Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕರ್ನಾಟದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹತ್ತೇ ದಿನದಲ್ಲಿಮೂರು ಪಟ್ಟು ಹೆಚ್ಚಳ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚುತ್ತಿದೆ. ಜೂನ್ 1ಕ್ಕೆ ಹೋಲಿಸಿದರೆ ಈಗ ಕೊರೊನಾ ಸಮಖ್ಯೆ ಮೂರು ಪಟ್ಟು ಹೆಚ್ಚಾಗಿದೆ.

ಶಾಲೆಗಳು ಪ್ರಾರಂಭವಾಗಿದೆ, ಆಫೀಸ್ಗಳು ತಮ್ಮ ಉದ್ಯೋಗಿಗಳನ್ನು ಆಫೀಸ್ಗೆ ಬರಲು ಹೇಳುತ್ತಿದ್ದಾರೆ, ಜನ ಜೀವನ ಮೊದಲಿನ ಸ್ಥಿತಿಗೆ ಮರಲಿದೆ ಹೀಗಿರುವಾಗ ಮತ್ತೆ ಕೊರೊನಾ ಅಧಿಕವಾಗುತ್ತಿರುವುದು ಈಗ ಮತ್ತೆ ಆತಂಕಕ್ಕೆ ಕಾರಣವಾಗಿದೆ.

ಮೂರೂವರೆ ತಿಂಗಳ ಬಳಿಕ ಮತ್ತೆ ಕೊರೊನಾ ಸಂಖ್ಯೆ ಹೆಚ್ಚಳ
ಕರ್ನಾಟಕದಲ್ಲಿ ಕೊರೊನಾ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು, ಕೆಲವೊಂದು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶೂನ್ಯವಾಗಿತ್ತು. ಆದರೆ ಮೂರೂವರೆ ತಿಂಗಳ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ 500 ದಾಟಿದೆ. ಶನಿವಾರ ಅಂದರೆ ಜೂನ್ 11ಕ್ಕೆ 562 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. Covid -19 Information Portal ಮಾಹಿತಿ ಪ್ರಕಾರ ಇಂದಿಗೆ ಕರ್ನಾಟಕದಲ್ಲಿ 3, 882 ಸಕ್ರೀಯ ಕೇಸ್ಗಳಿವೆ.

ಬೆಂಗಳೂರಿನಲ್ಲಿ ಅಧಿಕ ಕೇಸ್
ಜೂನ್ 1ಕ್ಕೆ 178 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು, ಹತ್ತೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3 ಪಟ್ಟು ಹೆಚ್ಚಾಗಿದೆ. ಆದರೆ ಕಳೆದ ಸಾವಿನ ಸಂಖ್ಯೆ ತುಂಬಾ ಕಡಿಮೆಯಿದೆ ಹಾಗೂ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ತುಂಬಾ ಕಡಿಮೆ ಇದೆ. ತುಂಬಾ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ
ಕರ್ನಾಟಕದಲ್ಲಿ ಯಾವುದೇ ಹೊಸ ತಳಿ ವೈರಸ್ ಕಂಡು ಬಂದಿಲ್ಲ. ಈಗ ಹರಡುತ್ತಿರುವುದು ಒಮಿಕ್ರಾನ್ ವೈರಸ್ ಆಗಿದೆ. ಒಮಿಕ್ರಾನ್ ಈಗಾಗಲೇ ಒಮ್ಮೆ ಬಂದು ಹೋಗಿರುವುದರಿಂದ ಇದರಿಂದ ನಾಲ್ಕನೇ ಅಲೆ ಉಂಟಾಗಲ್ಲ ಎಂಬುವುದು ತಜ್ಞರ ಅಭಿಪ್ರಾಯವಾಗಿದೆ.

ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಿ
* ಕೊರೊನಾ ಬಗ್ಗೆ ಈ ಹಿಂದೆ ನಿರ್ಲಕ್ಷ್ಯ ತೋರಿ ಎಷ್ಟು ನಷ್ಟ ಅನುಭವಿಸಿದ್ದೇವೆ ಎಂಬುವುದು ಜನರ ಅನುಭವಕ್ಕೆ ಬಂದಿದೆ
* ಆದ್ದರಿಂದ ಈ ಬಾರಿ ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಿ, ಕೊರೊನಾ ಹರಡದಂತೆ ಮುನ್ನೆಚ್ಚರಿಕೆವಹಿಸಿ.



Click it and Unblock the Notifications