Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ದಿನಕ್ಕೊಂದು ವಿನೆಗರ್ ಬೆರೆಸಿದ ಮೊಟ್ಟೆ ತಿಂದರೆ-ಮಧುಮೇಹ ಸಮಸ್ಯೆ ನಿಯಂತ್ರಣಕ್ಕೆ!
ಇಂದು ವಿಶ್ವದಲ್ಲಿ ಮಧುಮೇಹಿಗಳ ಸಂಖ್ಯೆ ಅತಿಹೆಚ್ಚಾಗಿದೆ. ಮೇದೋಜೀರಕ ಗ್ರಂಥಿ ಯಾವಾಗ ಅಗತ್ಯವಿದ್ದಷ್ಟು ಇನ್ಸುಲಿನ್ ಅನ್ನು ಉತ್ಪಾದಿಸಲು ವಿಫಲವಾಗುತ್ತದೆಯೋ ಆಗ ಸಕ್ಕರೆಯನ್ನು ಬಳಸಿಕೊಳ್ಳಲು ಸಾಧ್ಯವಾಗದಿರುವುದೇ ಮಧುಮೇಹ (ಟೈಪ್ 1) ಒಂದು ವೇಳೆ ಸಾಕಷ್ಟು ಇನ್ಸುಲಿನ್ ಉತ್ಪತ್ತಿಯಾಗಿದ್ದರೂ ಇದನ್ನು ಬಳಸಿಕೊಳ್ಳಲು ವಿಫಲವಾದರೆ ಇದು ಟೈಪ್ 2 ಮಧುಮೇಹ ಎನ್ನಿಸಿಕೊಳ್ಳುತ್ತದೆ.
ಮಧುಮೇಹದ ಸಾಮಾನ್ಯ ಲಕ್ಷಣಗಳೆಂದರೆ ತೂಕ ಶೀಘ್ರವಾಗಿ ಇಳಿಯುವುದು, ಸುಸ್ತು, ದೃಷ್ಟಿ ಮಂಜಾಗುವುದು, ಪದೇ ಪದೇ ಮೂತ್ರಕ್ಕೆ ಅವಸರವಾಗುವುದು, ಸತತ ಬಾಯಾರಿಕೆ, ಗುಪ್ತಾಂಗಗಳ ಸುತ್ತಲ ಭಾಗದಲ್ಲಿ ಸತತ ತುರಿಕೆ ಮೊದಲಾದವು. ಮಧುಮೇಹವನ್ನು ಗುಣಪಡಿಸಲು ಸಾಧ್ಯವಿಲ್ಲ, ಆದರೆ ಇದನ್ನು ನಿಯಂತ್ರಣದಲ್ಲಿರಿಸುವ ಮೂಲಕ ಸಾಮಾನ್ಯ ಜೀವನ ನಡೆಸಬಹುದು.

ಇದನ್ನು ನಿಯಂತ್ರಿಸದೇ ಹೋದರೆ ಪರೋಕ್ಷ ಪರಿಣಾಮಗಳಿಂದ ಮೂತ್ರಪಿಂಡ ವಿಫಲವಾಗುವುದು, ಹೃದಯದ ತೊಂದರೆ, ಕುರುಡುತನ, ನರವೈಫಲ್ಯ ಹಾಗೂ ಉದ್ರೇಕಗೊಳ್ಳದಿರುವುದು ಮೊದಲಾದ ತೊಂದರೆಗಳು ಎದುರಾಗಬಹುದು. ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ಒಂದು ಸುಲಭ ಉಪಾಯವಿದೆ. ಇದು ಅಲ್ಪಸಮಯದಲ್ಲಿಯೇ ತಯಾರಿಸಲು ಸಾಧ್ಯವಾಗುತ್ತದೆ. ಆದರೆ ರಕ್ತದಲಿ ಸಕ್ಕರೆಯನ್ನು ಹೆಚ್ಚಿಸುವ ಆಹಾರಗಳನ್ನು ಸೇವಿಸದಿರುವುದೂ ಅಷ್ಟೇ ಮುಖ್ಯವಾಗಿದೆ.
ತಯಾರಿಸುವ ವಿಧಾನ
ಒಂದು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸಿಪ್ಪೆ ಸುಲಿಯಿರಿ. ಬಳಿಕ ಮುಳ್ಳುಚಮಚದಿಂದ ಕೆಲವಾರು ಬಾರಿ ಚುಚ್ಚಿ ಒಂದು ಪಾತ್ರೆಯಲ್ಲಿರಿಸಿ.
ಇದರ ಮೇಲೆ ಕೊಂಚ ಶಿರ್ಕಾವನ್ನು ಸಿಂಪಡಿಸಿ ಇಡಿಯ ರಾತ್ರಿ ಹಾಗೇ ಬಿಡಿ.
ಮರುದಿನ ಬೆಳಿಗ್ಗೆ ಒಂದು ಲೋಟದಲ್ಲಿ ಒಂದು ಚಿಕ್ಕ ಚಮಚದಷ್ಟು ಶಿರ್ಕಾ ಬೆರೆಸಿ ಈ ಮೊಟ್ಟೆಯನ್ನು ತಿನ್ನುತ್ತಾ, ನಡುವೆ ಈ ನೀರನ್ನು ಕುಡಿಯುತ್ತಾ ಸೇವಿಸಿ.
ಈ ವಿಧಾನವನ್ನು ಕೆಲವಾರು ದಿನಗಳವರೆಗೆ ಮುಂದುವರೆಸಿ ಕೆಲ ದಿನಗಳ ಬಳಿಕ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಕಡಿಮೆಯಾಗಿರುವುದನ್ನು ಗಮನಿಸಿ. ಅತ್ಯಂತ ಸುಲಭವಾಗಿದ್ದರೂ ಅತಿ ಹೆಚ್ಚು ಪರಿಣಾಮಕಾರಿಯಾಗಿರುವ ಈ ವಿಧಾನ ಅತಿ ಕಡಿಮೆ ಖರ್ಚಿನಲ್ಲಿಯೂ ಆಗುತ್ತದೆ. ಇದುನೈಸರ್ಗಿಕ ವಿಧಾನವಾಗಿದ್ದು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ಅತ್ಯುತ್ತಮ ವಿಧಾನವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


