Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಕರ್ನಾಟದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹತ್ತೇ ದಿನದಲ್ಲಿಮೂರು ಪಟ್ಟು ಹೆಚ್ಚಳ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚುತ್ತಿದೆ. ಜೂನ್ 1ಕ್ಕೆ ಹೋಲಿಸಿದರೆ ಈಗ ಕೊರೊನಾ ಸಮಖ್ಯೆ ಮೂರು ಪಟ್ಟು ಹೆಚ್ಚಾಗಿದೆ.

ಶಾಲೆಗಳು ಪ್ರಾರಂಭವಾಗಿದೆ, ಆಫೀಸ್ಗಳು ತಮ್ಮ ಉದ್ಯೋಗಿಗಳನ್ನು ಆಫೀಸ್ಗೆ ಬರಲು ಹೇಳುತ್ತಿದ್ದಾರೆ, ಜನ ಜೀವನ ಮೊದಲಿನ ಸ್ಥಿತಿಗೆ ಮರಲಿದೆ ಹೀಗಿರುವಾಗ ಮತ್ತೆ ಕೊರೊನಾ ಅಧಿಕವಾಗುತ್ತಿರುವುದು ಈಗ ಮತ್ತೆ ಆತಂಕಕ್ಕೆ ಕಾರಣವಾಗಿದೆ.

ಮೂರೂವರೆ ತಿಂಗಳ ಬಳಿಕ ಮತ್ತೆ ಕೊರೊನಾ ಸಂಖ್ಯೆ ಹೆಚ್ಚಳ
ಕರ್ನಾಟಕದಲ್ಲಿ ಕೊರೊನಾ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು, ಕೆಲವೊಂದು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶೂನ್ಯವಾಗಿತ್ತು. ಆದರೆ ಮೂರೂವರೆ ತಿಂಗಳ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ 500 ದಾಟಿದೆ. ಶನಿವಾರ ಅಂದರೆ ಜೂನ್ 11ಕ್ಕೆ 562 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. Covid -19 Information Portal ಮಾಹಿತಿ ಪ್ರಕಾರ ಇಂದಿಗೆ ಕರ್ನಾಟಕದಲ್ಲಿ 3, 882 ಸಕ್ರೀಯ ಕೇಸ್ಗಳಿವೆ.

ಬೆಂಗಳೂರಿನಲ್ಲಿ ಅಧಿಕ ಕೇಸ್
ಜೂನ್ 1ಕ್ಕೆ 178 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು, ಹತ್ತೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3 ಪಟ್ಟು ಹೆಚ್ಚಾಗಿದೆ. ಆದರೆ ಕಳೆದ ಸಾವಿನ ಸಂಖ್ಯೆ ತುಂಬಾ ಕಡಿಮೆಯಿದೆ ಹಾಗೂ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ತುಂಬಾ ಕಡಿಮೆ ಇದೆ. ತುಂಬಾ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ
ಕರ್ನಾಟಕದಲ್ಲಿ ಯಾವುದೇ ಹೊಸ ತಳಿ ವೈರಸ್ ಕಂಡು ಬಂದಿಲ್ಲ. ಈಗ ಹರಡುತ್ತಿರುವುದು ಒಮಿಕ್ರಾನ್ ವೈರಸ್ ಆಗಿದೆ. ಒಮಿಕ್ರಾನ್ ಈಗಾಗಲೇ ಒಮ್ಮೆ ಬಂದು ಹೋಗಿರುವುದರಿಂದ ಇದರಿಂದ ನಾಲ್ಕನೇ ಅಲೆ ಉಂಟಾಗಲ್ಲ ಎಂಬುವುದು ತಜ್ಞರ ಅಭಿಪ್ರಾಯವಾಗಿದೆ.

ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಿ
* ಕೊರೊನಾ ಬಗ್ಗೆ ಈ ಹಿಂದೆ ನಿರ್ಲಕ್ಷ್ಯ ತೋರಿ ಎಷ್ಟು ನಷ್ಟ ಅನುಭವಿಸಿದ್ದೇವೆ ಎಂಬುವುದು ಜನರ ಅನುಭವಕ್ಕೆ ಬಂದಿದೆ
* ಆದ್ದರಿಂದ ಈ ಬಾರಿ ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಿ, ಕೊರೊನಾ ಹರಡದಂತೆ ಮುನ್ನೆಚ್ಚರಿಕೆವಹಿಸಿ.



Click it and Unblock the Notifications