Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ದಿನಕ್ಕೊಂದು ವಿನೆಗರ್ ಬೆರೆಸಿದ ಮೊಟ್ಟೆ ತಿಂದರೆ-ಮಧುಮೇಹ ಸಮಸ್ಯೆ ನಿಯಂತ್ರಣಕ್ಕೆ!
ಇಂದು ವಿಶ್ವದಲ್ಲಿ ಮಧುಮೇಹಿಗಳ ಸಂಖ್ಯೆ ಅತಿಹೆಚ್ಚಾಗಿದೆ. ಮೇದೋಜೀರಕ ಗ್ರಂಥಿ ಯಾವಾಗ ಅಗತ್ಯವಿದ್ದಷ್ಟು ಇನ್ಸುಲಿನ್ ಅನ್ನು ಉತ್ಪಾದಿಸಲು ವಿಫಲವಾಗುತ್ತದೆಯೋ ಆಗ ಸಕ್ಕರೆಯನ್ನು ಬಳಸಿಕೊಳ್ಳಲು ಸಾಧ್ಯವಾಗದಿರುವುದೇ ಮಧುಮೇಹ (ಟೈಪ್ 1) ಒಂದು ವೇಳೆ ಸಾಕಷ್ಟು ಇನ್ಸುಲಿನ್ ಉತ್ಪತ್ತಿಯಾಗಿದ್ದರೂ ಇದನ್ನು ಬಳಸಿಕೊಳ್ಳಲು ವಿಫಲವಾದರೆ ಇದು ಟೈಪ್ 2 ಮಧುಮೇಹ ಎನ್ನಿಸಿಕೊಳ್ಳುತ್ತದೆ.
ಮಧುಮೇಹದ ಸಾಮಾನ್ಯ ಲಕ್ಷಣಗಳೆಂದರೆ ತೂಕ ಶೀಘ್ರವಾಗಿ ಇಳಿಯುವುದು, ಸುಸ್ತು, ದೃಷ್ಟಿ ಮಂಜಾಗುವುದು, ಪದೇ ಪದೇ ಮೂತ್ರಕ್ಕೆ ಅವಸರವಾಗುವುದು, ಸತತ ಬಾಯಾರಿಕೆ, ಗುಪ್ತಾಂಗಗಳ ಸುತ್ತಲ ಭಾಗದಲ್ಲಿ ಸತತ ತುರಿಕೆ ಮೊದಲಾದವು. ಮಧುಮೇಹವನ್ನು ಗುಣಪಡಿಸಲು ಸಾಧ್ಯವಿಲ್ಲ, ಆದರೆ ಇದನ್ನು ನಿಯಂತ್ರಣದಲ್ಲಿರಿಸುವ ಮೂಲಕ ಸಾಮಾನ್ಯ ಜೀವನ ನಡೆಸಬಹುದು.

ಇದನ್ನು ನಿಯಂತ್ರಿಸದೇ ಹೋದರೆ ಪರೋಕ್ಷ ಪರಿಣಾಮಗಳಿಂದ ಮೂತ್ರಪಿಂಡ ವಿಫಲವಾಗುವುದು, ಹೃದಯದ ತೊಂದರೆ, ಕುರುಡುತನ, ನರವೈಫಲ್ಯ ಹಾಗೂ ಉದ್ರೇಕಗೊಳ್ಳದಿರುವುದು ಮೊದಲಾದ ತೊಂದರೆಗಳು ಎದುರಾಗಬಹುದು. ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ಒಂದು ಸುಲಭ ಉಪಾಯವಿದೆ. ಇದು ಅಲ್ಪಸಮಯದಲ್ಲಿಯೇ ತಯಾರಿಸಲು ಸಾಧ್ಯವಾಗುತ್ತದೆ. ಆದರೆ ರಕ್ತದಲಿ ಸಕ್ಕರೆಯನ್ನು ಹೆಚ್ಚಿಸುವ ಆಹಾರಗಳನ್ನು ಸೇವಿಸದಿರುವುದೂ ಅಷ್ಟೇ ಮುಖ್ಯವಾಗಿದೆ.
ತಯಾರಿಸುವ ವಿಧಾನ
ಒಂದು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸಿಪ್ಪೆ ಸುಲಿಯಿರಿ. ಬಳಿಕ ಮುಳ್ಳುಚಮಚದಿಂದ ಕೆಲವಾರು ಬಾರಿ ಚುಚ್ಚಿ ಒಂದು ಪಾತ್ರೆಯಲ್ಲಿರಿಸಿ.
ಇದರ ಮೇಲೆ ಕೊಂಚ ಶಿರ್ಕಾವನ್ನು ಸಿಂಪಡಿಸಿ ಇಡಿಯ ರಾತ್ರಿ ಹಾಗೇ ಬಿಡಿ.
ಮರುದಿನ ಬೆಳಿಗ್ಗೆ ಒಂದು ಲೋಟದಲ್ಲಿ ಒಂದು ಚಿಕ್ಕ ಚಮಚದಷ್ಟು ಶಿರ್ಕಾ ಬೆರೆಸಿ ಈ ಮೊಟ್ಟೆಯನ್ನು ತಿನ್ನುತ್ತಾ, ನಡುವೆ ಈ ನೀರನ್ನು ಕುಡಿಯುತ್ತಾ ಸೇವಿಸಿ.
ಈ ವಿಧಾನವನ್ನು ಕೆಲವಾರು ದಿನಗಳವರೆಗೆ ಮುಂದುವರೆಸಿ ಕೆಲ ದಿನಗಳ ಬಳಿಕ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಕಡಿಮೆಯಾಗಿರುವುದನ್ನು ಗಮನಿಸಿ. ಅತ್ಯಂತ ಸುಲಭವಾಗಿದ್ದರೂ ಅತಿ ಹೆಚ್ಚು ಪರಿಣಾಮಕಾರಿಯಾಗಿರುವ ಈ ವಿಧಾನ ಅತಿ ಕಡಿಮೆ ಖರ್ಚಿನಲ್ಲಿಯೂ ಆಗುತ್ತದೆ. ಇದುನೈಸರ್ಗಿಕ ವಿಧಾನವಾಗಿದ್ದು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ಅತ್ಯುತ್ತಮ ವಿಧಾನವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


