Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಕೊಲೆಸ್ಟ್ರಾಲ್ ಬಗ್ಗೆ ಚಿಂತಿಸಬೇಕಿಲ್ಲ, ಇವುಗಳನ್ನು ಸೇವಿಸಿದರೆ ಸಾಕು...
ಕೊಲೆಸ್ಟ್ರಾಲ್ ಎನ್ನುವುದು ನಮ್ಮ ದೇಹಕ್ಕೆ ಬೇಕಾದ ಅಗತ್ಯ ಪದಾರ್ಥ. ಇದರಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹಾಗೂ ಕೆಟ್ಟ (ಬೇಡದ) ಕೊಲೆಸ್ಟ್ರಾಲ್ ಎಂದು ಎರಡು ಪ್ರಕಾರ ಇರುವುದನ್ನು ಕಾಣಬಹುದು.
ದೇಹಕ್ಕೆ ಅಗತ್ಯವಿರುವ ಕೊಲೆಸ್ಟ್ರಾಲ್ ಹಾರ್ಮೋನ್ಗಳ ಉತ್ಪಾದನೆಗೆ, ಜೀರ್ಣಕ್ರಿಯೆಗೆ, ವಿಟಮಿನ್-ಡಿಯ ಉತ್ಪಾದನೆಗೆ ಸಹಾಯ ಮಾಡುತ್ತದೆ. ದೇಹಕ್ಕೆ ಬೇಡದ ಕೊಲೆಸ್ಟ್ರಾಲ್ ಅನಗತ್ಯವಾದ ಕೊಬ್ಬಿನಂಶವನ್ನು ಹೆಚ್ಚಿಸುತ್ತದೆ. ಜೊತೆಗೆ ರಕ್ತಸಂಚಾರಕ್ಕೆ ಅಡ್ಡಿಯನ್ನುಂಟುಮಾಡುವುದು.
ನಾವು ಸೇವಿಸುವ ಆಹಾರವು ದೇಹಕ್ಕೆ ಅಗತ್ಯವಿರುವ ಪೂರಕ ಮತ್ತು ಮಾರಕವಾದ ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುವುದು. ಹಾಗಾಗಿ ಸೇವಿಸುವ ಆಹಾರದ ಬಗ್ಗೆಯೂ ಹೆಚ್ಚು ಗಮನವಹಿಸಬೇಕು. ಕೆಲವು ಸಂಶೋಧನೆಯ ಪ್ರಕಾರ ಭಾರತೀಯರ ಆಹಾರ ಪದ್ಧತಿಯು ಬಹಳ ಸರಳ ಹಾಗೂ ಆರೋಗ್ಯ ಪೂರ್ಣವಾದದ್ದು. ಇವರು ಬಳಸುವ ಆಹಾರ ಉತ್ಪನ್ನಗಳು ದೇಹಕ್ಕೆ ಅಗತ್ಯ ಕೊಲೆಸ್ಟ್ರಾಲ್ ಅನ್ನು ನೀಡಿ, ಅನಗತ್ಯ ಕೊಲೆಸ್ಟ್ರಾಲ್ಅನ್ನು ಹೋಗಲಾಡಿಸುತ್ತದೆ. ಹಾಗಾದರೆ ಆ ಆಹಾರ ಪದಾರ್ಥಗಳು ಯಾವವು ಎನ್ನುವುದನ್ನು ತಿಳಿಯಬೇಕಾದರೆ ಈ ಲೇಖನ ಓದುವುದನ್ನು ಮುಂದುವರಿಸಿ.

ಕೊತ್ತಂಬರಿ ಬೀಜ
ಕೊತ್ತಂಬರಿ ಬೀಜವು ಕೊಲೆಸ್ಟ್ರಾಲ್ ಮಟ್ಟ ಮತ್ತು ಟ್ರೈಗ್ಲಿಸರೈಡ್ಗಳನ್ನು ಕಡಿಮೆಮಾಡಲು ಸಮರ್ಥವಾಗಿದೆ ಎಂದು ಅನೇಕ ಅಧ್ಯಯನಗಳು ಸಾಬೀತು ಪಡಿಸಿವೆ. ಇದು ಯಕೃತ್ತಿನ ಪಿತ್ತರಸದ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಅಲ್ಲದೆ ಎಚ್ಡಿಎಲ್ ಕೊಲೆಸ್ಟ್ರಾಲ್ಅನ್ನು ಹೆಚ್ಚಿಸುವುದು.
ಕೊತ್ತಂಬರಿ ಬೀಜ: ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು...

ಮೆಂತೆ
ಯಕೃತ್ತು ಮತ್ತು ಕರುಳಿಗೆ ಬೇಡದ ಅನಗತ್ಯ ಕೊಬ್ಬನ್ನು ಹೀರಿಕೊಂಡು, ಅಗತ್ಯವಿರುವ ಎಚ್ಡಿಎಲ್ ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುತ್ತದೆ. ದೇಹಕ್ಕೆ ಬೇಕಾಗುವ ನಾರಿನಂಶವನ್ನು ಒದಗಿಸುತ್ತದೆ.
ಮೆಂತೆ ಕಾಳು ನೆನೆಸಿದ ನೀರು- ಆಯಸ್ಸು ನೂರು!

ಬೆಳ್ಳುಳ್ಳಿ
ಕೆಲವು ಅಧ್ಯಯನಗಳ ಪ್ರಕಾರ ಬೆಳ್ಳುಳ್ಳಿ ಕೊಲೆಸ್ಟ್ರಾಲ್ ಮಟ್ಟದಲ್ಲಿ ಯಾವುದೇ ಪರಿಣಾಮ ಬೀರದಿದ್ದರೂ, ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳ ಆರೋಗ್ಯವನ್ನು ಕಾಪಾಡುತ್ತದೆ. ನಿತ್ಯ ಬೆಳ್ಳುಳ್ಳಿ ಸೇವನೆ ಮಾಡಿದರೆ ಸೆರಮ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಎಚ್ಡಿಎಲ್ ಮತ್ತು ಟ್ರೈಗ್ಲಿಸರೈಡ್ಗಳ ಮೇಲೆ ಯಾವುದೇ ಪರಿಣಾಮ ಬೀರದು.

ದಾಲ್ಚಿನ್ನಿ
ಇದು ಎಚ್ಡಿಎಲ್, ಟ್ರೈಗ್ಲಿಸರೈಡ್ ಮತ್ತು ಸೆರಮ್ ಗ್ಲೂಕೋಸ್ಅನ್ನು ಕಡಿಮೆಮಾಡಲು ಸಹಾಯಮಾಡುತ್ತದೆ. ಇಲಿ ಮತ್ತು ಕೋಳಿಗಳ ಮೇಲೆ ನಡೆಸಿದ ಅಧ್ಯಯನಗಳು ಈ ವಿಷಯದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನೀಡಿವೆ.

ಧಾನ್ಯಗಳು
ಧಾನ್ಯಗಳಲ್ಲಿ ನಾರಿನಂಶವು ಸಮೃದ್ಧವಾಗಿರುವುದು. ಇವು ಕೊಲೆಸ್ಟ್ರಾಲ್ಗಳನ್ನು ಕಡಿಮೆ ಮಾಡಿ, ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುತ್ತವೆ ಎಂದು ಹೇಳಲಾಗುತ್ತದೆ.

ಬೀಜಗಳು
ಬಾದಾಮಿ, ಪಿಸ್ತಾ, ಆಕ್ರೋಡು ಸೇರಿದಂತೆ ಇನ್ನಿತ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ಕೊಬ್ಬಿನಂಶ ಇರುತ್ತದೆ. ಇವು ದೇಹಕ್ಕೆ ಅಗತ್ಯವಾದ ಕೊಲೆಸ್ಟ್ರಾಲ್ ಅನ್ನು ದೇಹಕ್ಕೆ ನೀಡುತ್ತದೆ. ಇವುಗಳ ಸೇವನೆ ಸೂಕ್ತ ರೀತಿಯಲ್ಲಿ ಇರಬೇಕಷ್ಟೆ.

ಈರುಳ್ಳಿ
ಇದರಲ್ಲಿ ಅಲೈಯನೇಸ್, ಕ್ವೆರ್ಸೆಟಿನ್ ಸಪೋನಿನ್ಸ್ ಎನ್ನುವ ಸಂಯುಕ್ತಗಳಿವೆ. ಇವು ಉತ್ತಮ ಕೊಲೆಸ್ಟ್ರಾಲ್ ಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತವೆ. ಇಲಿಗಳ ಮೇಲೆ ನಡೆಸಿದ ಅಧ್ಯಯನದ ಪ್ರಕಾರ ಎಚ್ಡಿಎಲ್ ಹೆಚ್ಚಿಸಿ ಎಲ್ಡಿಎಲ್ಅನ್ನು ಕಡಿಮೆ ಮಾಡುವಲ್ಲಿ ಧನಾತ್ಮಕ ಫಲಿತಾಂಶವನ್ನು ನೀಡಿದೆ ಎನ್ನಲಾಗಿದೆ.
ಈರುಳ್ಳಿ ಮತ್ತು ಬೆಳ್ಳುಳ್ಳಿ- ಕ್ಯಾನ್ಸರ್ ವಿರುದ್ಧ ಹೋರಾಡುವ ಸಂಜೀವಿನಿ

ತೆಂಗಿನ ಎಣ್ಣೆ
ಇದರಲ್ಲಿರುವ ಪಾಲಿಫಿನಾಲ್ ಅಂಶವು ಕೊಲೆಸ್ಟ್ರಾಲ್ಮಟ್ಟ, ಟ್ರೈಗ್ಲಿಸರೈಡ್, ಫಾಸ್ಫೋಲಿಪಿಡ್ ಮತ್ತು ಎಲ್ಡಿಎಲ್ಅನ್ನು ಕಡಿಮೆ ಮಾಡಲು ಸಹಕರಿಸುತ್ತದೆ. ಇತರ ತೈಲಗಳಿಗಿಂತ ಇದು ಉತ್ತಮವಾದದ್ದು ಎನ್ನಲಾಗುತ್ತದೆ.
ತೆಂಗಿನ ಎಣ್ಣೆಯಿಂದ ಹಲ್ಲು ಉಜ್ಜಿದರೆ- ಹಲ್ಲುಗಳು ಇನ್ನಷ್ಟು ಬೆಳ್ಳಗೆ ಆಗುತ್ತೆ!



Click it and Unblock the Notifications