Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಬೇಗನೇ ನಿದ್ದೆ ಬರಬೇಕೇ? ಅರಿಶಿನ ಬೆರೆಸಿದ ತೆಂಗಿನ ಹಾಲು ಕುಡಿಯಿರಿ...
ಅರಿಶಿನದ ಪುಡಿ ಬೆರೆಸಿದ ಹಾಲಿನ ಸೇವನೆಯನ್ನು ಆಯುರ್ವೇದದಲ್ಲಿ ಉತ್ತಮ ಎಂದು ಬಣ್ಣಿಸಲಾಗಿದೆ. ವಿಶೇಷವಾಗಿ ರಾತ್ರಿ ಮಲಗುವ ಮುನ್ನ ಕುಡಿಯುವುದರಿಂದ ಬೇಗನೇ ನಿದ್ದೆ ಆವರಿಸಲು ನೆರವಾಗುತ್ತದೆ ಹಾಗೂ ದೇಹವನ್ನು ಬೆಚ್ಚಗಿರಿಸಲು ನೆರವಾಗುತ್ತದೆ.
ಇಂದು ಹಾಲಿನ ಬದಲು ತೆಂಗಿನ ಹಾಲನ್ನು ಬಳಸಿದರೆ ಯಾವ ರೀತಿಯ ಪ್ರಯೋಜನಗಳಿವೆ ಎಂಬುದನ್ನು ನೋಡೋಣ. ಇದಕ್ಕೆ ಕೊಂಚವೇ ಹಸಿಶುಂಠಿ ಬೆರೆಸಿ ಇದರ ಉರಿಯೂತ ನಿವಾರಕ ಗುಣಗಳನ್ನು ಪಡೆಯುವ ಮೂಲಕ ಈ ದ್ರವವನ್ನು ಇನ್ನಷ್ಟು ಪ್ರಯೋಜನಕಾರಿಯಾಗಿಸಬಹುದು.

ಅಷ್ಟೇ ಅಲ್ಲ, ಕೊಂಚವೇ ಜೇನನ್ನು ಬೆರೆಸಿ ಇದರ ಆರೋಗ್ಯಕರ ಗುಣಗಳನ್ನು ಇನ್ನಷ್ಟು ವೃದ್ಧಿಸಬಹುದು. ತೆಂಗಿನ ಹಾಲಿನಲ್ಲಿ ಪ್ರಮುಖವಾಗಿ ಲಾರಿಕ್ ಆಮ್ಲ, ಕ್ಯಾಪ್ರಿಕ್ ಆಮ್ಲ, ಬ್ಯಾಕ್ಟೀರಿಯಾ ನಿರೋಧಕ ಮೇಧಸ್ಸು (anti-microbial lipids) ಹಾಗೂ ಆರೋಗ್ಯಕರ ಕೊಬ್ಬು ಇವೆ. ಅಲ್ಲದೇ ಶಿಲೀಂಧ್ರ ನಿವಾರಕ ಹಾಗೂ ವೈರಸ್ ನಿವಾರಕ ಗುಣಗಳನ್ನೂ ಹೊಂದಿದೆ. ಇವೆಲ್ಲವೂ ಈ ಪೇಯವನ್ನು ಆರೋಗ್ಯಕರ ಪೇಯವನ್ನಾಗಿಸಿವೆ. ಇದರ ಸೇವನೆಯಿಂದ ಅತಿ ಕಡಿಮೆ ಸಮಯದಲ್ಲಿ ನಿದ್ದೆ ಆವರಿಸುವುದು ಇದರ ಪ್ರಮುಖ ಪ್ರಯೋಜನವಾಗಿದೆ. ಬನ್ನಿ, ಈ ಪೇಯವನ್ನು ತಯಾರಿಸುವುದು ಹೇಗೆ ಎಂಬುದನ್ನು ನೋಡೋಣ...
ಅಗತ್ಯವಿರುವ ಸಾಮಾಗ್ರಿಗಳು:
*ಒಂದು ಚಿಕ್ಕಚಮಚ ಜೇನು
*ಚಿಟಿಕೆಯಷ್ಟು ಕಾಳುಮೆಣಸಿನ ಪುಡಿ
*ಒಂದು ಚಿಕ್ಕ ಚಮಚ ಅರಿಶಿನ ಪುಡಿ
*ಒಂದು ಚಿಕ್ಕ ತುಂಡು ಹಸಿಶುಂಠಿ (ಜಜ್ಜಿದ್ದು)
*ಎರಡು ಕಪ್ ತೆಂಗಿನ ಹಾಲು.
ತಯಾರಿಕಾ ವಿಧಾನ:
*ಜೇನನ್ನು ಹೊರತುಪಡಿಸಿ ಬೇರೆಲ್ಲಾ ಸಾಮಾಗ್ರಿಗಳನ್ನು ಒಂದು ಚಿಕ್ಕ ಬೋಗುಣಿಯಲ್ಲಿ ಹಾಕಿ ಮಧ್ಯಮ ಉರಿಯಲ್ಲಿ ಕುದಿಯುವವರೆಗೆ ಬಿಸಿ ಮಾಡಿ.
*ಕುದಿಯಲು ಆರಂಭವಾಗುತ್ತಲೂ ಉರಿಯನ್ನು ಚಿಕ್ಕದಾಗಿಸಿ ಐದು ನಿಮಿಷ ಕುದಿಸಿ. ಬಳಿಕ ಈ ಪೇಯವನ್ನು ಸೋಸಿ
*ಇನ್ನೊಂದು ಪಾತ್ರೆಯಲ್ಲಿ ಸಂಗ್ರಹಿಸಿ. ಬಳಿಕ ಜೇನನ್ನು ಬೆರೆಸಿ ಕಲಕಿ.
*ಅರಿಶಿನ ಪುಡಿಯಲ್ಲಿರುವ ಕುರ್ಕುಮಿನ್ ಎಂಬ ಪೋಷಕಾಂಶಕ್ಕೆ ಉರಿಯೂತ ನಿವಾರಕ ಗುಣವಿದೆ. ಅರಿಶಿನದಲ್ಲಿ ಆಂಟಿ ಆಕ್ಸಿಡೆಂಟುಗಳೂ ಇವೆ. ಇವುಗಳು ಸಂಧಿವಾತದಿಂದ ರಕ್ಷಿಸುತ್ತವೆ ಹಾಗೂ ಇತರ ಉರಿಯೂತಗಳಿಂದಲೂ ರಕ್ಷಣೆ ನೀಡುತ್ತವೆ.
ಈ ಪೇಯದ ಸೇವನೆಯ ಬಳಿಕ ಮೆದುಳಿಗೆ ರವಾನೆಯಾಗುವ ಸೆರೋಟೋನಿನ್ ಹಾಗೂ ಡೋಪಮೈನ್ ಎಂಬ ರಸದೂತಗಳ ಪ್ರಮಾಣ ಹೆಚ್ಚುತ್ತದೆ. ಇವು ಮೆದುಳಿಗೆ ಮುದ ನೀಡುವ ರಸದೂತಗಳಾಗಿದ್ದು ಖಿನ್ನತೆಯಿಂದ ರಕ್ಷಿಸುತ್ತವೆ.
ಮನಸ್ಸು ನಿರಾಳವಾಗಿ ಶೀಘ್ರವೇ ನಿದ್ದೆಗೆ ಜಾರಲು ನೆರವಾಗುತ್ತದೆ. ಅಲ್ಲದೇ ವೃದ್ಧಾಪ್ಯ ಆವರಿಸುವ ಗತಿಯನ್ನು ನಿಧಾನವಾಗಿಸುತ್ತದೆ ಹಾಗೂ ಯಕೃತ್ನಲ್ಲಿರುವ ಕಲ್ಮಶಗಳನ್ನು ನಿವಾರಿಸುತ್ತದೆ. ಅಷ್ಟೇ ಅಲ್ಲ, ಜೀರ್ಣಕ್ರಿಯೆಗೆ ಸಹಕರಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯಲ್ಲಿ ಯಾವುದಾದರೂ ತೊಂದರೆ ಇದ್ದರೆ ಸೂಕ್ತ ಉಪಶಮನವನ್ನೂ ಒದಗಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


