Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮನೆ ಔಷಧಿ: ಈ ಏಳು ಸಮಸ್ಯೆಗೆ ಒಂದೇ ಮದ್ದು...'ಜೀರಿಗೆ ನೀರು'
ಪ್ರತಿಯೊಂದು ಸಾಂಬಾರ ಪದಾರ್ಥಗಳಲ್ಲಿ ನಮ್ಮ ದೇಹಕ್ಕೆ ಬೇಕಾಗುವ ರೋಗನಿರೋಧಕ ಶಕ್ತಿ ಹಾಗೂ ಕಾಯಿಲೆಗಳನ್ನು ಬರದಂತೆ ತಡೆಗಟ್ಟುವ ಶಕ್ತಿಯಿದೆ. ಇದರಿಂದಾಗಿ ಹಿಂದಿನಿಂದಲೂ ಭಾರತೀಯರ ಅಡುಗೆ ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸಲಾಗಿದೆ. ಅದರಲ್ಲೂ ಪ್ರತಿಯೊಂದು ಸಾಂಬಾರ ಪದಾರ್ಥಗಳನ್ನು ಒಂದಲ್ಲಾ ಒಂದು ರೀತಿಯಿಂದ ದಿನನಿತ್ಯ ಸೇವಿಸುವ ಕಾರಣದಿಂದಾಗಿ ನಾವು ಕಾಯಿಲೆಗಳಿಂದ ದೂರ ಉಳಿಯುವುದು ಖಚಿತ. ಅಡುಗೆ ಮನೆಯಲ್ಲಿ ಹೆಚ್ಚಿನ ಎಲ್ಲಾ ಖಾದ್ಯಗಳಿಗೆ ಬಳಸುವಂತಹ ಜೀರಿಗೆಯು ತುಂಬಾ ಜನಪ್ರಿಯ.
ಜೀರಿಗೆಯು ಏಷ್ಯಾದ ಹೆಚ್ಚಿನ ದೇಶಗಳಲ್ಲಿ ಸಾಂಬಾರ ಪದಾರ್ಥವಾಗಿ ಬಳಕೆಯಾಗುತ್ತಿದೆ. ಇದರಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಅದರಲ್ಲೂ ಜೀರಿಗೆ ನೀರು ಆರೋಗ್ಯಕ್ಕೆ ಅತ್ಯುತ್ತಮ. ಬಿಸಿ ನೀರಿಗೆ ಸ್ವಲ್ಪ ಜೀರಿಗೆ ಹಾಕಿಕೊಂಡು ಕುದಿಸಿ ಸೋಸಿಕೊಂಡು ನೀರನ್ನು ದಿನದಲ್ಲಿ ಒಂದು ಅಥವಾ ಮೂರು ಸಲ ಕುಡಿಯಬೇಕು. ಇದನ್ನು ಜಲ್ ಜೀರಾವೆಂದು ಕರೆಯಲಾಗುತ್ತದೆ. ಇದರಲ್ಲಿರುವ ಆರೋಗ್ಯ ಲಾಭಗಳ ಬಗ್ಗೆ ಮುಂದಕ್ಕೆ ಓದುತ್ತಾ ತಿಳಿಯಿರಿ....

ಜೀರ್ಣಕ್ರಿಯೆಗೆ ಸಹಕಾರಿ
ಜೀರಿಗೆ ನೀರು ಜೀರ್ಣಕ್ರಿಯೆಗೆ ತುಂಬಾ ಲಾಭಕಾರಿ ಎಂದು ಅಧ್ಯಯನಗಳಿಂದ ತಿಳಿದುಬಂದಿದೆ. ಜೀರಿಗೆ ನೀರು ಕೊಬ್ಬು ಮತ್ತು ಕಾರ್ಬ್ರೋಹೈಡ್ರೇಟ್ಸ್ ವಿಘಟಿಸುವ ಕಿಣ್ವಗಳ ಸ್ರವಿಸುವಿಕೆ ಹೆಚ್ಚಿಸುವುದು. ಹೊಟ್ಟೆಗೆ ಸಂಬಂಧಿಸಿದ ವಿವಿಧ ರೀತಿಯ ಸಮಸ್ಯೆಗಳಾದ ಅತಿಸಾರ, ಬೆಳಗ್ಗಿನ ನೋವು, ವಾಂತಿ ಮತ್ತು ಅಟೋನಿಕ್ ಡಿಸ್ಪೆಪ್ಸಿಯಾವನ್ನು ಕಡಿಮೆ ಮಾಡುವುದು.

ಕಲ್ಮಶ ಹೊರಹಾಕುವುದು
ಜೀರಿಗೆ ನೀರು ಹೊಟ್ಟೆ ಹಾಗೂ ಯಕೃತ್ ಗೆ ಹಲವಾರು ರೀತಿಯ ಲಾಭ ಉಂಟು ಮಾಡಲಿದೆ. ಇದರಲ್ಲಿ ಉನ್ನತ ಮಟ್ಟದ ಆ್ಯಂಟಿಆಕ್ಸಿಡೆಂಟ್ ಇದ್ದು, ಇದು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುವುದು.ದೇಹದ ವಿವಿಧ ಅಂಗಾಂಗಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಲು ಇದು ನೆರವಾಗುವುದು. ಜೀರಿಗೆ ನೀರಿನಲ್ಲಿ ಇರುವಂತಹ ಆಹಾರದ ನಾರಿನಾಂಸವು ದೇಹದಲ್ಲಿರುವ ಹಾನಿಕಾರಕ ಕಲ್ಮಶ ಹೊರಹಾಕಿ ಕರುಳಿನ ಕ್ರಿಯೆ ಸರಾಗವಾಗುವಂತೆ ಮಾಡುವುದು.

ರೋಗನಿರೋಧಕ ಶಕ್ತಿ ಹೆಚ್ಚಳ
ಜೀರಿಗೆಯಲ್ಲಿ ಕಬ್ಬಿನಾಂಶವು ಸಮೃದ್ಧವಾಗಿದೆ. ಇದರಿಂದಾಗಿ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ಒಂದು ಚಮಚ ಜೀರಿಗೆಯಿಂದ ಮಾಡಿರುವಂತಹ ನೀರಿನಲ್ಲಿ 1.3 ಮಿ.ಗ್ರಾಂ ಕಬ್ಬಿನಾಂಶವಿದೆ. ವಿಟಮಿನ್ ಎ ಮತ್ತು ವಿಟಮಿನ್ ಸಿ ಸಮೃದ್ಧವಾಗಿರುವ ಕಾರಣ ಇದು ಆ್ಯಂಟಿಆಕ್ಸಿಡೆಂಟ್ ಆಗಿ ಕೆಲಸ ಮಾಡುವುದು. ನಿಯಮಿತವಾಗಿ ಜೀರಿಗೆ ನೀರಿನ ಸೇವನೆಯಿಂದ ಹಲವಾರು ರೀತಿಯ ಕಾಯಿಲೆಗಳು ದೂರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

ರಕ್ತಹೀನತೆ ನಿವಾರಣೆ
ಜೀರಿಗೆಯಲ್ಲಿ ಇರುವಂತಹ ಕಬ್ಬಿನಾಂಶವು ರಕ್ತಹೀನತೆಯ ನಿವಾರಣೆ ಮಾಡುವುದು. ಕಬ್ಬಿನಾಂಶವು ದೇಹದಲ್ಲಿ ಹಲವಾರು ರೀತಿಯ ಕೆಲಸಗಳನ್ನು ನಿರ್ಹಿಸುವುದು. ಇದು ಕೆಂಪು ರಕ್ತ ಕಣಗಳನ್ನು ನಿರ್ಮಿಸುವುದು ಮತ್ತು ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸುವುದು. ದೇಹದಲ್ಲಿ ಕಬ್ಬಿನಾಂಶ ಕಡಿಮೆಯಿದ್ದರೆ ನಿವಾರಣೆ ಮಾಡಿ ರಕ್ತಹೀನತೆ ಸಮಸ್ಯೆ ಬಗೆಹರಿಸಬಹುದು.

ನೆನಪಿನ ಶಕ್ತಿ ಹೆಚ್ಚಳ
ಜೀರಿಗೆ ನೀರು ಮೆದುಳಿನ ಆರೋಗ್ಯ ವೃದ್ಧಿಸಿ ನೆನಪಿನ ಶಕ್ತಿ ಹೆಚ್ಚಿಸುವುದು. ಬಾಲ್ಯದಿಂದಲೇ ಮಕ್ಕಳಿಗೆ ಜೀರಿಗೆ ನೀರು ಕುಡಿಸುತ್ತಾ ಬಂದರೆ ಅವರ ಜ್ಞಾಪಕ ಶಕ್ತಿಯು ಹೆಚ್ಚುವುದನ್ನು ನೀವು ಕಾಣಬಹುದು.

ಒಳ್ಳೆಯ ಗುಣಮಟ್ಟದ ನಿದ್ರೆಗೆ
ನಿದ್ರಾಹೀನತೆ ಸಮಸ್ಯೆ ನಿವಾರಣೆ ಮಾಡುವಲ್ಲಿ ಜೀರಿಗೆ ನೀರು ಪ್ರಮುಖ ಪಾತ್ರ ನಿರ್ವಹಿಸುವುದು. ಜೀರಿಗೆ ನೀರು ದಿನನಿತ್ಯ ಸೇವನೆ ಮಾಡುತ್ತಲಿದ್ದರೆ ನೀವು ಒಳ್ಳೆಯ ನಿದ್ರೆ ಪಡೆಯಬಹುದು.

ಮಹಿಳೆಯರ ಆರೋಗ್ಯ ವೃದ್ಧಿ
ಜೀರಿಗೆ ನೀರು ಗರ್ಭಿಣಿ ಮಹಿಳೆಯರು ಮತ್ತು ಬಾಣಂತಿ ಮಹಿಳೆಯರಿಗೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಭ್ರೂಣದ ಬೆಳವಣಿಗೆಗೆ ಅಗತ್ಯವಾಗಿರುವಂತಹ ಕಬ್ಬಿನಾಂಶವನ್ನು ಇದು ಒದಗಿಸುವುದು. ಗರ್ಭಿಣಿ ಮಹಿಳೆಯರು ಮತ್ತು ಬಾಣಂತಿ ಮಹಿಳೆಯರ ಆರೋಗ್ಯಕ್ಕೆ ಜೀರಿಗೆ ನೀರು ತುಂಬಾ ಆರೋಗ್ಯಕಾರಿ.



Click it and Unblock the Notifications











