಯುತ್ತಾರೋ ಅಲ್ಲಿಯ ಬೆಳೆಗಳಲ್ಲಿ ವಿಷಕಾರಿ ಅಂಶ ಇರುತ್ತದೆ. ವಿಶ್ವದೆಲ್ಲೆಡೆಯ ದೇಶದಲ್ಲೂ ಹರಡಿರುವ ಇದು ಭಾರತದ ಪಶ್ಚಿಮ ಬಂಗಾಳದಲ್ಲೂ ಇದೆ. ಇಲ್ಲಿ ಕಲುಷಿತ ನೀರಿನಿಂದಲೇ ಬೆಳೆಗಳನ್ನು ಬೆಳೆಯುತ್ತಾರಂತೆ!

ಇದರಿಂದ ಬರುವ ಕಾಯಿಲೆಗಳು

ಇದರಿಂದ ಬರುವ ಕಾಯಿಲೆಗಳು

ಈ ರೀತಿಯ ರಾಸಾಯನಿಕಯುಕ್ತ ಅಕ್ಕಿಯನ್ನು ಸೇವಿಸುವುದರಿಂದ ವಾಂತಿ, ಹೊಟ್ಟೆನೋವು, ಅತಿಸಾರ, ಕ್ಯಾನ್ಸರ್, ನರರೋಗ, ಮಧುಮೇಹ ಮತ್ತು ಹೃದಯದ ರಕ್ತನಾಳ ಕಾಯಿಲೆಗಳು ಪರಿಣಾಮಕಾರಿಯಾಗಿ ಕಾಣಿಸಿಕೊಳ್ಳುತ್ತವೆ.

ಸೂಕ್ತ ರೀತಿಯ ಬಳಕೆ

ಸೂಕ್ತ ರೀತಿಯ ಬಳಕೆ

ಅಕ್ಕಿಯನ್ನು ಸೂಕ್ತ ರೀತಿಯಲ್ಲಿ ಬೆಳೆಯದಿದ್ದರೆ ಹಾಗೂ ಬಳಕೆ ಮಾಡುವ ವಿಧಾನ ಅರಿಯದಿದ್ದರೆ ಆರೋಗ್ಯ ಸಮಸ್ಯೆ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಮರೆಯಬಾರದು.

ಅಕ್ಕಿ ನೀರಿನ ಪ್ರಯೋಜನಗಳನ್ನು ಕೇಳಿದರೆ, ಅಚ್ಚರಿ ಪಡುವಿರಿ!

ವಿಷ ತೆಗೆಯುವುದು ಹೇಗೇ?

ವಿಷ ತೆಗೆಯುವುದು ಹೇಗೇ?

ವಿವಿಧ ಅಧ್ಯಯನ ಹಾಗೂ ಪ್ರಯೋಗದ ಮೂಲಕ ಅಕ್ಕಿಯಲ್ಲಿರುವ ಟಾಕ್ಸಿನ್ ವಿಷವನ್ನು ತೆಗೆಯುವುದು ಹೇಗೆ? ಎನ್ನುವುದಕ್ಕೆ ಪರಿಹಾರ ಕಂಡು ಹಿಡಿಯಲಾಗಿದೆ. ಬಳಕೆ ಮಾಡಬೇಕೆಂದುಕೊಂಡ ಅಕ್ಕಿಯನ್ನು ಒಂದು ರಾತ್ರಿ ನೀರಿನಲ್ಲಿ ನೆನೆಯಿಡಬೇಕು. ಆಗ ಅಕ್ಕಿಯಲ್ಲಿರುವ ವಿಷದ ಮಟ್ಟ ಶೇ. 80 ರಷ್ಟು ಕಡಿಮೆಯಾಗುತ್ತದೆ ಎನ್ನಲಾಗಿದೆ.

ಬೇಯಿಸುವ ವಿಧಾನ

ಬೇಯಿಸುವ ವಿಧಾನ

ಅಕ್ಕಿಯನ್ನು ಬಳಸುವಾಗ ಅದರ ಸ್ವಚ್ಛತೆ ಹಾಗೂ ಬೇಯಿಸುವ ವಿಧಾನ ತಿಳಿದಿರಬೇಕು. ಇಲ್ಲವಾದರೆ ಅಕ್ಕಿಯಲ್ಲಿ ರಾಸಾಯನಿಕ ಅಂಶ ಕಡಿಮೆಯಾಗದು. ಸೂಕ್ತ ರೀತಿಯ ಸ್ವಚ್ಛತೆಯು ಆರೋಗ್ಯ ಸಮಸ್ಯೆಯಿಂದ ದೂರ ಉಳಿಯಲು ಸಹಾಯ ಮಾಡುವುದು.

ಕುಚ್ಚಲಕ್ಕಿಯ ಆರೋಗ್ಯಕಾರಿ ಪ್ರಯೋಜನಗಳೇನು ?
English summary

Soaking rice it Overnight Before Cooking Can Prevent Cancer

According to a recent study done by the Queens University Belfast in England, the chemical from the industrial toxins and pesticides in the soil contaminate the rice that is endangering the health of millions of people, reports The Telegraph. There have been various reports on the harmful effects of pesticides and how those chemicals are making their way into our food leading to various kinds on diseases and hampering our long term health.
X
Desktop Bottom Promotion