Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬೇಗನೇ ನಿದ್ದೆ ಬರಬೇಕೇ? ಅರಿಶಿನ ಬೆರೆಸಿದ ತೆಂಗಿನ ಹಾಲು ಕುಡಿಯಿರಿ...
ಅರಿಶಿನದ ಪುಡಿ ಬೆರೆಸಿದ ಹಾಲಿನ ಸೇವನೆಯನ್ನು ಆಯುರ್ವೇದದಲ್ಲಿ ಉತ್ತಮ ಎಂದು ಬಣ್ಣಿಸಲಾಗಿದೆ. ವಿಶೇಷವಾಗಿ ರಾತ್ರಿ ಮಲಗುವ ಮುನ್ನ ಕುಡಿಯುವುದರಿಂದ ಬೇಗನೇ ನಿದ್ದೆ ಆವರಿಸಲು ನೆರವಾಗುತ್ತದೆ ಹಾಗೂ ದೇಹವನ್ನು ಬೆಚ್ಚಗಿರಿಸಲು ನೆರವಾಗುತ್ತದೆ.
ಇಂದು ಹಾಲಿನ ಬದಲು ತೆಂಗಿನ ಹಾಲನ್ನು ಬಳಸಿದರೆ ಯಾವ ರೀತಿಯ ಪ್ರಯೋಜನಗಳಿವೆ ಎಂಬುದನ್ನು ನೋಡೋಣ. ಇದಕ್ಕೆ ಕೊಂಚವೇ ಹಸಿಶುಂಠಿ ಬೆರೆಸಿ ಇದರ ಉರಿಯೂತ ನಿವಾರಕ ಗುಣಗಳನ್ನು ಪಡೆಯುವ ಮೂಲಕ ಈ ದ್ರವವನ್ನು ಇನ್ನಷ್ಟು ಪ್ರಯೋಜನಕಾರಿಯಾಗಿಸಬಹುದು.

ಅಷ್ಟೇ ಅಲ್ಲ, ಕೊಂಚವೇ ಜೇನನ್ನು ಬೆರೆಸಿ ಇದರ ಆರೋಗ್ಯಕರ ಗುಣಗಳನ್ನು ಇನ್ನಷ್ಟು ವೃದ್ಧಿಸಬಹುದು. ತೆಂಗಿನ ಹಾಲಿನಲ್ಲಿ ಪ್ರಮುಖವಾಗಿ ಲಾರಿಕ್ ಆಮ್ಲ, ಕ್ಯಾಪ್ರಿಕ್ ಆಮ್ಲ, ಬ್ಯಾಕ್ಟೀರಿಯಾ ನಿರೋಧಕ ಮೇಧಸ್ಸು (anti-microbial lipids) ಹಾಗೂ ಆರೋಗ್ಯಕರ ಕೊಬ್ಬು ಇವೆ. ಅಲ್ಲದೇ ಶಿಲೀಂಧ್ರ ನಿವಾರಕ ಹಾಗೂ ವೈರಸ್ ನಿವಾರಕ ಗುಣಗಳನ್ನೂ ಹೊಂದಿದೆ. ಇವೆಲ್ಲವೂ ಈ ಪೇಯವನ್ನು ಆರೋಗ್ಯಕರ ಪೇಯವನ್ನಾಗಿಸಿವೆ. ಇದರ ಸೇವನೆಯಿಂದ ಅತಿ ಕಡಿಮೆ ಸಮಯದಲ್ಲಿ ನಿದ್ದೆ ಆವರಿಸುವುದು ಇದರ ಪ್ರಮುಖ ಪ್ರಯೋಜನವಾಗಿದೆ. ಬನ್ನಿ, ಈ ಪೇಯವನ್ನು ತಯಾರಿಸುವುದು ಹೇಗೆ ಎಂಬುದನ್ನು ನೋಡೋಣ...
ಅಗತ್ಯವಿರುವ ಸಾಮಾಗ್ರಿಗಳು:
*ಒಂದು ಚಿಕ್ಕಚಮಚ ಜೇನು
*ಚಿಟಿಕೆಯಷ್ಟು ಕಾಳುಮೆಣಸಿನ ಪುಡಿ
*ಒಂದು ಚಿಕ್ಕ ಚಮಚ ಅರಿಶಿನ ಪುಡಿ
*ಒಂದು ಚಿಕ್ಕ ತುಂಡು ಹಸಿಶುಂಠಿ (ಜಜ್ಜಿದ್ದು)
*ಎರಡು ಕಪ್ ತೆಂಗಿನ ಹಾಲು.
ತಯಾರಿಕಾ ವಿಧಾನ:
*ಜೇನನ್ನು ಹೊರತುಪಡಿಸಿ ಬೇರೆಲ್ಲಾ ಸಾಮಾಗ್ರಿಗಳನ್ನು ಒಂದು ಚಿಕ್ಕ ಬೋಗುಣಿಯಲ್ಲಿ ಹಾಕಿ ಮಧ್ಯಮ ಉರಿಯಲ್ಲಿ ಕುದಿಯುವವರೆಗೆ ಬಿಸಿ ಮಾಡಿ.
*ಕುದಿಯಲು ಆರಂಭವಾಗುತ್ತಲೂ ಉರಿಯನ್ನು ಚಿಕ್ಕದಾಗಿಸಿ ಐದು ನಿಮಿಷ ಕುದಿಸಿ. ಬಳಿಕ ಈ ಪೇಯವನ್ನು ಸೋಸಿ
*ಇನ್ನೊಂದು ಪಾತ್ರೆಯಲ್ಲಿ ಸಂಗ್ರಹಿಸಿ. ಬಳಿಕ ಜೇನನ್ನು ಬೆರೆಸಿ ಕಲಕಿ.
*ಅರಿಶಿನ ಪುಡಿಯಲ್ಲಿರುವ ಕುರ್ಕುಮಿನ್ ಎಂಬ ಪೋಷಕಾಂಶಕ್ಕೆ ಉರಿಯೂತ ನಿವಾರಕ ಗುಣವಿದೆ. ಅರಿಶಿನದಲ್ಲಿ ಆಂಟಿ ಆಕ್ಸಿಡೆಂಟುಗಳೂ ಇವೆ. ಇವುಗಳು ಸಂಧಿವಾತದಿಂದ ರಕ್ಷಿಸುತ್ತವೆ ಹಾಗೂ ಇತರ ಉರಿಯೂತಗಳಿಂದಲೂ ರಕ್ಷಣೆ ನೀಡುತ್ತವೆ.
ಈ ಪೇಯದ ಸೇವನೆಯ ಬಳಿಕ ಮೆದುಳಿಗೆ ರವಾನೆಯಾಗುವ ಸೆರೋಟೋನಿನ್ ಹಾಗೂ ಡೋಪಮೈನ್ ಎಂಬ ರಸದೂತಗಳ ಪ್ರಮಾಣ ಹೆಚ್ಚುತ್ತದೆ. ಇವು ಮೆದುಳಿಗೆ ಮುದ ನೀಡುವ ರಸದೂತಗಳಾಗಿದ್ದು ಖಿನ್ನತೆಯಿಂದ ರಕ್ಷಿಸುತ್ತವೆ.
ಮನಸ್ಸು ನಿರಾಳವಾಗಿ ಶೀಘ್ರವೇ ನಿದ್ದೆಗೆ ಜಾರಲು ನೆರವಾಗುತ್ತದೆ. ಅಲ್ಲದೇ ವೃದ್ಧಾಪ್ಯ ಆವರಿಸುವ ಗತಿಯನ್ನು ನಿಧಾನವಾಗಿಸುತ್ತದೆ ಹಾಗೂ ಯಕೃತ್ನಲ್ಲಿರುವ ಕಲ್ಮಶಗಳನ್ನು ನಿವಾರಿಸುತ್ತದೆ. ಅಷ್ಟೇ ಅಲ್ಲ, ಜೀರ್ಣಕ್ರಿಯೆಗೆ ಸಹಕರಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯಲ್ಲಿ ಯಾವುದಾದರೂ ತೊಂದರೆ ಇದ್ದರೆ ಸೂಕ್ತ ಉಪಶಮನವನ್ನೂ ಒದಗಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications














