Just In
- 1 hr ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- 10 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 11 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 11 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
Don't Miss
- News Gold Rates Today: ನಿನ್ನೆಗಿಂತ ಕೊಂಚ ಇಳಿಕೆಯಾದ ಚಿನ್ನದ ಬೆಲೆ, ಯಾವ ನಗರದಲ್ಲಿ ಎಷ್ಟು?
- Finance ನೂಡಲ್ಸ್ ಪ್ಯಾಕೆಟ್ ಒಳಗಿತ್ತು ವಜ್ರಗಳ ರಾಶಿ, ಬರೋಬ್ಬರಿ 6.46 ಕೋಟಿ ರೂ. ಮೌಲ್ಯದ ಚಿನ್ನ, ಡೈಮಂಡ್ ವಶ!
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರೋಗ್ಯ ಟಿಪ್ಸ್: ನೋಡಿ ಇದೇ ಕಾರಣಕ್ಕೆ 'ಗ್ರೀನ್ ಟೀ' ಕುಡಿಯಬೇಕು ಅನಿಸುವುದು!
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು.
ಆದರೆ ಈ ಟೀಯನ್ನು ಹೇಗೆ ಬೇಕೋ ಹಾಗೆ ಸೇವಿಸುವಂತಿಲ್ಲ. ಬದಲಿಗೆ ನಿಯಮಿತವಾಗಿ ಸೂಕ್ತ ಪ್ರಮಾಣದಲ್ಲಿ ಸೇವಿಸಿದಾಗ ಮಾತ್ರವೇ ಇವುಗಳ ಪ್ರಯೋಜನವನ್ನು ಪಡೆಯಬಹುದು. ಒಂದು ವೇಳೆ ಪ್ರತಿ ಆರು ಗಂಟೆಗಳಿಗೊಂದು ಕಪ್ ನಂತೆ ದಿನಕ್ಕೆ ಮೂರು ಕಪ್ ಹಸಿರು ಕಪ್ ಸೇವಿಸಿದರೆ ದೇಹದಲ್ಲಿ ಆ ದಿನ ಸಂಗ್ರಹವಾದ ಎಲ್ಲಾ ಕಲ್ಮಶಗಳು ಹೊರಹಾಕಲ್ಪಡುತ್ತವೆ. ಪರಿಣಾಮವಾಗಿ ಯಕೃತ್ ಹಾಗೂ ಮೂತ್ರಪಿಂಡಗಳು ಅತ್ಯುತ್ತಮ ಆರೋಗ್ಯದಲ್ಲಿರುತ್ತವೆ.
ಬೆಳಗಿನ ಉಪಹಾರದ ಜೊತೆ, ಒಂದು ಕಪ್ 'ಗ್ರೀನ್ ಟೀ' ಸೇವಿಸಿ...
ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿರಿಸಲು ನೆರವಾಗುತ್ತದೆ. ಹಸಿರು ಟೀ ಯಲ್ಲಿ ಯಾವುದೇ ಕ್ಯಾಲೋರಿಗಳಿಲ್ಲವಾದುದರಿಂದ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನೂ ನಿಯಂತ್ರಣದಲ್ಲಿರಿಸಲು ಸಾಧ್ಯ. ಬನ್ನಿ ಗ್ರೀನ್ ಟೀಯ ಪ್ರಯೋಜನಗಳೇನು ಎಂಬುದನ್ನು ನೋಡೋಣ...
ಬುದ್ಧಿಮತ್ತೆಯನ್ನು ಹೆಚ್ಚಿಸುತ್ತದೆ
ಬುದ್ಧಿಮತ್ತೆಗೆ ಚುರುಕು ಮುಟ್ಟಿಸಲು ಕೊಂಚವೇ ಪ್ರಮಾಣದ ಕೆಫೇನ್ ಬೇಕು. ಹಸಿರು ಟೀಯಲ್ಲಿ ಇದು ಅತ್ಯಂತ ಸಮರ್ಪಕ ಪ್ರಮಾಣದಲ್ಲಿರುವ ಕಾರಣ ಮೆದುಳಿನ ಕ್ಷಮತೆ ಹೆಚ್ಚಿಸಲು ಇದು ಹೊರಡಿರುವ ನ್ಯೂರಾನ್ ಗಳೆಂಬ ನರವ್ಯವಸ್ಥೆಯ ಕಣಗಳು ನೆರವಾಗುತ್ತವೆ. ಆದರೆ ಕಾಫಿಯಲ್ಲಿರುವ ಕೆಫೀನ್ ಆಗಾಧ ಪ್ರಮಾಣದಲ್ಲಿದ್ದು ಅಗತ್ಯಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಹದಂತೆ ಹರಿದು ಬರುವುದರಿಂದ ಒಳ್ಳೆಯದಕ್ಕಿಂತ ಕೆಡಕು ಮಾಡುವುದೇ ಹೆಚ್ಚು.
ಕೊಬ್ಬು ಕರಗಿಸಲು ನೆರವಾಗುತ್ತದೆ
ಹಸಿರು ಟೀ ನಮ್ಮ ಪಚನಕ್ರಿಯೆ ಮತ್ತು ಜೀವರಾಸಾಯನಿಕ ಕ್ರಿಯೆಯನ್ನು ಸರಿಸುಮಾರು ಶೇಖಡಾ ನಾಲ್ಕರಷ್ಟು ಹೆಚ್ಚಿಸುತ್ತದೆ. ಈ ಹೆಚ್ಚುವರಿ ಕೆಲಸವನ್ನು ಪೂರೈಸಲು ದೇಹದಲ್ಲಿ ಶೇಖರವಾಗಿದ್ದ ಕೊಬ್ಬನ್ನು ಬಳಸಬೇಕಾಗಿ ಬರುತ್ತದೆ. ನಿತ್ಯದ ಹಸಿರು ಟೀ ಸೇವನೆಯಿಂದ ನಿಧಾನವಾಗಿಯಾದರೂ ಆರೋಗ್ಯಕರವಾಗಿ ಕೊಬ್ಬು ಕರಗುತ್ತದೆ.
ಕ್ಯಾನ್ಸರ್ ಬರದಂತೆ ತಡೆಯುತ್ತದೆ
ನಮ್ಮ ದೇಹದ ಎಲ್ಲಾ ಅಂಗಗಳ ಬೆಳವಣಿಗೆಗೆ ಒಂದು ಮಿತಿಯಿದೆ. ಆದರೆ ಕೆಲವು ಕೋಶಗಳು ಅನಿಯಂತ್ರಿತವಾಗಿ ಬೆಳವಣಿಗೆಯಾಗುವ ಮೂಲಕ ಕ್ಯಾನ್ಸರ್ ರೋಗವನ್ನು ಹುಟ್ಟುಹಾಕುತ್ತವೆ. ಈ ಬೆಳವಣಿಗೆಗೆ ಫ್ರೀ ರ್ಯಾಡಿಕಲ್ ಎಂಬ ಕಣಗಳು ಕಾರಣವೆಂದು ಇತ್ತೀಚೆಗೆ ತಿಳಿದುಬಂದಿದೆ. ಹಸಿರು ಟೀ ಯಲ್ಲಿರುವ ವಿವಿಧ ಆಂಟಿ ಆಕ್ಸಿಡೆಂಟುಗಳು ಈ ಕಣಗಳನ್ನು ಹಿಮ್ಮೆಟ್ಟಿಸಿ ಕ್ಯಾನ್ಸ್ರರ್ ತಗಲುವ ಸಂಭವವನ್ನು ಕಡಿಮೆಗೊಳಿಸುತ್ತವೆ.ವಿಶೇಷವಾಗಿ ಸ್ತನಕ್ಯಾನ್ಸರ್, ಕರುಳು ಕ್ಯಾನ್ಸರ್ ಮತ್ತು ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ಬರದಂತೆ ಸಮರ್ಥವಾಗಿ ತಡೆಯುತ್ತದೆ ಎಂದು ತಿಳಿದುಬಂದಿದೆ.
ಕೆಟ್ಟ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ
ನಮ್ಮ ದೇಹದಲ್ಲಿ ಯಾವುದೋ ಮಾಯೆಯಿಂದ ಒಳಪ್ರವೇಶಿಸಿ ವಿಶೇಷವಾಗಿ ಹಲ್ಲು ಮತ್ತು ಗಂಟಲಿನೊಳಗೆ ಮನೆ ಮಾಡಿಕೊಂಡು ಹಬ್ಬ ಆಚರಿಸುತ್ತಿರುವ ವಿವಿಧ ಕೆಟ್ಟ ಬ್ಯಾಕ್ಟೀರಿಯಾಗಳನ್ನು ಕೊಲ್ಲುವಲ್ಲಿಯೂ ಹಸಿರು ಟೀ ಮಹತ್ವದ ಪಾತ್ರ ವಹಿಸುತ್ತದೆ.
ಮಧುಮೇಹ ಬರುವ ಸಾಧ್ಯತೆಯನ್ನು ದೂರವಾಗಿಸುತ್ತದೆ
ಮಧುಮೇಹಕ್ಕೆ ಅನುವಂಶೀಯ ಕಾರಣಗಳಿದ್ದು ಯಾವುದೇ ವಯಸ್ಸಿನಲ್ಲಿ ಬರಬಹುದು. ಅದರಲ್ಲೂ ಟೈಪ್-2 ವಿಧದ ಮಧುಮೇಹ ಚಿಕ್ಕವಯಸ್ಸಿನಲ್ಲಿಯೇ ಆವರಿಸುತ್ತದೆ. ನಿಯಮಿತ ಹಸಿರು ಟೀ ಸೇವನೆಯಿಂದ ಮಧುಮೇಹ ಆವರಿಸುವ ವಯಸ್ಸನ್ನು ಸಮರ್ಥವಾಗಿ ಮುಂದೂಡಬಹುದು. ಅಲ್ಲದೇ ಹಸಿರು ಟೀ ಸೇವನೆಯಿಂದ ಮಧುಮೇಹಿಗಳಲ್ಲಿಯೂ ಅಲ್ಪ ಪ್ರಮಾಣದಲ್ಲಿ ರಕ್ತದಲ್ಲಿರುವ ಗ್ಲೂಕೋಸ್ ಪ್ರಮಾಣ ಕಡಿಮೆಯಾಗಿರುವುದು ಕೆಲವು ಪ್ರಯೋಗಗಳಿಂದ ದೃಢಪಟ್ಟಿದೆ. ಆದರೆ ಇದು ಎಷ್ಟರ ಮಟ್ಟಿಗೆ ಮಧುಮೇಹಿಗಳಿಗೆ ಪ್ರಯೋಜನಕಾರಿ ಎಂಬುದನ್ನು ಮಾತ್ರ ಇನ್ನಷ್ಟೇ ಅರಿಯಬೇಕಿದೆ.
ತಲೆನೋವನ್ನು ನಿವಾರಿಸಲು
ಹಸಿರು ಚಹಾ ಹಸಿರು ಚಹಾ (ಗ್ರೀನ್ ಟೀ) ಯಲ್ಲಿ ಒಂದು ನಿರ್ಧಾರಿತ ಪ್ರಮಾಣದ ಕೆಫೀನ್ ಇದ್ದು ಇದು ಎಲ್ಲಾ ತರಹದ ತಲೆನೋವುಗಳನ್ನು ನಿವಾರಿಸಲು ಅತ್ಯಂತ ಸೂಕ್ತವಾದ ಪ್ರಮಾಣವಾಗಿದೆ. ಹಸಿರು ಟೀಯಲ್ಲಿ ಹಾಲಿಲ್ಲದೇ ಕೊಂಚವೇ ಸಕ್ಕರೆ ಸೇರಿಸಿ ಕುಡಿಯಬಹುದು ಅಥವಾ ಕೊಂಚ ಲಿಂಬೆರಸ ಸೇರಿಸುವುದರಿಂದ ರುಚಿ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆಯೂ ಹೆಚ್ಚುತ್ತದೆ.
ನಿಮ್ಮ ಸೌಂದರ್ಯ ವರ್ಧಿಸಲು
ಬಿಸಿನೀರಿನಲ್ಲಿ ಎರಡು ಅಥವಾ ಮೂರು ಹಸಿರು ಚಹಾ ಇರುವ ಚೀಲಗಳನ್ನು ಕೊಂಚಕಾಲ ಮುಳುಗಿಸಿ. ಬಳಿಕ ಈ ಚೀಲಗಳನ್ನು ಕತ್ತರಿಸಿ ಒಳಗಿನ ಟೀಪುಡಿಯನ್ನು ಒಂದು ಬೋಗುಣಿಯಲ್ಲಿ ಹಾಕಿ ಒಂದು ಚಿಕ್ಕ ಚಮಚ ಜೇನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಇನ್ನು ಈ ಲೇಪವನ್ನು ಮುಖ ಮತ್ತು ಗಂಟಲಿಗೆ ಹಚ್ಚಿ ಸುಮಾರು ಹದಿನೈದು ನಿಮಿಷಗಳವರೆಗೆ ನಯವಾಗಿ ಮಸಾಜ್ ಮಾಡಿ. ಬಳಿಕ ಉಗುರುಬೆಚ್ಚನಿಯ ನೀರಿನಿಂದ ತೊಳೆದುಕೊಳ್ಳಿ. ನಂತರ ಸೋಪು ಉಪಯೋಗಿಸಬೇಡಿ. ಇದರಿಂದ ಮುಖದ ಚರ್ಮ ಕಾಂತಿಯುತವಾಗಿ ಮತ್ತು ತಾಜಾತನದಿಂದ ಕೂಡಿರುತ್ತದೆ.
ದೇಹದ ಕೊಬ್ಬನ್ನು ಕರಗಿಸಲು
ದೇಹದ ಕೊಬ್ಬನ್ನು ಕರಗಿಸಲು ದೇಹದ ಕೊಬ್ಬನ್ನು ಕರಗಿಸಲು ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿರಿಸುತ್ತಾ ದೇಹದಲ್ಲಿನ ಕಾರ್ಬೋಹೈಡ್ರೇಟ್ ಅನ್ನು ನಿಧಾನವಾಗಿ ಇದು ಹೊರಬಿಡುತ್ತದೆ. ನಿಮ್ಮ ದೇಹದ ಕೊಬ್ಬನ್ನು ಇದು ಸುಲಭವಾಗಿ ಕರಗಿಸುತ್ತದೆ. ಒಂದು ಕಪ್ನಷ್ಟು ನೀರಿಗೆ ಎರಡು ಹಸಿರು ಚಹಾ ಬ್ಯಾಗ್ ಸಾಕು. ಇದು ನಿಮ್ಮ ತೂಕವನ್ನು ಕರಗಿಸುತ್ತದೆ.
ಹಸಿವನ್ನು ನಿಯಂತ್ರಿಸುತ್ತದೆ
ನಿಮ್ಮ ಹಸಿವಿನ ತುಡಿತವನ್ನು ಆದಷ್ಟು ಕಡಿಮೆ ಮಾಡಬೇಕೆಂಬ ಬಯಕೆ ನಿಮ್ಮದಾಗಿದ್ದಲ್ಲಿ ದಿನಪೂರ್ತಿ ಇದನ್ನು ಹೆಚ್ಚು ಸೇವಿಸಿ. ಊಟದ ಮುಂಚೆ ಒಂದು ಕಪ್ನಷ್ಟು ಹಸಿರು ಚಹಾವನ್ನು ನೀವು ಸೇವಿಸಿದಲ್ಲಿ ಹೆಚ್ಚು ಊಟ ಮಾಡಬೇಕೆನ್ನುವ ನಿಮ್ಮ ತುಡಿತ ನಿಯಂತ್ರಣದಲ್ಲಿರುತ್ತದೆ. ಊಟದ ನಂತರ ಕೂಡ ಒಂದು ಕಪ್ನಷ್ಟು ಹಸಿರು ಚಹಾವನ್ನು ಸೇವಿಸಿ ಇದು ನಿಮ್ಮ ಕ್ಯಾಲೋರಿಯನ್ನು ಕರಗಿಸುತ್ತದೆ.
ಚರ್ಮದ ಕಾಂತಿ ಹೆಚ್ಚಿಸಲು
ಒಂದು ಚಿಕ್ಕಚಮಚ ಮೊಸರಿಗೆ ಒಂದು ಚಿಕ್ಕಚಮಚ ಲಿಂಬೆಹಣ್ಣಿನ ರಸ ಸೇರಿಸಿ. (ಈಗ ತಾನೇ ಹಿಂಡಿದ ಲಿಂಬೆರಸ). ಇದಕ್ಕೆ ಒಂದರಿಂದ ಎರಡು ಚಿಕ್ಕ ಚಮಚ ಹಸಿರು ಟೀ ಕುದಿಸಿ ಸೋಸಿದ ನೀರನ್ನು ಬೆರೆಸಿ. ಈ ಲೇಪನವನ್ನು ಮುಖದ ಮೇಲೆ ನಯವಾಗಿ ಒಮ್ಮುಖವಾಗಿ ಹಚ್ಚಿರಿ. ಸುಮಾರು ಹದಿನೈದು ನಿಮಿಷ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಸೋಪು ಉಪಯೋಗಿಸಬೇಡಿ.