Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಹಳ್ಳಿಗಾಡಿನ ಔಷಧ: ಲಿವರ್ನ ಆರೋಗ್ಯಕ್ಕೆ ನೆಲ್ಲಿಕಾಯಿ ಜ್ಯೂಸ್
ಲಿವರ್ ಸರಿಯಾಗಿ ಕೆಲಸ ಮಾಡುತ್ತಿರಬೇಕು ಎಂದರೆ ಅದರ ಕಾಳಜಿ ಕೂಡ ಅಷ್ಟೇ ಪ್ರಾಮುಖ್ಯತೆ ಪಡೆಯುತ್ತದೆ, ಅಲ್ಲದೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕಾಗುತ್ತದೆ, ಅಂತೆಯೇ ಲಿವರ್ ಅರೋಗ್ಯ ಕಾಪಾಡಲು ಮಧ್ಯಪಾನ, ಧೂಮಪಾನಗಳಿಂದ ದೂರವಿರುವುದು ತುಂಬಾ ಅಗತ್ಯ..
ಮದ್ಯಪಾನದ ಅಭ್ಯಾಸವಿರುವವರಿಗೆ ಅತಿ ಹೆಚ್ಚು ಬಾಧೆಗೊಳಗಾಗುವ ಅಂಗವೆಂದರೆ ಯಕೃತ್ ಅಥವಾ ಲಿವರ್. ಅದರಲ್ಲೂ ನಿಯಮಿತವಾಗಿ ಮದ್ಯ ಸೇವಿಸುವವರ ಯಕೃತ್ನಲ್ಲಿ ಭಾರೀ ಪ್ರಮಾಣದಲ್ಲಿ ವಿಷಕಾರಿ ವಸ್ತುಗಳು ಸಂಗ್ರಹಗೊಂಡಿರುತ್ತವೆ. ಪ್ರಾರಂಭದಲ್ಲಿ ಏನೋ ಗೊತ್ತಾಗದೇ ಮದ್ಯಪಾನಿ ತನ್ನ ಸಾಮರ್ಥ್ಯವನ್ನು ಹೊಗಳಿಕೊಳ್ಳುತ್ತಾ ಇನ್ನಷ್ಟು ಹೆಚ್ಚಿಸುತ್ತಾನೆ. ಒಣದ್ರಾಕ್ಷಿ ನೆನೆಸಿದ ನೀರು- ದೇಹದ ಲಿವರ್ನ ಆಯಸ್ಸು ನೂರು!
ಆದರೆ ಒಮ್ಮೆ ಇದರ ಸಾಮರ್ಥ್ಯ ಮೀರಿತೋ, ಆಗ ಯಕೃತ್ ಥಟ್ಟನೇ ಕುಸಿಯುತ್ತದೆ. ಆಗ ಪಶ್ಚಾತ್ತಾಪ ಪಡುವುದಕ್ಕಿಂತ ಯಾವುದೇ ವ್ಯಸನಗಳನ್ನು ಅನುಸರಿಸದಿರುವುದೇ ಉತ್ತಮ. ಧೂಮಪಾನ, ಮಾದಕ ಪದಾರ್ಥ ಸೇವನೆ ಮದ್ಯಪಾನ ಮೊದಲಾದವು ಯಾವತ್ತಿದ್ದರೂ ಸೆರಗಿನ ಕೆಂಡಗಳೇ. ಎಚ್ಚರ: ನಿಮ್ಮ ಲಿವರ್ ಕೂಡ ಅಪಾಯದಲ್ಲಿ ಸಿಲುಕಿರಬಹುದು!
ಇವುಗಳು ನಮ್ಮ ಪ್ರಮುಖ ಅಂಗಗಳ ಮೇಲೇ ಧಾಳಿ ಮಾಡುವ ಕಾರಣ ನಮ್ಮ ಅಂಗಗಳನ್ನು ಆಗಾಗ ಶುದ್ಧೀಕರಿಸಿಕೊಳ್ಳುವ ಮೂಲಕ ಇನ್ನಷ್ಟು ಹೆಚ್ಚು ಘಾಸಿಗೊಳ್ಳದಂತೆ ತಡೆಯುವುದು ಅಗತ್ಯ. ಬನ್ನಿ, ಯಕೃತ್ ಅನ್ನು ಶುದ್ಧೀಕರಿಸಲು ಏನು ಮಾಡಬಹುದು ಎಂಬುದನ್ನೊ ನೋಡೋಣ....

ಅವಶ್ಯವಿರುವ ಸಾಮಾಗ್ರಿಗಳು:
*ನೆಲ್ಲಿಕಾಯಿಯ ರಸ: ಮೂರು ದೊಡ್ಡ ಚಮಚ
*ಜೇನು: ಒಂದು ದೊಡ್ಡಚಮಚ ನೆಲ್ಲಿಕಾಯಿ ಜ್ಯೂಸ್ ನಲ್ಲಿದೆ ಅತ್ಯದ್ಭುತ ಗುಣಗಳು

ನೆಲ್ಲಿಕಾಯಿ
ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಅತಿ ಹೆಚ್ಚಿನ ಪ್ರಮಾಣದಲ್ಲಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೇ ಯಕೃತ್ ನಿಂದ ವಿಷಕಾರಿ ವಸ್ತುಗಳನ್ನು ನಿವಾರಿಸಿ ಶುದ್ಧೀಕರಿಸಲೂ ಸಮರ್ಥವಾಗಿದೆ.

ಜೇನು
ಜೇನಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಇತರ ಪೋಷಕಾಂಶಗಳು ಯಕೃತ್ ನಲ್ಲಿರುವ ವಿಷವಸ್ತುಗಳನ್ನು ಹೊರಹಾಕಲು ನೆರವಾಗುವುದರ ಜೊತೆಗೇ ಯಕೃತ್ನ ಜೀವಕೋಶಗಳಿಗೆ ಅಗತ್ಯವಾದ ಪೋಷಣೆಯನ್ನು ನೀಡಿ ಮೊದಲಿನ ಆರೋಗ್ಯವನ್ನು ಪಡೆಯಲು ನೆರವಾಗುತ್ತದೆ. ಅಲ್ಲದೇ ಈ ಮೂಲಕ ಯಕೃತ್ ಅನ್ನು ಹಲವಾರು ತೊಂದರೆಗಳಿಗೆ ಒಳಗಾಗುವುದರಿಂದ ರಕ್ಷಿಸುತ್ತದೆ.

ತಯಾರಿಕಾ ವಿಧಾನ
*ಒಂದು ಲೋಟಕ್ಕೆ ಮೇಲಿನ ಎರಡೂ ಸಾಮಾಗ್ರಿಗಳನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ
*ಈ ಮಿಶ್ರಣವನ್ನು ಪ್ರತಿದಿನ ಬಳಿಗ್ಗೆ ಎದ್ದ ಬಳಿಕ ಪ್ರಥಮ ಆಹಾರವಾಗಿ ಕುಡಿಯಿರಿ. ಬಳಿಕ ಕನಿಷ್ಠ ಮುಕ್ಕಾಲು ಗಂಟೆ ಏನನ್ನೂ ಸೇವಿಸದಿರಿ. ಈ ವಿಧಾನವನ್ನು ಕನಿಷ್ಠ ಎರಡು ವಾರ ಅನುಸರಿಸಿ.



Click it and Unblock the Notifications