Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಭಾರತದಲ್ಲಿ ಪತ್ತೆಯಾಗಿದೆ ಹೊಸ ಕೊರೊನಾ ವೈರಸ್: ವಿಶ್ವ ಆರೋಗ್ಯ ಸಂಸ್ಥೆ
ಕೊರೊನಾವೈರಸ್ ಎರಡವರೆ ವರ್ಷದಿಂದ ಈ ಜಗತ್ತನ್ನು ಕಾಡುತ್ತಿದೆ, ಲಸಿಕೆ ಬಂದ ಮೇಲೆ ಇದರ ಆರ್ಭಟ ಕಡಿಮೆಯಾದರೂ ಆತಂಕ ಮಾತ್ರ ಕಡಿಮೆಯಾಗಿಲ್ಲ. ಕೊರೊನಾ ಹೆಚ್ಚಾಗುವುದು, ಕಡಿಮೆಯಾಗುವುದು, ಮತ್ತೆ ಹೆಚ್ಚಾಗುವುದು ಈ ರೀತಿ ಆಗುತ್ತಲೇ ಇದೆ.
ಇದೀಗ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದು ಕಡೆ ಮಳೆ ಆರ್ಭಟ, ಇದರ ಜೊತೆಗೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ದೇಶದಲ್ಲಿ ಹೊಸದಾಗಿ ಒಮಿಕ್ರಾನ್ನ ಉಪ ತಳಿ ವೈರಸ್ ಪತ್ತೆಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಹೊಸ ತಳಿ ವೈರಸ್ ಕಂಡು ಬಂದರೆ ಏಕೆ ಅಪಾಯಕಾರಿ, ಭಾರತದಲ್ಲಿ ಕಂಡು ಬಂದಿರುವ ಆ ಹೊಸ ತಳಿಯ ವೈರಸ್ ಯಾವುದು ಎಂಬೆಲ್ಲಾ ಮಾಹಿತಿ ಇಲ್ಲಿದೆ ನೋಡಿ:

ಹೊಸ ವೈರಸ್ ಅಪಾಯಕಾರಿಯೇ?
ಈಗ ಪತ್ತೆಯಾಗಿರುವ ಹೊಸ ಕೊರೊನಾ ರೂಪಾಂತರ BA.2.75 ಯಾವ ರೀತಿಯ ಪ್ರಭಾವ ಬೀರಲಿದೆ ಎಂಬುವುದರ ಬಗ್ಗೆ ನಿಖರವಾಗಿ ತಿಳಿದು ಬಂದಿಲ್ಲ. ಇದರ ಬಗ್ಗೆ ಅನೇಕ ಅಧ್ಯಯನಗಳು ನಡೆಯುತ್ತಿವೆ.
ಹೊಸ ಕೊರೊನಾ ವೈರಸ್ ಬಗ್ಗೆ ಹೇಳುವುದಕ್ಕೆ ಈಗ ಸಾಧ್ಯವಿಲ್ಲ, ಏಕೆಂದರೆ ಈ ವೈರಸ್ ಹೀಗಷ್ಟೇ ಪತ್ತೆಯಾಗಿರುವುದರಿಂದ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ.
ವಿಶ್ವ ಆರೋಗ್ಯ ಸಂಸ್ಥೆಯ ಟೆಕ್ನಿಕಲ್ ಅಡ್ವೈಸರಿ ಗ್ರೂಪ್ ಈ ಹೊಸ ತಳಿಯ ಬಗ್ಗೆ ನಿಗಾ ಇಟ್ಟಿದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ನಾಲ್ಕನೇ ಅಲೆ ಶುರುವಾಗಿದೆಯೇ?
ಭಾರತದಲ್ಲಿ ಇದುವರೆಗೆ ಹೊಸ ತಳಿಯ ವೈರಸ್ ಪತ್ತೆಯಾಗಿರಲಿಲ್ಲ, ಒಮಿಕ್ರಾನ್ ರೂಪಾಂತರ ಕೇಸ್ಗಳಷ್ಟೇ ಕಂಡು ಬರುತ್ತಿತ್ತು, ಈ ಕಾರಣದಿಂದಾಗಿ ಭಾರತದಲ್ಲಿ ಕೊರೊನಾ ನಾಲ್ಕನೇ ಅಲೆ ಇಲ್ಲ ಎಂದು ವಿಜ್ಞಾನಿಗಳು ಹೇಳುತ್ತಿದ್ದರು.
ಆದರೆ ಈಗ ಹೊಸ ತಳಿ ಪತ್ತೆಯಾಗಿರುವುದರಿಂದ ಇದು ಅಪಾಯಕಾರಿಯೇ , ಇಲ್ಲವೇ ಎಂಬುವುದು ಇನ್ನಷ್ಟೇ ತಿಳಿಯಬೇಕಾಗಿದೆ.

ವಿಶ್ವದಲ್ಲಿ ಕೊರೊನಾ ಸಂಖ್ಯೆ
ಜುಲೈ 3, 2022ರವರೆಗಿನ ಅಂಕಿ ಅಂಶಗಳನ್ನು ನೋಡಿದರೆ 546 ಮಿಲಿಯನ್ ಜನರಿಗೆ ಕೋವಿಡ್ 19 ಬಾಧಿಸಿದೆ, 6.3 ಮಿಲಿಯನ್ ಜನರು ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.

ಬೂಸ್ಟರ್ನ ಅಗ್ಯತತೆ
ಭಾರತದಲ್ಲಿ ಕೋವಿಡ್ 19 ಲಸಿಕೆಯ 2 ಡೋಸ್ ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಬೂಸ್ಟರ್ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗಿತ್ತು. ಕೆಲವರು ಬೂಸ್ಟರ್ ಲಸಿಕೆ ಪಡೆದಿದ್ದಾರೆ. ಇನ್ನು ಕೆಲವರು ಪಡೆಯಬೇಕಾಗಿದೆ.
ಇದೀಗ ಕೊರೊನಾ ಆತಂಕ ಮತ್ತೆ ಹೆಚ್ಚಾಗಿರುವುದರಿಂದ ವಯಸ್ಸಾದವರು ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಬೂಸ್ಟರ್ ಪಡೆದುಕೊಳ್ಳುವುದರಿಂದ ಕೊರೊನಾದಿಂದ ರಕ್ಷಣೆ ಪಡೆಯಬಹುದು.



Click it and Unblock the Notifications