For Quick Alerts
ALLOW NOTIFICATIONS  
For Daily Alerts

ಸರಿಯಾಗಿ ಊಟ-ತಿಂಡಿ ಮಾಡದಿದ್ದರೆ, ಇಂತಹ ಸಮಸ್ಯೆ ನಿಮಗೂ ಬರಬಹುದು!

By Hemanth
|

ಭೂಮಿ ಮೇಲೆ ಯಾರಿಗೂ ಹಸಿವಾಗದೆ ಇರುತ್ತಾ ಇದ್ದರೆ ಏನಾಗುತ್ತಾ ಇತ್ತು ಎಂದು ಕಲ್ಪನೆ ಮಾಡಿಕೊಳ್ಳುವುದು ಕಷ್ಟ. ಭೂಮಿ ಮೇಲಿರುವ ಪ್ರತಿಯೊಬ್ಬ ವ್ಯಕ್ತಿ ಕೂಡ ಹೊಟ್ಟೆಪಾಡಿಗಾಗಿ ಏನಾದರೊಂದು ಕೆಲಸ ಮಾಡುತ್ತಾ ಇರುತ್ತಾನೆ. ಹಸಿವೇ ಇಲ್ಲದೆ ಇರುತ್ತಿದ್ದರೆ ಯಾರು ಕೆಲಸ ಮಾಡುತ್ತಾ ಇರಲಿಲ್ಲ. ಕೆಲಸ ಮಾಡಲು ನಮ್ಮ ದೇಹಕ್ಕೆ ಶಕ್ತಿ ಬೇಕು. ದೇಹಕ್ಕೆ ಶಕ್ತಿ ಬರುವುದು ನಾವು ತಿನ್ನುವಂತಹ ಆಹಾರದಿಂದ. ತಿನ್ನುವ ಆಹಾರವು ದೇಹಕ್ಕೆ ಪೋಷಕಾಂಶ ಒದಗಿಸುವುದು. ಇದರಿಂದಾಗಿಯೇ ನಾವು ದೈನಂದಿನ ಕೆಲಸಕಾರ್ಯ ಮಾಡಲು ಶಕ್ತಿ ದೊರಕುವುದು.

ದೈಹಿಕ ಹಾಗೂ ಮಾನಸಿಕವಾಗಿ ಬಲಿಷ್ಠರಾಗಿರಲು ತಿನ್ನುವಂತಹ ಆಹಾರವು ಸಮತೋಲಿತವಾಗಿರಬೇಕು. ಇಂದಿನ ವ್ಯಸ್ತ ಜೀವನದಲ್ಲಿ ಕೆಲವರಿಗೆ ಸರಿಯಾಗಿ ಊಟ ಮಾಡಲು ಸಮಯವಿರುವುದಿಲ್ಲ. ಇನ್ನು ಕೆಲವರು ದೇಹ ಇನ್ನಷ್ಟು ಸಪೂರವಾಗಬೇಕೆಂಬ ಇಚ್ಛೆಯಲ್ಲಿ ಆಹಾರವನ್ನೇ ತ್ಯಜಿಸುತ್ತಾರೆ. ಊಟ ಮಾಡದೆ ಇರುವುದು ಸರಿಯಾದ ಕ್ರಮವಲ್ಲ ಮತ್ತು ಇದು ಅನಾರೋಗ್ಯಕಾರಿ.

ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟ ಮಾಡಲು ನಿಮ್ಮಲ್ಲಿ ಸರಿಯಾದ ಸಮಯವಿಲ್ಲವೆಂದಾದರೆ ಅದರಿಂದ ದೇಹಕ್ಕೆ ಬೇಕಾಗಿರುವ ಪೋಷಕಾಂಶಗಳ ಕೊರತೆಯಾಗುವುದು. ರಾಷ್ಟ್ರೀಯ ಪೋಷಕಾಂಶಗಳ ವಾರದಂದು ಆಹಾರ ಸೇವನೆ ಮಾಡದೇ ಇದ್ದರೆ ದೇಹಕ್ಕೆ ಏನಾಗಬಹುದು ಎಂದು ಬೋಲ್ಡ್ ಸ್ಕೈ ಈ ಲೇಖನ ಮೂಲಕ ಹೇಳಲಿದೆ.....

ಜೀರ್ಣಕ್ರಿಯೆ ಪರಿಣಾಮ

ಜೀರ್ಣಕ್ರಿಯೆ ಪರಿಣಾಮ

ನಾವು ತಿನ್ನುವಂತಹ ಎಲ್ಲಾ ಆಹಾರವು ಹೊಟ್ಟೆಗೆ ಹೋಗಿ ಸೇರಿಕೊಳ್ಳುವುದು. ಹಸಿವು ನಿಯಂತ್ರಿಸುತ್ತಾ ಇದ್ದರೆ ಅದರಿಂದ ಕರುಳು ಕುಗ್ಗುವುದು ಮತ್ತು ಇದರಿಂದ ಸಾಮಾನ್ಯವಾಗಿ ಸೇವಿಸುವಷ್ಟು ಆಹಾರ ಸೇವಿಸಲು ಸಾಧ್ಯವಾಗದು. ಹೊಟ್ಟೆಯಲ್ಲಿನ ಆಮ್ಲದ ಉತ್ಪಾದನೆಯು ಕಡಿಮೆಯಾಗುವುದು. ದೀರ್ಘಕಾಲ ತನಕ ಅಥವಾ ನಿಯಮಿತವಾಗಿ ಹಸಿವು ತಡೆದುಕೊಳ್ಳುತ್ತಾ ಇದ್ದರೆ ಹೊಟ್ಟೆಯಲ್ಲಿರುವ ಕಿಣ್ವಗಳು ತಮ್ಮ ಚಟುವಟಿಕೆ ನಿಲ್ಲಿಸಬಹುದು. ಇಂತಹ ಸಮಯದಲ್ಲಿ ನಿಮಗೆ ಚಿಕಿತ್ಸೆ ಬೇಕಾಗಬಹುದು.

ಮಲಬದ್ಧತೆ

ಮಲಬದ್ಧತೆ

ನಾರಿನಾಂಶದ ಸಹಿತ ಕೆಲವೊಂದು ಪ್ರಮುಖ ಪೋಷಕಾಂಶಗಳು ದೇಹಕ್ಕೆ ಲಬ್ಯವಾಗುತ್ತಿಲ್ಲವೆಂದು ಮಲಬದ್ದತೆಯಿಂದ ತಿಳಿದುಬರುವುದು. ನಾರಿನಾಂಶವಿರುವ ಆಹಾರ ಸೇವನೆ ಮಾಡದೆ ಇದ್ದರೆ ಮಲಬದ್ಧತೆ ಉಂಟಾಗುವುದು. ಮಲವು ಗಟ್ಟಿಯಾಗುವುದು ಮತ್ತು ಸೇವಿಸುವ ಆಹಾರದ ಪ್ರಮಾಣವು ಕಡಿಮೆಯಾಗುವುದು.

ಅತಿಯಾಗಿ ಕೂದಲು ಉದುರುವಿಕೆ

ಅತಿಯಾಗಿ ಕೂದಲು ಉದುರುವಿಕೆ

ಕೂದಲು ಸಾಮಾನ್ಯವಾಗಿ ಪ್ರೋಟೀನ್ ನಿಂದ ಮಾಡಲ್ಪಟ್ಟಿರುವುದು. ಆದರೆ ಇದಕ್ಕೆ ಕ್ಯಾಲ್ಸಿಯಂ, ಕಬ್ಬಿನಾಂಶ ಮತ್ತು ಏಕಪರ್ಯಾಪ್ತ ಕೊಬ್ಬಿನಾಮ್ಲವು ಅಗತ್ಯವಿದೆ. ಈ ಎಲ್ಲವೂ ದೇಹಕ್ಕೆ ಸಿಗದೆ ಇದ್ದರೆ ತಲೆಬುರುಡೆಯು ಒಣಗುವುದು ಮತ್ತು ಕೂದಲಿನ ಕಿರುಚೀಲಗಳು ದುರ್ಬಲವಾಗುವುದು. ಇದರಿಂದ ಕೂದಲು ಉದುರುವಿಕೆ ಹೆಚ್ಚಾಗುವುದು.

ಕೋಪ ಮತ್ತು ಕಿರಿಕಿರಿ

ಕೋಪ ಮತ್ತು ಕಿರಿಕಿರಿ

ನೀವು ಯಾವಾಗಲೂ ಕುಪಿತರಾಗಲು ಮತ್ತು ಕಿರಿಕಿರಿಯಿಂದ ಇರಲು ಕಾರಣವೇನೆಂದು ಯಾವತ್ತಾದರೂ ಯೋಚಿಸಿದ್ದೀರಾ? ಬೆಳಗ್ಗಿನ ಉಪಾಹಾರ ತ್ಯಜಿಸಿರುವುದೇ ಇದಕ್ಕೆ ಕಾರಣವಾಗಿದೆ. ಇದರ ಹಿಂದೆ ಒಂದು ಸರಳ ನಿಯಮವಿದೆ. ಹೊಟ್ಟೆ ಹಸಿದಿರುವಾಗ ಸೆರೊಟೊನಿನ್ ಮಟ್ಟವು ಕುಸಿಯುವುದು. ಇದರಿಂದ ನಿಮಗೆ ಕೋಪ ಮತ್ತು ಕಿರಿಕಿರಿ ಉಂಟಾಗುವುದು.

English summary

This Is What Happens When You Don’t Eat Enough Food

Food is a human's basic requirement in order to survive.It provides nourishment to our body. It also provides energy to carry out our day to day activities. Our body needs three proper and balanced meals a day to be healthy physically and mentally. A lot of people neglect their meals frequently. This may be due to their hectic lifestyle or dieting. People also follow fad diets blindly in order to slim down and get into shape.So on this National Nutrition Week, we have listed a few things that happen to your body if you are not eating enough food
Story first published: Tuesday, September 5, 2017, 18:37 [IST]
X
Desktop Bottom Promotion