Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಭಾರತದಲ್ಲಿ ಪತ್ತೆಯಾಗಿದೆ ಹೊಸ ಕೊರೊನಾ ವೈರಸ್: ವಿಶ್ವ ಆರೋಗ್ಯ ಸಂಸ್ಥೆ
ಕೊರೊನಾವೈರಸ್ ಎರಡವರೆ ವರ್ಷದಿಂದ ಈ ಜಗತ್ತನ್ನು ಕಾಡುತ್ತಿದೆ, ಲಸಿಕೆ ಬಂದ ಮೇಲೆ ಇದರ ಆರ್ಭಟ ಕಡಿಮೆಯಾದರೂ ಆತಂಕ ಮಾತ್ರ ಕಡಿಮೆಯಾಗಿಲ್ಲ. ಕೊರೊನಾ ಹೆಚ್ಚಾಗುವುದು, ಕಡಿಮೆಯಾಗುವುದು, ಮತ್ತೆ ಹೆಚ್ಚಾಗುವುದು ಈ ರೀತಿ ಆಗುತ್ತಲೇ ಇದೆ.
ಇದೀಗ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದು ಕಡೆ ಮಳೆ ಆರ್ಭಟ, ಇದರ ಜೊತೆಗೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ದೇಶದಲ್ಲಿ ಹೊಸದಾಗಿ ಒಮಿಕ್ರಾನ್ನ ಉಪ ತಳಿ ವೈರಸ್ ಪತ್ತೆಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಹೊಸ ತಳಿ ವೈರಸ್ ಕಂಡು ಬಂದರೆ ಏಕೆ ಅಪಾಯಕಾರಿ, ಭಾರತದಲ್ಲಿ ಕಂಡು ಬಂದಿರುವ ಆ ಹೊಸ ತಳಿಯ ವೈರಸ್ ಯಾವುದು ಎಂಬೆಲ್ಲಾ ಮಾಹಿತಿ ಇಲ್ಲಿದೆ ನೋಡಿ:

ಹೊಸ ವೈರಸ್ ಅಪಾಯಕಾರಿಯೇ?
ಈಗ ಪತ್ತೆಯಾಗಿರುವ ಹೊಸ ಕೊರೊನಾ ರೂಪಾಂತರ BA.2.75 ಯಾವ ರೀತಿಯ ಪ್ರಭಾವ ಬೀರಲಿದೆ ಎಂಬುವುದರ ಬಗ್ಗೆ ನಿಖರವಾಗಿ ತಿಳಿದು ಬಂದಿಲ್ಲ. ಇದರ ಬಗ್ಗೆ ಅನೇಕ ಅಧ್ಯಯನಗಳು ನಡೆಯುತ್ತಿವೆ.
ಹೊಸ ಕೊರೊನಾ ವೈರಸ್ ಬಗ್ಗೆ ಹೇಳುವುದಕ್ಕೆ ಈಗ ಸಾಧ್ಯವಿಲ್ಲ, ಏಕೆಂದರೆ ಈ ವೈರಸ್ ಹೀಗಷ್ಟೇ ಪತ್ತೆಯಾಗಿರುವುದರಿಂದ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ.
ವಿಶ್ವ ಆರೋಗ್ಯ ಸಂಸ್ಥೆಯ ಟೆಕ್ನಿಕಲ್ ಅಡ್ವೈಸರಿ ಗ್ರೂಪ್ ಈ ಹೊಸ ತಳಿಯ ಬಗ್ಗೆ ನಿಗಾ ಇಟ್ಟಿದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ನಾಲ್ಕನೇ ಅಲೆ ಶುರುವಾಗಿದೆಯೇ?
ಭಾರತದಲ್ಲಿ ಇದುವರೆಗೆ ಹೊಸ ತಳಿಯ ವೈರಸ್ ಪತ್ತೆಯಾಗಿರಲಿಲ್ಲ, ಒಮಿಕ್ರಾನ್ ರೂಪಾಂತರ ಕೇಸ್ಗಳಷ್ಟೇ ಕಂಡು ಬರುತ್ತಿತ್ತು, ಈ ಕಾರಣದಿಂದಾಗಿ ಭಾರತದಲ್ಲಿ ಕೊರೊನಾ ನಾಲ್ಕನೇ ಅಲೆ ಇಲ್ಲ ಎಂದು ವಿಜ್ಞಾನಿಗಳು ಹೇಳುತ್ತಿದ್ದರು.
ಆದರೆ ಈಗ ಹೊಸ ತಳಿ ಪತ್ತೆಯಾಗಿರುವುದರಿಂದ ಇದು ಅಪಾಯಕಾರಿಯೇ , ಇಲ್ಲವೇ ಎಂಬುವುದು ಇನ್ನಷ್ಟೇ ತಿಳಿಯಬೇಕಾಗಿದೆ.

ವಿಶ್ವದಲ್ಲಿ ಕೊರೊನಾ ಸಂಖ್ಯೆ
ಜುಲೈ 3, 2022ರವರೆಗಿನ ಅಂಕಿ ಅಂಶಗಳನ್ನು ನೋಡಿದರೆ 546 ಮಿಲಿಯನ್ ಜನರಿಗೆ ಕೋವಿಡ್ 19 ಬಾಧಿಸಿದೆ, 6.3 ಮಿಲಿಯನ್ ಜನರು ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.

ಬೂಸ್ಟರ್ನ ಅಗ್ಯತತೆ
ಭಾರತದಲ್ಲಿ ಕೋವಿಡ್ 19 ಲಸಿಕೆಯ 2 ಡೋಸ್ ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಬೂಸ್ಟರ್ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗಿತ್ತು. ಕೆಲವರು ಬೂಸ್ಟರ್ ಲಸಿಕೆ ಪಡೆದಿದ್ದಾರೆ. ಇನ್ನು ಕೆಲವರು ಪಡೆಯಬೇಕಾಗಿದೆ.
ಇದೀಗ ಕೊರೊನಾ ಆತಂಕ ಮತ್ತೆ ಹೆಚ್ಚಾಗಿರುವುದರಿಂದ ವಯಸ್ಸಾದವರು ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಬೂಸ್ಟರ್ ಪಡೆದುಕೊಳ್ಳುವುದರಿಂದ ಕೊರೊನಾದಿಂದ ರಕ್ಷಣೆ ಪಡೆಯಬಹುದು.



Click it and Unblock the Notifications