Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಕರ್ನಾಟದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹತ್ತೇ ದಿನದಲ್ಲಿಮೂರು ಪಟ್ಟು ಹೆಚ್ಚಳ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚುತ್ತಿದೆ. ಜೂನ್ 1ಕ್ಕೆ ಹೋಲಿಸಿದರೆ ಈಗ ಕೊರೊನಾ ಸಮಖ್ಯೆ ಮೂರು ಪಟ್ಟು ಹೆಚ್ಚಾಗಿದೆ.

ಶಾಲೆಗಳು ಪ್ರಾರಂಭವಾಗಿದೆ, ಆಫೀಸ್ಗಳು ತಮ್ಮ ಉದ್ಯೋಗಿಗಳನ್ನು ಆಫೀಸ್ಗೆ ಬರಲು ಹೇಳುತ್ತಿದ್ದಾರೆ, ಜನ ಜೀವನ ಮೊದಲಿನ ಸ್ಥಿತಿಗೆ ಮರಲಿದೆ ಹೀಗಿರುವಾಗ ಮತ್ತೆ ಕೊರೊನಾ ಅಧಿಕವಾಗುತ್ತಿರುವುದು ಈಗ ಮತ್ತೆ ಆತಂಕಕ್ಕೆ ಕಾರಣವಾಗಿದೆ.

ಮೂರೂವರೆ ತಿಂಗಳ ಬಳಿಕ ಮತ್ತೆ ಕೊರೊನಾ ಸಂಖ್ಯೆ ಹೆಚ್ಚಳ
ಕರ್ನಾಟಕದಲ್ಲಿ ಕೊರೊನಾ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು, ಕೆಲವೊಂದು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶೂನ್ಯವಾಗಿತ್ತು. ಆದರೆ ಮೂರೂವರೆ ತಿಂಗಳ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ 500 ದಾಟಿದೆ. ಶನಿವಾರ ಅಂದರೆ ಜೂನ್ 11ಕ್ಕೆ 562 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. Covid -19 Information Portal ಮಾಹಿತಿ ಪ್ರಕಾರ ಇಂದಿಗೆ ಕರ್ನಾಟಕದಲ್ಲಿ 3, 882 ಸಕ್ರೀಯ ಕೇಸ್ಗಳಿವೆ.

ಬೆಂಗಳೂರಿನಲ್ಲಿ ಅಧಿಕ ಕೇಸ್
ಜೂನ್ 1ಕ್ಕೆ 178 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು, ಹತ್ತೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3 ಪಟ್ಟು ಹೆಚ್ಚಾಗಿದೆ. ಆದರೆ ಕಳೆದ ಸಾವಿನ ಸಂಖ್ಯೆ ತುಂಬಾ ಕಡಿಮೆಯಿದೆ ಹಾಗೂ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ತುಂಬಾ ಕಡಿಮೆ ಇದೆ. ತುಂಬಾ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ
ಕರ್ನಾಟಕದಲ್ಲಿ ಯಾವುದೇ ಹೊಸ ತಳಿ ವೈರಸ್ ಕಂಡು ಬಂದಿಲ್ಲ. ಈಗ ಹರಡುತ್ತಿರುವುದು ಒಮಿಕ್ರಾನ್ ವೈರಸ್ ಆಗಿದೆ. ಒಮಿಕ್ರಾನ್ ಈಗಾಗಲೇ ಒಮ್ಮೆ ಬಂದು ಹೋಗಿರುವುದರಿಂದ ಇದರಿಂದ ನಾಲ್ಕನೇ ಅಲೆ ಉಂಟಾಗಲ್ಲ ಎಂಬುವುದು ತಜ್ಞರ ಅಭಿಪ್ರಾಯವಾಗಿದೆ.

ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಿ
* ಕೊರೊನಾ ಬಗ್ಗೆ ಈ ಹಿಂದೆ ನಿರ್ಲಕ್ಷ್ಯ ತೋರಿ ಎಷ್ಟು ನಷ್ಟ ಅನುಭವಿಸಿದ್ದೇವೆ ಎಂಬುವುದು ಜನರ ಅನುಭವಕ್ಕೆ ಬಂದಿದೆ
* ಆದ್ದರಿಂದ ಈ ಬಾರಿ ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಿ, ಕೊರೊನಾ ಹರಡದಂತೆ ಮುನ್ನೆಚ್ಚರಿಕೆವಹಿಸಿ.



Click it and Unblock the Notifications