Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಆಹಾರ ಪಥ್ಯ ಸರಿಯಾಗಿದ್ದರೆ ಕ್ಯಾನ್ಸರ್ ಭಯ, ದೂರ ಬಲು ದೂರ!
ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯ. ಇತ್ತೀಚೆಗೆ ಹೆಚ್ಚುನ ಜನರು ಮಾರಕ ಕಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ನಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಲ್ಲಿ ಕಾಯಿಲೆಗಳಿಂದ ದೂರವಿರಬಹುದು. ಇತ್ತೀಚಿಗಿನ ವೈದ್ಯಕೀಯ ಸಂಶೋಧನೆಗಳ ಪ್ರಕಾರ ಶೇ 86% ಜನಗಳು ದೊಡ್ಡ ಕರುಳಿನ ಕ್ಯಾನ್ಸರ್ ಸಮಸ್ಯೆಯಿಂದ ನರಳುತ್ತಿದ್ದಾರೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ಬೆಳೆಯುವಂತಹ ಚೆರಿ, ಸ್ಟ್ರಾಬೆರಿ, ಖರ್ಜೂರ ಹಾಗೂ ಇನ್ನಿತರ ಹಣ್ಣುಗಳ ಹೆಚ್ಚಿನ ಸೇವನೆಯಿಂದ ದೊಡ್ಡ ಕರುಳಿನ ಕ್ಯಾನ್ಸರ್ ನಂತಹ ಕಾಯಿಲೆಗಳನ್ನು ತಡೆಗಟ್ಟಬಹುದು. ನಮ್ಮ ನಿತ್ಯ ಸೇವನೆಯಾದ ಮಾಂಸಹಾರ, ಕುಡಿತ ಹಾಗೂ ಕಡಿಮೆ ನಾರಿನಾಂಶವಿರುವ ಆಹಾರಗಳನ್ನು ಸೇವನೆ ಮಾಡಿದಲ್ಲಿ ಬೇಗನೆ ದೊಡ್ಡ ಕುರುಳಿಗೆ ತಗಲುವಂತಹ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತೇವೆ.

ಟೆಲಿ ಅಲಿವ್ ಮೆಡಿಕಲ್ ಸೆಂಟರ್ ಇಸ್ರೇಲ್ ನ ಖ್ಯಾತ ವೈದ್ಯರಾದಂತಹ ನವೋಮಿ ಫ್ಲಿಸ್ ಇಸಾಕೋ ಪ್ರಕಾರ ಶೇ 36% ಜನರು ಮೇಲೆ ತಿಳಿಸಿದಂತಹ ಆಹಾರ ಸೇವನೆಯಿಂದ ಆರೋಗ್ಯವಂತರಾಗಿಯೂ ಉಳಿದ ಸೇವನೆ ಮಾಡದೆ ಇರುವಂತವರು ಬೇಗ ಕಾಯಿಲೆಗೆ ತುತ್ತಾಗುತ್ತಾರೆ. ದೊಡ್ಡ ಕರುಳಿನ ಕ್ಯಾನ್ಸರ್ ಅನ್ನು ತಡೆಗಟ್ಟಲು ಈ ರೀತೀಯ ಡಯಟ್ ಬಳಕೆ ಮಾಡಿದಲ್ಲಿ ಶೇ.86% ಜನರು ರೋಗ ನಿರೋಧಕ ಶಕ್ತಿಯನ್ನು ಬೆಳೆಸಿಕೊಂಡು ಆರೋಗ್ಯವಂತರಾಗಿ ಇರಬಹುದೆಂಬುದು ಇಸಾಕೋವ್ ರವರ ಅಭಿಪ್ರಾಯ...
ESMO 19ನೇ ವರ್ಲ್ಡ್ ಕಾಂಗ್ರೆಸ್ ದೊಡ್ಡ ಕರುಳಿನ ವೈದ್ಯಕೀಯ ಸಮಾವೇಶದಲ್ಲಿ ಅಂದಾಜು 800ಕ್ಕಿಂತಲೂ ಅಧಿಕ ಸಂಖ್ಯೆಯ 40 ರಿಂದ 70 ವಯಸ್ಸಿನವರನ್ನು ಕೊಲೊನೋಸ್ಕೋಪಿ ಪರೀಕ್ಷೆಗೆ ಒಳ ಪಡಿಸಿದಾಗ ಮಧ್ಯಪ್ರಾಚಿ ಆಹಾರವನ್ನು ಅನುಸರಿಸಿದವರು ನಿರೋಗಿಗಳಾಗಿದ್ದರು.
ಹಸಿರು ತರಕಾರಿಗಳು, ದ್ವಿದಳಧಾನ್ಯಗಳು, ಹಾಲು, ಬೆಣ್ಣೆ, ಮೊಟ್ಟೆ ಮತ್ತು ಜಿಡ್ಡಿನಾಂಶ ಕಡಿಮೆಯಿರುವಂತಹ ಆಹಾರವನ್ನು ಸ್ವೀಕರಿಸಿ ದುಷ್ಚಟವಾದ ಕುಡಿತ, ಮಾಂಸ, ತಂಪು ಪಾನೀಯಗಳನ್ನು ದೂರವಿಟ್ಟಲ್ಲಿ ಮತ್ತು ಸಮತೋಲನ ಆಹಾರವನ್ನು ಸ್ವೀಕರಿಸಿದಲ್ಲಿ ಆರೋಗ್ಯವಾಗಿರಬಹುದು....
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

