Latest Updates
-
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ
ಬೆಳಗ್ಗೆ ಟೀ-ಕಾಫಿ ಕುಡಿಯುವ ಬದಲು, ಒಂದು ಲೋಟ ಮಜ್ಜಿಗೆ ಕುಡಿಯಿರಿ
ಹಾಲು ಹಾಗೂ ಹಾಲಿನ ಉತ್ಪನ್ನಗಳು ದೇಹಕ್ಕೆ ತುಂಬಾ ಒಳ್ಳೆಯದು ಎನ್ನುವುದರಲ್ಲಿ ಎರಡು ಮಾತಿಲ್ಲ. ಯಾಕೆಂದರೆ ಇದರಲ್ಲಿ ಇರುವಂತಹ ಕೆಲವೊಂದು ಪೋಷಕಾಂಶಗಳು ದೇಹಕ್ಕೆ ಶಕ್ತಿ ನೀಡುವುದು ಮತ್ತು ನಮ್ಮ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಇದರಿಂದ ಹಾಲಿನ ಉತ್ಪನ್ನಗಳಿಗೆ ಬೇಡಿಕೆಯು ದಿನೇ ದಿನೇ ಹೆಚ್ಚುತ್ತಿದೆ. ಅದರಲ್ಲೂ ಬೇಸಿಗೆಯಲ್ಲಿ ಹಾಲು, ಮೊಸರು ಮತ್ತು ಮಜ್ಜಿಗೆ ತುಂಬಾ ಮಾರಾಟವಾಗುವುದು. ಮಜ್ಜಿಗೆಯು ನಮ್ಮ ದಾಹ ತಣಿಸುವುದು. ಇದು ದಾಹ ತಣಿಸುವುದು ಮಾತ್ರವಲ್ಲದೆ, ಇದರಿಂದ ಹಲವಾರು ರೀತಿಯ ಆರೋಗ್ಯ ಲಾಭಗಳು ಇವೆ. ದೇಹದಲ್ಲಿ ಇದು ನಿರ್ಜಲೀಕರಣವಾಗದಂತೆ ತಡೆಯುತ್ತದೆ ಎಂದು ಹೇಳಲಾಗಿದೆ. ಅದರಲ್ಲೂ ರಾಜ್ಯದ ಕೆಲವೊಂದು ಬಿಸಿಲಿನ ಪ್ರದೇಶಗಳಲ್ಲಿ ಮಜ್ಜಿಗೆಯನ್ನು ಅಧಿಕವಾಗಿ ಬಳಸುವರು.
ಆಹಾ ಮಜ್ಜಿಗೆ ಸಾಂಬಾರ್, ಹೆಸರೇ ಬಾಯಲ್ಲಿ ನೀರೂರಿಸುತ್ತಿದೆ!
ಹೌದು, ಬೇಸಿಗೆಯಲ್ಲಿ ಮಜ್ಜಿಗೆಯು ತುಂಬಾ ಪರಿಣಾಮಕಾರಿ. ಯಾಕೆಂದರೆ ಇದು ಉಷ್ಣತೆಯನ್ನು ಕಡಿಮೆ ಮಾಡುವುದು. ಮೊಸರು, ನೀರು, ಕರಿಬೇವಿನ ಎಲೆ, ಜೀರಿಗೆ, ಉಪ್ಪು ಮತ್ತು ಶುಂಠಿಯಂತಹ ಮಸಾಲೆ ಹಾಕಿಕೊಂಡು ಮಜ್ಜಿಗೆಯನ್ನು ವಿವಿಧ ರೀತಿಯಿಂದ ತಯಾರಿಸಲಾಗುವುದು. ಮೊಸರಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವಿದೆ.
ಅದೇ ರೀತಿ ಮಜ್ಜಿಗೆಯು ಜೀರ್ಣಕ್ರಿಯೆ ನೆರವಾಗುವುದು ಮತ್ತು ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆಯಿದೆ. ಮಲಬದ್ಧತೆಯಿಂದ ಬಳಲುತ್ತಾ ಇರುವವರು ಬೆಳಿಗ್ಗೆ ಒಂದು ಲೋಟ ಮಜ್ಜಿಗೆ ಸೇವಿಸಬೇಕು. ಮಜ್ಜಿಗೆಯ ಇನ್ನಷ್ಟು ಲಾಭಗಳ ಬಗ್ಗೆ ಬೋಲ್ಡ್ ಸ್ಕೈ ನಿಮಗೆ ಹೇಳಿಕೊಡಲಿದೆ....

ಉರಿಯ ಅನುಭವ ಕಡಿಮೆ ಮಾಡುವುದು
ಅಸಿಡಿಟಿಯಿಂದ ಬಳಲುತ್ತಾ ಇರುವಾಗ ಹೊಟ್ಟೆಯಲ್ಲಿ ಉರಿಯ ಅನುಭವವಾಗುವುದು. ಇಂತಹ ಸಮಯದಲ್ಲಿ ಒಂದು ಲೋಟ ಮಜ್ಜಿಗೆ ಕುಡಿದರೆ ತುಂಬಾ ಒಳ್ಳೆಯದು. ಆಮ್ಲದ ಹಿಮ್ಮುಖ ಹರಿವನ್ನು ಇದು ಕಡಿಮೆಗೊಳಿಸುವುದು.

ಹೊಟ್ಟೆಯಲ್ಲಿ ಕಿರಿಕಿರಿ ಕಡಿಮೆಯಾಗುವುದು
ಒಂದು ಲೋಟ ಮಜ್ಜಿಗೆ ಕುಡಿದರೆ ನಿಮ್ಮ ಹೊಟ್ಟೆಯು ತುಂಬಾ ಶಾಂತವಾಗುವುದು. ಯಾಕೆಂದರೆ ಹೊಟ್ಟೆಯಲ್ಲಿ ಕಿರಿಕಿರಿ ಉಂಟು ಮಾಡುವ ಕೆಲವೊಂದು ವಸ್ತುಗಳನ್ನು ಇದು ಹೊರಹಾಕುವುದು. ಕರಿಬೇವು, ಜೀರಿಗೆ ಮತ್ತು ಕರಿಮೆಣಸಿನ ಹುಡಿಯನ್ನು ಮಜ್ಜಿಗೆಗೆ ಸೇರಿಸಿದಾಗ ಅದಕ್ಕೆ ಮತ್ತಷ್ಟು ಔಷಧೀಯ ಗುಣಗಳು ಸಿಗುವುದು.

ಜೀರ್ಣಕ್ರಿಯೆ ಉತ್ತಮಗೊಳಿಸುವುದು
ಅತಿಯಾಗಿ ತಿಂದ ಬಳಿಕ ಹೊಟ್ಟೆ ತುಂಬಾ ಭಾರವೆನಿಸುತ್ತಾ ಇದ್ದರೆ ನೀವು ತಕ್ಷಣ ಶುಂಠಿ ಹುಡಿ ಹಾಕಿದ ಒಂದು ಲೋಟ ಮಜ್ಜಿಗೆ ಕುಡಿಯಬೇಕು. ಇದು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯುಬ್ಬರವನ್ನು ಕಡಿಮೆ ಮಾಡುವುದು.

ನಿರ್ಜಲೀಕರಣಕ್ಕೆ ಮದ್ದು
ನೀವು ನಿರ್ಜಲೀಕರಣದಿಂದ ಬಳಲುತ್ತಾ ಇದ್ದರೆ ಒಂದು ಲೋಟ ಮಜ್ಜಿಗೆ ಕುಡಿಯಿರಿ. ಈ ಮಜ್ಜಿಗೆಗೆ ಸ್ವಲ್ಪ ಮಸಾಲೆ ಮತ್ತು ಉಪ್ಪು ಹಾಕಿಕೊಳ್ಳಿ. ಬೇಸಿಗೆಯಲ್ಲೂ ದೇಹದಲ್ಲಿ ನೀರಿನಾಂಶವನ್ನು ಉಳಿಸಿಕೊಳ್ಳಲು ಇದು ಒಳ್ಳೆಯ ಔಷಧಿ.

ಪೋಷಕಾಂಶಗಳು
ಔಷಧೀಯ ಗುಣಗಳನ್ನು ಹೊಂದಿರುವಂತಹ ಮಜ್ಜಿಗೆಯಲ್ಲಿ ಪೊಟಾಶಿಯಂ, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿಟಮಿನ್ ಬಿಯಂತಹ ಪೋಷಕಾಂಶಗಳು ಇವೆ.

ಅತಿಸಾರಗೆ ಒಳ್ಳೆಯ ಔಷಧಿ
ಅತಿಸಾರದಿಂದ ಬಳಲುತ್ತಾ ಇದ್ದರೆ ಒಂದು ಲೋಟ ಮಜ್ಜಿಗೆಗೆ ಅರ್ಧ ಚಮಚದಷ್ಟು ಶುಂಠಿ ಹುಡಿಯನ್ನು ಮಿಶ್ರಣ ಮಾಡಿಕೊಳ್ಳಿ. ದಿನದಲ್ಲಿ ಮೂರು ಸಲ ಇದನ್ನು ಸೇವಿಸಿದರೆ ಕೆಲವೇ ದಿನಗಳಲ್ಲಿ ಅತಿಸಾರವು ಕಡಿಮೆಯಾಗುವುದು.

ಕೊಲೆಸ್ಟ್ರಾಲ್ ನಿಯಂತ್ರಿಸುವುದು
ದಿನನಿತ್ಯ ಒಂದು ಲೋಟ ಮಜ್ಜಿಗೆ ಸೇವನೆ ಮಾಡಿದರೆ ಅದರಿಂದ ಕೊಲೆಸ್ಟ್ರಾಲ್ ಮಟ್ಟವು ನಿಯಂತ್ರಣದಲ್ಲಿ ಇರುವುದು. ಮಜ್ಜಿಗೆಯಲ್ಲಿ ಇರುವಂತಹ ಜೈವಿಕ ಸಕ್ರಿಯ ಪ್ರೋಟೀನ್ ಕ್ಯಾನ್ಸರ್ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿದೆ. ಮಜ್ಜಿಗೆ ಸೇವನೆ ಮಾಡಿದರೆ ರಕ್ತದೊತ್ತಡವು ನಿಯಂತ್ರಣದಲ್ಲಿರುವುದು.



Click it and Unblock the Notifications
