Latest Updates
-
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು
ಸರಿಯಾಗಿ ಊಟ-ತಿಂಡಿ ಮಾಡದಿದ್ದರೆ, ಇಂತಹ ಸಮಸ್ಯೆ ನಿಮಗೂ ಬರಬಹುದು!
ಭೂಮಿ ಮೇಲೆ ಯಾರಿಗೂ ಹಸಿವಾಗದೆ ಇರುತ್ತಾ ಇದ್ದರೆ ಏನಾಗುತ್ತಾ ಇತ್ತು ಎಂದು ಕಲ್ಪನೆ ಮಾಡಿಕೊಳ್ಳುವುದು ಕಷ್ಟ. ಭೂಮಿ ಮೇಲಿರುವ ಪ್ರತಿಯೊಬ್ಬ ವ್ಯಕ್ತಿ ಕೂಡ ಹೊಟ್ಟೆಪಾಡಿಗಾಗಿ ಏನಾದರೊಂದು ಕೆಲಸ ಮಾಡುತ್ತಾ ಇರುತ್ತಾನೆ. ಹಸಿವೇ ಇಲ್ಲದೆ ಇರುತ್ತಿದ್ದರೆ ಯಾರು ಕೆಲಸ ಮಾಡುತ್ತಾ ಇರಲಿಲ್ಲ. ಕೆಲಸ ಮಾಡಲು ನಮ್ಮ ದೇಹಕ್ಕೆ ಶಕ್ತಿ ಬೇಕು. ದೇಹಕ್ಕೆ ಶಕ್ತಿ ಬರುವುದು ನಾವು ತಿನ್ನುವಂತಹ ಆಹಾರದಿಂದ. ತಿನ್ನುವ ಆಹಾರವು ದೇಹಕ್ಕೆ ಪೋಷಕಾಂಶ ಒದಗಿಸುವುದು. ಇದರಿಂದಾಗಿಯೇ ನಾವು ದೈನಂದಿನ ಕೆಲಸಕಾರ್ಯ ಮಾಡಲು ಶಕ್ತಿ ದೊರಕುವುದು.
ದೈಹಿಕ ಹಾಗೂ ಮಾನಸಿಕವಾಗಿ ಬಲಿಷ್ಠರಾಗಿರಲು ತಿನ್ನುವಂತಹ ಆಹಾರವು ಸಮತೋಲಿತವಾಗಿರಬೇಕು. ಇಂದಿನ ವ್ಯಸ್ತ ಜೀವನದಲ್ಲಿ ಕೆಲವರಿಗೆ ಸರಿಯಾಗಿ ಊಟ ಮಾಡಲು ಸಮಯವಿರುವುದಿಲ್ಲ. ಇನ್ನು ಕೆಲವರು ದೇಹ ಇನ್ನಷ್ಟು ಸಪೂರವಾಗಬೇಕೆಂಬ ಇಚ್ಛೆಯಲ್ಲಿ ಆಹಾರವನ್ನೇ ತ್ಯಜಿಸುತ್ತಾರೆ. ಊಟ ಮಾಡದೆ ಇರುವುದು ಸರಿಯಾದ ಕ್ರಮವಲ್ಲ ಮತ್ತು ಇದು ಅನಾರೋಗ್ಯಕಾರಿ.
ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟ ಮಾಡಲು ನಿಮ್ಮಲ್ಲಿ ಸರಿಯಾದ ಸಮಯವಿಲ್ಲವೆಂದಾದರೆ ಅದರಿಂದ ದೇಹಕ್ಕೆ ಬೇಕಾಗಿರುವ ಪೋಷಕಾಂಶಗಳ ಕೊರತೆಯಾಗುವುದು. ರಾಷ್ಟ್ರೀಯ ಪೋಷಕಾಂಶಗಳ ವಾರದಂದು ಆಹಾರ ಸೇವನೆ ಮಾಡದೇ ಇದ್ದರೆ ದೇಹಕ್ಕೆ ಏನಾಗಬಹುದು ಎಂದು ಬೋಲ್ಡ್ ಸ್ಕೈ ಈ ಲೇಖನ ಮೂಲಕ ಹೇಳಲಿದೆ.....

ಜೀರ್ಣಕ್ರಿಯೆ ಪರಿಣಾಮ
ನಾವು ತಿನ್ನುವಂತಹ ಎಲ್ಲಾ ಆಹಾರವು ಹೊಟ್ಟೆಗೆ ಹೋಗಿ ಸೇರಿಕೊಳ್ಳುವುದು. ಹಸಿವು ನಿಯಂತ್ರಿಸುತ್ತಾ ಇದ್ದರೆ ಅದರಿಂದ ಕರುಳು ಕುಗ್ಗುವುದು ಮತ್ತು ಇದರಿಂದ ಸಾಮಾನ್ಯವಾಗಿ ಸೇವಿಸುವಷ್ಟು ಆಹಾರ ಸೇವಿಸಲು ಸಾಧ್ಯವಾಗದು. ಹೊಟ್ಟೆಯಲ್ಲಿನ ಆಮ್ಲದ ಉತ್ಪಾದನೆಯು ಕಡಿಮೆಯಾಗುವುದು. ದೀರ್ಘಕಾಲ ತನಕ ಅಥವಾ ನಿಯಮಿತವಾಗಿ ಹಸಿವು ತಡೆದುಕೊಳ್ಳುತ್ತಾ ಇದ್ದರೆ ಹೊಟ್ಟೆಯಲ್ಲಿರುವ ಕಿಣ್ವಗಳು ತಮ್ಮ ಚಟುವಟಿಕೆ ನಿಲ್ಲಿಸಬಹುದು. ಇಂತಹ ಸಮಯದಲ್ಲಿ ನಿಮಗೆ ಚಿಕಿತ್ಸೆ ಬೇಕಾಗಬಹುದು.

ಮಲಬದ್ಧತೆ
ನಾರಿನಾಂಶದ ಸಹಿತ ಕೆಲವೊಂದು ಪ್ರಮುಖ ಪೋಷಕಾಂಶಗಳು ದೇಹಕ್ಕೆ ಲಬ್ಯವಾಗುತ್ತಿಲ್ಲವೆಂದು ಮಲಬದ್ದತೆಯಿಂದ ತಿಳಿದುಬರುವುದು. ನಾರಿನಾಂಶವಿರುವ ಆಹಾರ ಸೇವನೆ ಮಾಡದೆ ಇದ್ದರೆ ಮಲಬದ್ಧತೆ ಉಂಟಾಗುವುದು. ಮಲವು ಗಟ್ಟಿಯಾಗುವುದು ಮತ್ತು ಸೇವಿಸುವ ಆಹಾರದ ಪ್ರಮಾಣವು ಕಡಿಮೆಯಾಗುವುದು.

ಅತಿಯಾಗಿ ಕೂದಲು ಉದುರುವಿಕೆ
ಕೂದಲು ಸಾಮಾನ್ಯವಾಗಿ ಪ್ರೋಟೀನ್ ನಿಂದ ಮಾಡಲ್ಪಟ್ಟಿರುವುದು. ಆದರೆ ಇದಕ್ಕೆ ಕ್ಯಾಲ್ಸಿಯಂ, ಕಬ್ಬಿನಾಂಶ ಮತ್ತು ಏಕಪರ್ಯಾಪ್ತ ಕೊಬ್ಬಿನಾಮ್ಲವು ಅಗತ್ಯವಿದೆ. ಈ ಎಲ್ಲವೂ ದೇಹಕ್ಕೆ ಸಿಗದೆ ಇದ್ದರೆ ತಲೆಬುರುಡೆಯು ಒಣಗುವುದು ಮತ್ತು ಕೂದಲಿನ ಕಿರುಚೀಲಗಳು ದುರ್ಬಲವಾಗುವುದು. ಇದರಿಂದ ಕೂದಲು ಉದುರುವಿಕೆ ಹೆಚ್ಚಾಗುವುದು.

ಕೋಪ ಮತ್ತು ಕಿರಿಕಿರಿ
ನೀವು ಯಾವಾಗಲೂ ಕುಪಿತರಾಗಲು ಮತ್ತು ಕಿರಿಕಿರಿಯಿಂದ ಇರಲು ಕಾರಣವೇನೆಂದು ಯಾವತ್ತಾದರೂ ಯೋಚಿಸಿದ್ದೀರಾ? ಬೆಳಗ್ಗಿನ ಉಪಾಹಾರ ತ್ಯಜಿಸಿರುವುದೇ ಇದಕ್ಕೆ ಕಾರಣವಾಗಿದೆ. ಇದರ ಹಿಂದೆ ಒಂದು ಸರಳ ನಿಯಮವಿದೆ. ಹೊಟ್ಟೆ ಹಸಿದಿರುವಾಗ ಸೆರೊಟೊನಿನ್ ಮಟ್ಟವು ಕುಸಿಯುವುದು. ಇದರಿಂದ ನಿಮಗೆ ಕೋಪ ಮತ್ತು ಕಿರಿಕಿರಿ ಉಂಟಾಗುವುದು.



Click it and Unblock the Notifications