Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನಕ್ಕೊಂದು ವಿನೆಗರ್ ಬೆರೆಸಿದ ಮೊಟ್ಟೆ ತಿಂದರೆ-ಮಧುಮೇಹ ಸಮಸ್ಯೆ ನಿಯಂತ್ರಣಕ್ಕೆ!
ಇಂದು ವಿಶ್ವದಲ್ಲಿ ಮಧುಮೇಹಿಗಳ ಸಂಖ್ಯೆ ಅತಿಹೆಚ್ಚಾಗಿದೆ. ಮೇದೋಜೀರಕ ಗ್ರಂಥಿ ಯಾವಾಗ ಅಗತ್ಯವಿದ್ದಷ್ಟು ಇನ್ಸುಲಿನ್ ಅನ್ನು ಉತ್ಪಾದಿಸಲು ವಿಫಲವಾಗುತ್ತದೆಯೋ ಆಗ ಸಕ್ಕರೆಯನ್ನು ಬಳಸಿಕೊಳ್ಳಲು ಸಾಧ್ಯವಾಗದಿರುವುದೇ ಮಧುಮೇಹ (ಟೈಪ್ 1) ಒಂದು ವೇಳೆ ಸಾಕಷ್ಟು ಇನ್ಸುಲಿನ್ ಉತ್ಪತ್ತಿಯಾಗಿದ್ದರೂ ಇದನ್ನು ಬಳಸಿಕೊಳ್ಳಲು ವಿಫಲವಾದರೆ ಇದು ಟೈಪ್ 2 ಮಧುಮೇಹ ಎನ್ನಿಸಿಕೊಳ್ಳುತ್ತದೆ.
ಮಧುಮೇಹದ ಸಾಮಾನ್ಯ ಲಕ್ಷಣಗಳೆಂದರೆ ತೂಕ ಶೀಘ್ರವಾಗಿ ಇಳಿಯುವುದು, ಸುಸ್ತು, ದೃಷ್ಟಿ ಮಂಜಾಗುವುದು, ಪದೇ ಪದೇ ಮೂತ್ರಕ್ಕೆ ಅವಸರವಾಗುವುದು, ಸತತ ಬಾಯಾರಿಕೆ, ಗುಪ್ತಾಂಗಗಳ ಸುತ್ತಲ ಭಾಗದಲ್ಲಿ ಸತತ ತುರಿಕೆ ಮೊದಲಾದವು. ಮಧುಮೇಹವನ್ನು ಗುಣಪಡಿಸಲು ಸಾಧ್ಯವಿಲ್ಲ, ಆದರೆ ಇದನ್ನು ನಿಯಂತ್ರಣದಲ್ಲಿರಿಸುವ ಮೂಲಕ ಸಾಮಾನ್ಯ ಜೀವನ ನಡೆಸಬಹುದು.

ಇದನ್ನು ನಿಯಂತ್ರಿಸದೇ ಹೋದರೆ ಪರೋಕ್ಷ ಪರಿಣಾಮಗಳಿಂದ ಮೂತ್ರಪಿಂಡ ವಿಫಲವಾಗುವುದು, ಹೃದಯದ ತೊಂದರೆ, ಕುರುಡುತನ, ನರವೈಫಲ್ಯ ಹಾಗೂ ಉದ್ರೇಕಗೊಳ್ಳದಿರುವುದು ಮೊದಲಾದ ತೊಂದರೆಗಳು ಎದುರಾಗಬಹುದು. ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ಒಂದು ಸುಲಭ ಉಪಾಯವಿದೆ. ಇದು ಅಲ್ಪಸಮಯದಲ್ಲಿಯೇ ತಯಾರಿಸಲು ಸಾಧ್ಯವಾಗುತ್ತದೆ. ಆದರೆ ರಕ್ತದಲಿ ಸಕ್ಕರೆಯನ್ನು ಹೆಚ್ಚಿಸುವ ಆಹಾರಗಳನ್ನು ಸೇವಿಸದಿರುವುದೂ ಅಷ್ಟೇ ಮುಖ್ಯವಾಗಿದೆ.
ತಯಾರಿಸುವ ವಿಧಾನ
ಒಂದು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸಿಪ್ಪೆ ಸುಲಿಯಿರಿ. ಬಳಿಕ ಮುಳ್ಳುಚಮಚದಿಂದ ಕೆಲವಾರು ಬಾರಿ ಚುಚ್ಚಿ ಒಂದು ಪಾತ್ರೆಯಲ್ಲಿರಿಸಿ.
ಇದರ ಮೇಲೆ ಕೊಂಚ ಶಿರ್ಕಾವನ್ನು ಸಿಂಪಡಿಸಿ ಇಡಿಯ ರಾತ್ರಿ ಹಾಗೇ ಬಿಡಿ.
ಮರುದಿನ ಬೆಳಿಗ್ಗೆ ಒಂದು ಲೋಟದಲ್ಲಿ ಒಂದು ಚಿಕ್ಕ ಚಮಚದಷ್ಟು ಶಿರ್ಕಾ ಬೆರೆಸಿ ಈ ಮೊಟ್ಟೆಯನ್ನು ತಿನ್ನುತ್ತಾ, ನಡುವೆ ಈ ನೀರನ್ನು ಕುಡಿಯುತ್ತಾ ಸೇವಿಸಿ.
ಈ ವಿಧಾನವನ್ನು ಕೆಲವಾರು ದಿನಗಳವರೆಗೆ ಮುಂದುವರೆಸಿ ಕೆಲ ದಿನಗಳ ಬಳಿಕ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಕಡಿಮೆಯಾಗಿರುವುದನ್ನು ಗಮನಿಸಿ. ಅತ್ಯಂತ ಸುಲಭವಾಗಿದ್ದರೂ ಅತಿ ಹೆಚ್ಚು ಪರಿಣಾಮಕಾರಿಯಾಗಿರುವ ಈ ವಿಧಾನ ಅತಿ ಕಡಿಮೆ ಖರ್ಚಿನಲ್ಲಿಯೂ ಆಗುತ್ತದೆ. ಇದುನೈಸರ್ಗಿಕ ವಿಧಾನವಾಗಿದ್ದು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ಅತ್ಯುತ್ತಮ ವಿಧಾನವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications














