Latest Updates
-
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ!
ಶಿರೋಧರ: ಈ ಆಯುರ್ವೇದ ಚಿಕಿತ್ಸೆಯಿಂದ ದೊರೆಯುವ ಪ್ರಯೋಜನಗಳು
ಶಿರೋಧರ ಆಯುರ್ವೇದ ಚಿಕಿತ್ಸೆಯ ಒಂದು ವಿಧಾನವಾಗಿದೆ. ಶಿರೋ ಧರ ಎಂಬುವುದು ಸಂಸ್ಕೃತ ಪದವಾಗಿದ್ದು ಶಿರೋ ಅಂದರೆ ತಲೆ ಧರ ಅಂದ್ರೆ ಹರೆಯುವುದು. ಆಯುರ್ವೇದದಲ್ಲಿ ಹಣೆಯ ಮೇಲೆ ಎಣ್ಣೆ, ಹಾಲು, ಮೊಸರು ಅಥವಾ ನೀರು ಹಾಕಿ ಮಾಡುವ ಚಿಕಿತ್ಸಾ ವಿಧಾನವಾಗಿದೆ.
ಇದನ್ನು ಆಯುರ್ವೇದದಲ್ಲಿ ಸಾವಿರಾರು ವರ್ಷಗಳ ಹಿಂದಿನಿಂದಲೂ ಮಾಡುತ್ತಿದ್ದು ದೇಹದಲ್ಲಿನ ದೋಷ ನಿವಾರಣೆಗೆ ಸಹಕಾರಿಯಾಗಿದೆ.
ಶಿರೋಧರಾ ಚಿಕಿತ್ಸೆಯಲ್ಲಿ ಒಂದು ನಿರ್ಧಿಷ್ಟ ಎತ್ತರದಿಂದ ಎಣ್ಣೆ, ಹಾಲು, ಮೊಸರು ಅಥವಾ ತುಪ್ಪ ಇವುಗಳನ್ನು ಹಣೆಯ ಮೇಲೆ ಬೀಳುವಂತೆ ಮಾಡಲಾಗುವುದು. ನೆತ್ತಿಯ ನಡುಭಾಗ ( ಮೂರನೇಯ ಕಣ್ಣಿನ ಭಾಗದಲ್ಲಿ) ಬಿದ್ದು ತಲೆಗೆ ಹರಿಯಬೇಕು.

ಈ ಚಿಕಿತ್ಸೆ ಪಡೆಯುವುದರಿಂದ ದೊರೆಯುವ ಪ್ರಯೋಜನಗಳು ಅನೇಕ
* ಶಿರೋಧರ ಚಿಕಿತ್ಸೆ ಪಡೆದರೆ ತುಂಬಾ ಆರಾಮ ಅನಿಸುವುದು, ಮನಸ್ಸು ಹಾಗೂ ದೇಹಕ್ಕೆ ಆರಾಮ ಅನಿಸುವುದು, ದೇಹದಲ್ಲಿ ಲವಲವಿಕೆ ಮೂಡುವುದು. ಜೊತೆಗೆ ಈ ಪ್ರಯೋಜನಗಳು ದೊರೆಯುವುದು
* ಜ್ಞಾಪಕ ಶಕ್ತಿ ಹೆಚ್ಚುವುದು
* ದೇಹಕ್ಕೆ ಶಕ್ತಿ ದೊರೆಯುವುದು
* ಏಕಾಗ್ರತೆ ಹೆಚ್ಚುವುದು
* ಅನೇಕ ಕಣ್ಣಿನ ಸಮಸ್ಯೆಕ್ಕೆ ಉತ್ತಮ ಪರಿಹಾರ
* ತಲೆ ಹಾಗೂ ಮೆದುಳಿನಲ್ಲಿ ಉತ್ತಮ ರಕ್ತ ಸಂಚಾರಕ್ಕೆ ಸಹಕಾರಿ
* ಕಿವಿ ಚೆನ್ನಾಗಿ ಕೇಳುವುದು, ಮೂಗಿನ ಸಮಸ್ಯೆ ದೂರವಾಗುವುದು
* ತುಂಬಾ ಸಮಯದಿಂದ ಕಾಡುತ್ತಿರುವ ತಲೆನೋವು, ಮೈಗ್ರೇನ್ ದೂರವಾಗುವುದು
* ಮಾನಸಿಕ ಒತ್ತಡ ಕಡಿಮೆಯಾಗುವುದು

ಇದನ್ನು ಹೇಗೆ ಮಾಡಲಾಗುವುದು?
* ಇದನ್ನು ಆಯುರ್ವೇದ ಪರಿಣಿತರು ಮಾಡುತ್ತಾರೆ. ಈ ಚಿಕಿತ್ಸೆ ಮಾಡುವಾಗ ಬೆನ್ನಿನ ಮೇಲೆ ಮಲಗಿಸಿ ನಿಮಗೆ ಆರಾಮವಾಗಿ ಕಣ್ಣುಚ್ಚಿ ಮಲಗಿ ಎಂದು ಹೇಳುತ್ತಾರೆ.
* ನಂತರ ತಜ್ಞರು ಶಿರೋಧರಕ್ಕೆ ಬಳಸುವ ದ್ರವವನ್ನು ನಿಮ್ಮ ದೇಹದ ಉಷ್ಣತೆಗೆ ಹೊಂದುವಂತೆ ಬಿಸಿ ಮಾಡಿ ನಂತರ ಹಣೆಗೆ ಆ ದ್ರವನ್ನು ಮೆಲ್ಲನೆ ಬಿಡಲಾಗುವುದು. ಇದಕ್ಕೆ ಶಿರೋಧರ ಪಾತ್ರೆ ಬಳಸಲಾಗುವುದು (ಇದರಲ್ಲಿ ಕೆಳಗಡೆ ಒಂದು ರಂಧ್ರವಿರುತ್ತದೆ).ಕಣ್ಣುಗಳ ಮೇಲೆ ಏನಾದರೂ ಚಿಕ್ಕ ಟವಲ್ ಹಾಕುತ್ತಾರೆ. ಈ ಚಿಕಿತ್ಸೆ 30 ರಿಂದ 90 ನಿಮಿಷ ಇರುತ್ತದೆ. ಶಿರೋಧರ ಮೊದಲಿಗೆ ಅಥವಾ ನಂತರ ಮಸಾಜ್ ಕೂಡ ಮಾಡಲಾಗುವುದು.

ಶಿರೋಧರಕ್ಕೆ ಬಳಸುವ ದ್ರವಗಳು
* ಸಾಸಿವೆಯೆಣ್ಣೆ
* ತೆಂಗಿನೆಣ್ಣೆ
* ತುಪ್ಪ ಕೆಲವರು ಇವುಗಳನ್ನು ಕೂಡ ಬಳಸುತ್ತಾರೆ
* ನೀರು
* ಎಳನೀರು
* ಹಸುವಿನ ಹಾಲು
* ಮೊಸರು

ಈ ಚಿಕಿತ್ಸೆ ಸುರಕ್ಷತೆವೇ?
* ಶಿರೋಧರ ಸುಕ್ಷಿತವಾದ ಚಿಕಿತ್ಸೆ ವಿಧಾನವಾಗಿದೆ.
* ಇದರಿಂದ ಯಾವುದೇ ಕಿರಕಿರಿ ಅಥವಾ ಅಡ್ಡಪರಿಣಾಮ ಉಂಟಾಗುವುದಿಲ್ಲ
* ದ್ರವವನ್ನು ಹಣೆಗೆ ಸುರಿಯುವ ಮೊದಲಿಗೆ ಪ್ಯಾಚ್ ಟೆಸ್ಟ್ ಮಾಡಲಾಗುವುದು.
* ಇದನ್ನು ಪರಿಣಿತರ ಬಳಿಯಿಂದಷ್ಟೇ ತೆಗೆಯಬೇಕು.

ಕೊನೆಯದಾಗಿ:
ಈ ರೀತಿಯ ಆಯುರ್ವೇದ ಚಿಕಿತ್ಸೆ ನಿಮ್ಮ ಮನಸ್ಸು ಹಾಗೂ ದೇಹದ ಒಟ್ಟು ಮೊತ್ತದ ಆರೋಗ್ಯಕ್ಕೆ ತುಂಬಾನೇ ಸಹಕಾರಿ. ನುರಿತ ಪರಿಣಿತರಿಂದ ಈ ಚಿಕಿತ್ಸೆ ಪಡೆಯಿರಿ.



Click it and Unblock the Notifications