Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಬೇಸಿಗೆಯಲ್ಲಿ ದೇಹ ತಂಪಾಗಿಡಲು ಆರ್ಯುರ್ವೇದ ಟಿಪ್ಸ್
ಬೇಸಿಗೆಯ ದಗೆ ಹೆಚ್ಚುತ್ತಿದೆ... ಸೆಕೆ ಅಧಿಕವಾಗುತ್ತಿದ್ದಂತೆ ದೇಹದ ಉಷ್ಣತೆ ಕೂಡ ಹೆಚ್ಚಾಗುವುದು. ದೇಹದಲ್ಲಿ ಉಷ್ಣಾಂಶ ಹೆಚ್ಚಾದರೆ ಮೂತ್ರ ಉರಿ, ಮೈಯಲ್ಲಿ ಬೊಬ್ಬೆ ಮುಂತಾದ ಸಮಸ್ಯೆ ಕಂಡು ಬರುವುದು. ಆದ್ದರಿಂದ ಬೇಸಿಗೆಯಲ್ಲಿ ಮೈಯನ್ನು ತಂಪಾಗಿ ಇಡಬೇಕು.

ಬೇಸಿಗೆ ಎಂದ ಪಿತ್ತದ ಕಾಲವಾಗಿದೆ. ದೇಹದಲ್ಲಿ ಉಷ್ಣತೆ ಕಾಪಾಡದಿದ್ದರೆ ಪಿತ್ತ ದೋಷ ಉಂಟಾಗುವುದು. ಈ ಉಷ್ಣತೆಯ ವಿರುದ್ಧ ನಿಮ್ಮ ದೇಹದ ಆರೋಗ್ಯ ಕಾಪಾಡುವಲ್ಲಿ ಆಹಾರ ಸಹಾಯ ಮಾಡುತ್ತೆ. ಈರುಳ್ಳಿ, ಸೊಪ್ಪು, ಹಣ್ಣುಗಳ ಸೇವನೆ, ಸಾಕಷ್ಟು ನೀರು ಕುಡಿಯುವುದು ಇವೆಲ್ಲಾ ಬೇಸಿಗೆ ಕಾಲದಲ್ಲಿ ನಿಮ್ಮ ದೇಹ ತಂಪಾಗಿಡಲು ಸಹಕಾರಿ.
ನಾವಿಲ್ಲ ಬೇಸಿಗೆ ಕಾಲದಲ್ಲಿ ನಿಮ್ಮ ದೇಹ ತಂಪಾಗಿಡಲು ಆಯುರ್ವೇದ ನೀಡಿರುವ ಟಿಪ್ಸ್ ನೀಡಿದ್ದೇವೆ ನೋಡಿ:

ಪಿತ್ತ ಕಡಿಮೆ ಮಾಡುವ ಆಹಾರ ಸೇವಿಸಿ
ನೀವು ದೇಹನ್ನು ತಂಪಾಗಿಸುವ, ಸೆಕೆಯಿಂದ ಸ್ವಲ್ಪ ರಿಲೀಫ್ ನೀಡುವ ಆಹಾರ ಸೇವಿಸಬೇಕು, ಕಲ್ಲಂಗಡಿ ಹಣ್ಣು, ಪಿಯರ್ಸ್, ಸೇಬು, ಪ್ಲಮ್, ಬೆರ್ರಿ ಹಣ್ಣುಗಳು, ಬ್ರೊಕೋಲಿ, ಸೊಪ್ಪು, ಮೊಳಕೆ ಬರಿಸಿದ ಹೆಸರು ಕಾಳು ಈ ರೀತಿಯ ಆಹಾರ ಸೇವಿಸಿ.

ಮೈ ಉಷ್ಣತೆ ಹೆಚ್ಚಿಸುವ ಆಹಾರ ಸೇವಿಸಬೇಡಿ
ನಿಮ್ಮ ದೇಹದ ಉಷ್ಣತೆ ಹೆಚ್ಚಿಸುವ ಆಹಾರ ಸೇವಿಸದಿರುವುದು ಒಳ್ಳೆಯದು. ಅದರಲ್ಲೂ ಹುಳಿ ಆಹಾರ ಪದಾರ್ಥಗಳನ್ನು ದೂರವಿಡಿ. ಉದಾಹರಣೆಗ ಸಿಟ್ರಸ್ ಇರುವ ಹಣ್ಣುಗಳು, ಹುಳಿಯಾದ ಟೊಮೆಟೊ, ಬೆಳ್ಳುಳ್ಳಿ, ಮೆಣಸು, ಟೊಮೆಟೊ, ಚೀಸ್ ಇವೆಲ್ಲಾ ಮೈ ಉಷ್ಣತೆ ಹೆಚ್ಚಿಸುತ್ತದೆ. ಈ ಸಮಯದಲ್ಲಿ ಸಲಾಡ್ ತಿನ್ನುವುದು ಒಳ್ಳೆಯದು. ಚಿಕನ್ ಸೇವನೆ ಕಮ್ಮಿ ಮಾಡಿ.

ಸರಿಯಾದ ಸಮಯಕ್ಕೆ ಊಟ ಮಾಡಿ
ನಿಮಗೆ ತುಂಬಾ ಹಸಿದಾಗ ತಿನ್ನಬೇಕು, ಮಧ್ಯಾಹ್ನ ಸರಿಯಾದ ಹೊತ್ತಿನಲ್ಲಿ ಊಟ ಮಾಡಿ. ಇಲ್ಲದಿದ್ದರೆ ಪಿತ್ತದೋಷ ಉಂಟಾಗಿ ತೊಂದರೆ ಉಂಟಾಗುವುದು.

ತೆಂಗಿನೆಣ್ಣೆ ಮೈಗೆ ಹಚ್ಚಿ
ಆಯುರ್ವೇದ ಪ್ರಕಾರ ನೀವು ಸ್ನಾನ ಮಾಡುವ ಮೊದಲು ತೆಂಗಿನೆಣ್ಣೆ ಮೈಗೆ ಹಚ್ಚಿದರೆ ಮೈ ತಂಪಾಗುವುದು. ಇದರಿಂದ ತ್ವಚೆಯೂ ಮೃದುವಾಗುವುದು.

ಬಿಸಿ ಪಾನೀಯ ಅಥವಾ ನೀರು ಕುಡಿಯುವುದು ಕಡಿಮೆ ಮಾಡಿ
ಬಿಸಿ ಬಿಸಿ ಕಾಫಿ, ನೀರು ಕುಡಿಯುವುದು ಕಡಿಮೆ ಮಾಡಿ. ಬದಲಿಗೆ ಕುದಿಸಿ ಆರಿಸಿದ ನೀರು ಕುಡಿಯಿರಿ. ಇನ್ನು ಮಜ್ಜಿಗೆ ಮಾಡಿ ಕುಡಿಯಿರಿ.

ಹಗಲು ಹೊತ್ತಿನಲ್ಲಿ ವ್ಯಾಯಾಮ ಬೇಡ
ವ್ಯಾಯಾಮವನ್ನು ಮುಂಜಾನೆ ಮಾಡುವುದು ಒಳ್ಳೆಯದು. ಈ ಸಮಯದಲ್ಲಿ ವಾತಾವರಣ ತಂಪಾಗಿ ಇರುತ್ತದೆ. ಇನ್ನು ಹಗಲು ಹೊತ್ತಿನಲ್ಲಿ ವ್ಯಾಯಾಮ ಮಾಡಲು ಹೋಗಬೇಡಿ. ಅಲ್ಲದೆ ಹೊರಗಡೆ ಉರಿ ಬಿಸಿಲಿನಲ್ಲಿ ಕೆಲಸ ಮಾಡುವ ಬದಲು ಬೆಳಗ್ಗೆ ಅಥವಾ ಸಂಜೆ ಹೊತ್ತಿನಲ್ಲಿ ಮಾಡುವುದು ಒಳ್ಳೆಯದು.

ತುಂಬಾ ತಣ್ಣನೆಯ ನೀರು ಕುಡಿಯಬೇಡಿ
ಬೇಸಿಗೆಯಲ್ಲಿ ತಣ್ಣನೆಯ ಪಾನೀಯ ಕುಡಿಯಬೇಕೆನಿಸುವುದು ಸಹಜ. ಆದರೆ ಐಸ್ ವಾಟರ್ ಅಥವಾ ಪಾನೀಯ ಕುಡಿಯುವುದು ಒಳ್ಳೆಯದಲ್ಲ. ಇದರಿಂದ ಜೀರ್ಣಕ್ರಿಯೆಗೆ ತೊಂದರೆ ಉಂಟಾಗುವುದು. ಅಲ್ಲದೆ ದೇಹದಲ್ಲಿ ಕಶ್ಮಲ ಉಂಟಾಗುತ್ತದೆ. ಆದ್ದರಿಂದ ಫ್ರಿಡ್ಜ್ನಲ್ಲಿಟ್ಟ ನೀರು ಕುಡಿಯುವುದು, ಐಸ್ ಹಾಕಿದ ಜ್ಯೂಸ್ ಕುಡಿಯುವುದು ಜೀರ್ಣಕ್ರಿಯೆಯ ದೃಷ್ಟಿಯಿಂದ ಒಳ್ಳೆಯದಲ್ಲ.



Click it and Unblock the Notifications
