Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಕರ್ನಾಟದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹತ್ತೇ ದಿನದಲ್ಲಿಮೂರು ಪಟ್ಟು ಹೆಚ್ಚಳ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚುತ್ತಿದೆ. ಜೂನ್ 1ಕ್ಕೆ ಹೋಲಿಸಿದರೆ ಈಗ ಕೊರೊನಾ ಸಮಖ್ಯೆ ಮೂರು ಪಟ್ಟು ಹೆಚ್ಚಾಗಿದೆ.

ಶಾಲೆಗಳು ಪ್ರಾರಂಭವಾಗಿದೆ, ಆಫೀಸ್ಗಳು ತಮ್ಮ ಉದ್ಯೋಗಿಗಳನ್ನು ಆಫೀಸ್ಗೆ ಬರಲು ಹೇಳುತ್ತಿದ್ದಾರೆ, ಜನ ಜೀವನ ಮೊದಲಿನ ಸ್ಥಿತಿಗೆ ಮರಲಿದೆ ಹೀಗಿರುವಾಗ ಮತ್ತೆ ಕೊರೊನಾ ಅಧಿಕವಾಗುತ್ತಿರುವುದು ಈಗ ಮತ್ತೆ ಆತಂಕಕ್ಕೆ ಕಾರಣವಾಗಿದೆ.

ಮೂರೂವರೆ ತಿಂಗಳ ಬಳಿಕ ಮತ್ತೆ ಕೊರೊನಾ ಸಂಖ್ಯೆ ಹೆಚ್ಚಳ
ಕರ್ನಾಟಕದಲ್ಲಿ ಕೊರೊನಾ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು, ಕೆಲವೊಂದು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶೂನ್ಯವಾಗಿತ್ತು. ಆದರೆ ಮೂರೂವರೆ ತಿಂಗಳ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ 500 ದಾಟಿದೆ. ಶನಿವಾರ ಅಂದರೆ ಜೂನ್ 11ಕ್ಕೆ 562 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. Covid -19 Information Portal ಮಾಹಿತಿ ಪ್ರಕಾರ ಇಂದಿಗೆ ಕರ್ನಾಟಕದಲ್ಲಿ 3, 882 ಸಕ್ರೀಯ ಕೇಸ್ಗಳಿವೆ.

ಬೆಂಗಳೂರಿನಲ್ಲಿ ಅಧಿಕ ಕೇಸ್
ಜೂನ್ 1ಕ್ಕೆ 178 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು, ಹತ್ತೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3 ಪಟ್ಟು ಹೆಚ್ಚಾಗಿದೆ. ಆದರೆ ಕಳೆದ ಸಾವಿನ ಸಂಖ್ಯೆ ತುಂಬಾ ಕಡಿಮೆಯಿದೆ ಹಾಗೂ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ತುಂಬಾ ಕಡಿಮೆ ಇದೆ. ತುಂಬಾ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ
ಕರ್ನಾಟಕದಲ್ಲಿ ಯಾವುದೇ ಹೊಸ ತಳಿ ವೈರಸ್ ಕಂಡು ಬಂದಿಲ್ಲ. ಈಗ ಹರಡುತ್ತಿರುವುದು ಒಮಿಕ್ರಾನ್ ವೈರಸ್ ಆಗಿದೆ. ಒಮಿಕ್ರಾನ್ ಈಗಾಗಲೇ ಒಮ್ಮೆ ಬಂದು ಹೋಗಿರುವುದರಿಂದ ಇದರಿಂದ ನಾಲ್ಕನೇ ಅಲೆ ಉಂಟಾಗಲ್ಲ ಎಂಬುವುದು ತಜ್ಞರ ಅಭಿಪ್ರಾಯವಾಗಿದೆ.

ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಿ
* ಕೊರೊನಾ ಬಗ್ಗೆ ಈ ಹಿಂದೆ ನಿರ್ಲಕ್ಷ್ಯ ತೋರಿ ಎಷ್ಟು ನಷ್ಟ ಅನುಭವಿಸಿದ್ದೇವೆ ಎಂಬುವುದು ಜನರ ಅನುಭವಕ್ಕೆ ಬಂದಿದೆ
* ಆದ್ದರಿಂದ ಈ ಬಾರಿ ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಿ, ಕೊರೊನಾ ಹರಡದಂತೆ ಮುನ್ನೆಚ್ಚರಿಕೆವಹಿಸಿ.



Click it and Unblock the Notifications
