Just In
- 6 min ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 2 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 2 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 3 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
Don't Miss
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಡ್ನಿ ಕಲ್ಲಿನ ಸಮಸ್ಯೆ ಇದೆಯೇ? ಇಲ್ಲಿದೆ ನೋಡಿ ಪವರ್ ಫುಲ್ ಮನೆಮದ್ದುಗಳು
ನಮ್ಮ ನಿತ್ಯದ ಚಟುವಟಿಕೆಯನ್ನೇ ನಿಲ್ಲಿಸಿಬಿಡಬಲ್ಲಷ್ಟು ನೋವು ನೀಡುವ ಮೂತ್ರಪಿಂಡ ಕಲ್ಲುಗಳಿಂದ ಬಿಡುಗಡೆ ಪಡೆಯುವುದು ಅಷ್ಟು ಸುಲಭವಲ್ಲ. ಇದರ ನಿವಾರಣೆಗೂ ಮುನ್ನ ಇದು ಪ್ರಾರಂಭವಾಗುವುದು ಹೇಗೆ ಎಂದು ತಿಳಿದುಕೊಂಡರೆ ಉತ್ತಮ. ದೇಹದ ನೀರನ್ನು ಶೋಧಿಸಿ ಲವಣಗಳನ್ನು ಮತ್ತು ಕಲ್ಮಶಗಳನ್ನು ಮೂತ್ರದ ಮೂಲಕ ಹೊರಹಾಕುವ ಮೂತ್ರಪಿಂಡಗಳಲ್ಲಿ ಕೆಲವೊಮ್ಮೆ ಕೆಲವು ಲವಣಗಳು ಘನರೂಪ ಪಡೆದು ನಿಂತುಬಿಡುತ್ತವೆ. ಸತತವಾಗಿ ಶೋಧಿಸುತ್ತಾ ಹೋಗುವಾಗ ಇನ್ನಷ್ಟು ಲವಣದ ಕಣಗಳು ಈ ಕಲ್ಲಿಗೆ ಅಂಟಿಕೊಳ್ಳುತ್ತಾ ಹೋಗುತ್ತದೆ.
ಸಾಮಾನ್ಯವಾಗಿ ನಮ್ಮೆಲ್ಲರ ಮೂತ್ರಪಿಂಡಗಳಲ್ಲಿ ಈ ಕಲ್ಲುಗಳು ಚಿಕ್ಕದಾಗಿ ಇದ್ದೇ ಇರುತ್ತವೆ. ಆದರೆ ನೀರು ಹೆಚ್ಚಿದಂತೆ ಇವು ಕರಗುತ್ತವೆ ಸಹಾ. ಕೆಲವೊಂದು ಲವಣಗಳು ಮಾತ್ರ ಕರಗದೇ ಗಟ್ಟಿಯಾದ ಕಲ್ಲುಗಳಾಗಿ ಉಳಿದುಬಿಡುತ್ತವೆ. ಕಲ್ಲುಗಳು ಕರಗದೇ ಇರಲಿಕ್ಕೆ ಅಧಿಕ ರಕ್ತದೊತ್ತಡ, ಪ್ರಾಣಿಜನ್ಯ ಕೊಬ್ಬಿನ ಪ್ರಮಾಣದಲ್ಲಿ ಹೆಚ್ಚಳ, ಕುಡಿಯುವ ನೀರು ಕಡಿಮೆಯಾಗುವುದು, ಆಹಾರದಲ್ಲಿ ನಾರು ಇಲ್ಲದಿರುವುದು ಮೊದಲಾದ ಕಾರಣಗಳೂ ಇವೆ.
ಬಹುತೇಕ ಕಲ್ಲುಗಳೂ ಕ್ಯಾಲ್ಸಿಯಂ ಫಾಸ್ಪೇಟ್ ಅಥವಾ ಕ್ಯಾಲ್ಸಿಯಂ ಆಕ್ಸಲೇಟ್ ರೂಪ ಪಡೆಯುತ್ತವೆ. ಒಂದು ವೇಳೆ ಕ್ಯಾಲ್ಸಿಯಂ ಫಾಸ್ಪೇಟ್ ಆಗಿದ್ದರೆ ಇವು ನಯವಾದ ಸುಣ್ಣದ ಕಲ್ಲಿನಂತಿದ್ದು ನೆನೆದ ಚಾಕ್ ಪೀಸ್ ನಷ್ಟೇ ಗಟ್ಟಿಯಾಗಿರುತ್ತದೆ. ಈ ಕಲ್ಲುಗಳನ್ನು ಕರಗಿಸುವುದು ಸುಲಭ. ಆದರೆ ಕ್ಯಾಲ್ಸಿಯಂ ಆಕ್ಸಲೇಟ್ ಕಲ್ಲುಗಳು ಮಾತ್ರ ರಸ್ತೆಗೆ ಹಾಕುವ ಟಾರಿನಲ್ಲಿರುವ ಕಲ್ಲಿನಷ್ಟು ಗಟ್ಟಿಯಾಗಿದ್ದು ಇದನ್ನು ಒಡೆಯುವುದು ವೈದ್ಯರಿಗೆ ದೊಡ್ಡ ಸವಾಲಾಗಿದೆ. ಒಂದು ವೇಳೆ ಒಡೆದರೂ ಇದರ ಚೂರುಗಳು ಮೂತ್ರನಾಳದಲ್ಲಿ ಇಳಿದು ಹೊರಹೋಗಲು ಬಹಳಷ್ಟು ಸಮಯ ಹಾಗೂ ಅಪಾರ ನೋವು ನೀಡುತ್ತವೆ. ಆದರೆ ಆಯುರ್ವೇದದಲ್ಲಿ ಈ ಕಲ್ಲುಗಳನ್ನು ಕರಗಿಸಿ ಸುಲಭವಾಗಿ ಹೊರಹಾಕಲು ಕೆಲವು ವಿಧಾನಗಳಿದ್ದು ನೈಸರ್ಗಿಕವಾಗಿವೆ. ಬನ್ನಿ ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ನೋಡೋಣ....
ಖಾಲಿಹೊಟ್ಟೆಯಲ್ಲಿ ಎಳನೀರು ಕುಡಿಯಿರಿ
ನಮ್ಮ ದೇಹಕ್ಕೆ ಅತ್ಯುತ್ತಮವಾದ ದ್ರವವಾಗಿರುವ ಎಳನೀರು ಮೂತ್ರಪಿಂಡಗಳ ಕಲ್ಲು ನಿವಾರಿಸಲು ಹಾಗೂ ನೋವು ಇಲ್ಲದಂತಾಗಿಸಲೂ ನೆರವಾಗುತ್ತದೆ. ದಿನನಿತ್ಯ ಖಾಲಿಹೊಟ್ಟೆಯಲ್ಲಿ ಒಂದು ಎಳನೀರು ಕುಡಿದ ಬಳಿಕ ದಿನದಲ್ಲಿ ಸುಮಾರು ನಾಲ್ಕರಿಂದ ಐದು ಎಳನೀರನ್ನಾದರೂ ಊಟಕ್ಕೆ ಅರ್ಧ ಗಂಟೆಗೆ ಮುನ್ನ ಕುಡಿಯಬೇಕು. ರಾತ್ರಿ ಮಲಗುವ ಮುನ್ನವೂ ಒಂದು ಎಳನೀರು ಕುಡಿದು ಕೊಂಚಕಾಲ ಅಡ್ಡಾಡಿ ಬಳಿಕ ಮೂತ್ರ ವಿಸರ್ಜಿಸಿ ಮಲಗಿಕೊಳ್ಳಬೇಕು.
ಹಸಿಶುಂಠಿ
ಹಸಿಶುಂಠಿ ಮೂತ್ರಪಿಂಡಗಳನ್ನು ಶುದ್ಧೀಕರಿಸಲು ಶುಂಠಿ ಸಹಾ ಉತ್ತಮವಾದ ಮೂಲಿಕೆಯಾಗಿದೆ. ಬರೆಯ ಮೂತ್ರಪಿಂಡಗಳು ಮಾತ್ರವಲ್ಲ, ಜೀರ್ಣಾಂಗ ಮತ್ತು ಕರುಳುಗಳಿಂದಲೂ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತದೆ. ಯಕೃತ್ ಸಹಾ ಇದರಿಂದ ಶುದ್ಧಗೊಳ್ಳುತ್ತದೆ. ಇದಕ್ಕಾಗಿ ಹೆಚ್ಚೇನೂ ಮಾಡಬೇಕಾಗಿಲ್ಲ, ದಿನದಲ್ಲಿ ಕುಡಿಯುವ ಟೀ ಯಲ್ಲಿ ಕೊಂಚ ಶುಂಠಿಯನ್ನು ಸೇರಿಸಿದರೆ ಸಾಕು. ಉತ್ತಮ ಪರಿಣಾಮಕ್ಕಾಗಿ ಶುಂಠಿ ಕುದಿಸಿ ಸೋಸಿ ತಣಿಸಿದ ನೀರನ್ನು ರಾತ್ರಿ ಮಲಗುವ ಮುನ್ನ ಕುಡಿಯಿರಿ.
ಮೆಂತೆ
ಒಂದು ಚಮಚ ಮೆಂತೆಯನ್ನು ಒಂದು ಲೋಟ ನೀರಿನಲ್ಲಿ ನೆನೆ ಹಾಕಿ ಬೆಳ್ಳಗ್ಗೆ ತಿನ್ನಬೇಕು. ಈ ರೀತಿ ಮಾಡಿದರೆ ಕಿಡ್ನಿಯಲ್ಲಿರುವ ಕಲ್ಲು ಮಾತ್ರವಲ್ಲ ದೇಹದಲ್ಲಿರುವ ಕಲ್ಮಶಗಳನ್ನು ತೊಡೆದು ಹಾಕಲು ಸಹಕಾರಿಯಾಗಿದೆ. ಇನ್ನೊಂದು ವಿಧಾನವೆಂದರೆ ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರಹಾಕಲು ನೆರವಾಗುವುದು.
ತುಳಸಿ
ತುಳಸಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ಯೂರಿಕ್ ಆಮ್ಲದ ಮಟ್ಟವನ್ನು ತಟಸ್ಥಗೊಳಿಸುವುದು. ಇದರಿಂದ ಕಿಡ್ನಿಯಲ್ಲಿ ಕಲ್ಲು ನಿರ್ಮಾಣವಾಗುವುದಿಲ್ಲ. ಇದರಲ್ಲಿ ಇರುವಂತಹ ಎಸಿಟಿಕ್ ಆಮ್ಲವು ಕಿಡ್ನಿಯ ಕಲ್ಲುಗಳನ್ನು ತೆಗೆದುಹಾಕುವುದು.
ದಾಳಿಂಬೆ ಜ್ಯೂಸ್
ದಾಳಿಂಬೆ ಜ್ಯೂಸ್ ನಲ್ಲಿ ಹಲವಾರು ರೀತಿಯ ಆರೋಗ್ಯ ಲಾಭಗಳು ಇವೆ ಎಂದು ನಮಗೆಲ್ಲರಿಗೂ ತಿಳಿದಿದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚು ಮಾಡುವುದು. ಇದನ್ನು ಹೊರತುಪಡಿಸಿ ಇದು ಕಿಡ್ನಿ ಕಲ್ಲುಗಳ ನಿವಾರಣೆ ಮಾಡುವಲ್ಲಿ ತುಂಬಾ ಪರಿಣಾಮಕಾರಿ. ಯಾಕೆಂದರೆ ಇದರಲ್ಲಿ ಹುಳಿ ಸ್ವಭಾವ ಮತ್ತು ಸಂಕೋಚನ ಗುಣವಿದೆ. ಸಂಸ್ಕರಿತ ಜ್ಯೂಸ್ ಗಿಂತ ತಾಜಾ ಜ್ಯೂಸ್ ಕುಡಿದರೆ ತುಂಬಾ ಒಳ್ಳೆಯದು.
ಬೆಂಡೆಕಾಯಿ
ನಮ್ಮ ದೇಹದಲ್ಲಿರುವಂತಹ ಅಂಗಾಂಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಲು ಮೆಗ್ನಿಶಿಯಂ ಅತೀ ಅಗತ್ಯವಾಗಿ ಬೇಕೇಬೇಕು. ಬೆಂಡೆಕಾಯಿಯಲ್ಲಿ ಒಳ್ಳೆಯ ಮಟ್ಟದ ಮೆಗ್ನಿಶಿಯಂ, ಆ್ಯಂಟಿಆಕ್ಸಿಡೆಂಟ್ ಮತ್ತು ಉರಿಯೂತ ಶಮನಕಾರಿ ಗುಣಗಳು ಇವೆ. ಇದು ಕಿಡ್ನಿಯಲ್ಲಿ ಕಲ್ಲುಗಳು ನಿರ್ಮಾಣವಾಗುವುದನ್ನು ತಡೆಯುವುದು. 3-4 ಬೆಂಡೆಕಾಯಿಯಲ್ಲಿ ತುಂಡು ಮಾಡಿಕೊಂಡು ಅದನ್ನು ರಾತ್ರಿ ನೀರಿಗೆ ಹಾಕಿಡಿ. ಬೆಳಗ್ಗೆ ಎದ್ದು ಆ ನೀರನ್ನು ಕುಡಿದರೆ ನಿಮ್ಮ ಕಿಡ್ನಿಯು ಆರೋಗ್ಯವಾಗಿರುವುದು.
ಈರುಳ್ಳಿ ಕಷಾಯ!
ಈರುಳ್ಳಿಯಲ್ಲಿ ಆ್ಯಂಟಿಆಕ್ಸಿಡೆಂಟ್ ಸಮೃದ್ಧವಾಗಿದೆ ಮತ್ತು ಇದು ಕಿಡ್ನಿಯಲ್ಲಿ ಕಲ್ಲುಗಳು ಗಟ್ಟಿಯಾಗದಂತೆ ಮಾಡುವುದು. ಎರಡರಿಂದ ಮೂರು ಈರುಳ್ಳಿಯನ್ನು ಸುಮಾರು 15 ನಿಮಿಷ ಕಾಲ ನೀರಿನಲ್ಲಿ ಕುದಿಸಬೇಕು ಮತ್ತು ಈ ನೀರಿಗೆ ಸಕ್ಕರೆ ಹಾಕಿ ಸೇವಿಸಿದರೆ ಒಳ್ಳೆಯ ಫಲಿತಾಂಶ ಖಚಿತ.
ಸಿಟ್ರಿಕ್ ಹಣ್ಣುಗಳ ಜ್ಯೂಸ್
ಕಿಡ್ನಿ ಕಲ್ಲುಗಳನ್ನು ಹೊರಹಾಕುವಲ್ಲಿ ಸಿಟ್ರಿಕ್ ಇರುವ ಹಣ್ಣುಗಳ ಜ್ಯೂಸ್ ತುಂಬಾ ಪರಿಣಾಮಕಾರಿಯಾಗಿದೆ ಎಂದು ಈಗಾಗಲೇ ಕಂಡುಕೊಳ್ಳಲಾಗಿದೆ. ಕಿತ್ತಳೆ, ಲಿಂಬೆ, ಕ್ರಾನ್ ಬೆರ್ರಿ ಇತ್ಯಾದಿ ಸಿಟ್ರಿಕ್ ಇರುವಂತಹ ಹಣ್ಣುಗಳ ಜ್ಯೂಸ್ ನ್ನು ದಿನದಲ್ಲಿ ಹಲವಾರು ಗ್ಲಾಸ್ ಕುಡಿಯಬೇಕು. ಇದು ಕಿಡ್ನಿಯಲ್ಲಿ ಕಲ್ಲುಗಳು ಆಗದಂತೆ ತಡೆಯುವುದು. ಈ ಮನೆಮದ್ದಿನೊಂದಿಗೆ ನೀವು ನಿಯಮಿತವಾಗಿ ವೈದ್ಯರನ್ನು ಭೇಟಿಯಾಗಿ ಅವರಿಂದ ಸಲಹೆಗಳನ್ನು ಪಡೆಯಬೇಕು. ಇದರಿಂದ ಭವಿಷ್ಯದಲ್ಲಿ ಕಿಡ್ನಿಯಲ್ಲಿ ಕಲ್ಲುಗಳು ಆಗದಂತೆ ತಡೆಯಬಹುದು.
ಕಲ್ಲ೦ಗಡಿ ಹಣ್ಣು!
ಮೂತ್ರಪಿ೦ಡಗಳಲ್ಲಿನ ಕಲ್ಲುಗಳ ನಿವಾರಣೆಗೆ ಕಲ್ಲ೦ಗಡಿ ಹಣ್ಣು ಅತ್ಯುತ್ತಮವಾದ ಪರಿಹಾರೋಪಾಯವಾಗಿದೆ. ಕಲ್ಲ೦ಗಡಿ ಹಣ್ಣು ಜಲಾ೦ಶದಿ೦ದ ಸಮೃದ್ಧವಾಗಿದ್ದು, ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಪರಿಣಾಮಕಾರಿಯಾಗಿ ಹೊರಗೆಡಹಲು ನೆರವಾಗುತ್ತದೆ. ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಹೊರಹಾಕುವುದಕ್ಕಾಗಿ ಪ್ರಾಚೀನ ಕಾಲದಲ್ಲಿ ಯಾವುದೇ ಔಷಧವು ಅಲಭ್ಯವಾಗಿದ್ದಾಗ, ಆ ಹರಳುಗಳನ್ನು ರೋಗಿಯ ಶರೀರದಿ೦ದ ಹೊರಹಾಕಲು ವೈದ್ಯರು ರೋಗಿಗೆ ಕಲ್ಲ೦ಗಡಿ ಹಣ್ಣನ್ನು ಸೇವಿಸುವ೦ತೆ ಶಿಫಾರಸು ಮಾಡುತ್ತಿದ್ದರು.
ದಿನಕ್ಕೊ೦ದು ಸೇಬನ್ನು ಸೇವಿಸಿ
ದಿನಕ್ಕೊ೦ದು ಸೇಬನ್ನು ಸೇವಿಸುವುದರಿ೦ದ ಮೂತ್ರಪಿ೦ಡಗಳಲ್ಲಿನ ಕಲ್ಲುಗಳು ಕರಗಿಹೋಗುತ್ತವೆ. ಸೇಬಿನಲ್ಲಿ ಕೆಲವು ಕಿಣ್ವಗಳಿದ್ದು, ಅವು ಕಾಲಕ್ರಮೇಣವಾಗಿ ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಕರಗಿಸಿ, ಮೂತ್ರದ ಮೂಲಕ ಶರೀರದಿ೦ದ ಆ ಹರಳುಗಳು ಹೊರಹೋಗುವ೦ತೆ ಮಾಡುತ್ತವೆ.
ಸಾಕಷ್ಟು ನೀರು ಕುಡಿಯಿರಿ
ಸಾಕಷ್ಟು ನೀರು ಕುಡಿಯುವುದು ಕಿಡ್ನಿ ಕಲ್ಲುಗಳನ್ನು ಸ್ವಾಭಾವಿಕವಾಗಿ ತಡೆಯುತ್ತದೆ. ಕನಿಷ್ಠ ಪಕ್ಷ 8 ಲೋಟಗಳಷ್ಟಾದರೂ ನೀರನ್ನು ಕುಡಿಯುವುದು ಅತ್ಯವಶ್ಯಕವಾಗಿದೆ. ನೀರಲ್ಲದೆ, ಸಿಟ್ರಸ್ ಅಂಶವುಳ್ಳ ಜ್ಯೂಸ್ ಅನ್ನು ಕೂಡ ನೀವು ಸೇವಿಸಬಹುದು. ಈ ಪಾನೀಯಗಳು ಕಲ್ಲಿನ ರಚನೆಯನ್ನು ನಿರ್ಬಂಧಿಸುವಲ್ಲಿ ಸಹಕಾರಿ.