Just In
Don't Miss
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಲಸಿಕೆ ಹಾಕಿಕೊಳ್ಳಿ ಎಂದು ಒತ್ತಾಯ ಮಾಡುವಂತಿಲ್ಲ: ಸುಪ್ರೀಂಕೋರ್ಟ್ನಿಂದ ಮಹತ್ತರದ ಆದೇಶ
ಕೊರೊನಾ ಲಸಿಕೆ ಹಾಕುವಂತೆ ಯಾರನ್ನೂ ಬಲವಂತ ಪಡಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ತರದ ಆದೇಶ ಹೊರಡಿಸಿದೆ. ಅಲ್ಲದೆ ಕೇಂದ್ರ ಸರ್ಕಾರಕ್ಕೆ ಕೊರೊನಾ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ವರದಿ ಪ್ರಕಟಿಸುವಂತೆ ಹೇಳಿದೆ.
ಸಮಸ್ತ ದೇಹವು ಕಾನೂನಿನ ಅಡಿಯಲ್ಲಿ ರಕ್ಷಿಸಲ್ಪಟ್ಟಿದೆ, ಯಾರೂ ಲಸಿಕೆ ಪಡೆಯುವಂತೆ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ. ಆದರೆ ವೈಯಕ್ತಿಯ ಹಕ್ಕಿನಲ್ಲಿ ಕೆಲವೊಂದು ಇತಿಮಿತಿಗಳಿವೆ. ಸಮುದಾಯದ ಆರೋಗ್ಯದ ದೃಷ್ಟಿಯಿಂದ ಕೆಲವೊಂದು ನಿರ್ಬಂಧಗಳನ್ನು ವಿಧಿಸಬಹುದು ಎಂದು ಹೇಳಿದೆ.
ಕೊರೊನಾ ಲಸಿಕೆ ಹಾಕದವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧ ಹಾಕಬಾರದು
ಒಂದು ವೇಳೆ ಕೊರೊನಾ ಕೇಸ್ಗಳು ಮಿತಿಯಲ್ಲಿದ್ದರೆ ಕೊರೊನಾ ನಿಯಮಗಳನ್ನು ಪಾಲಿಸಿರುವ ಕೊರೊನಾ ಲಸಿಕೆ ಹಾಕದೇ ಇರುವ ವ್ಯಕ್ತಿಗೆ ಸಾರ್ವಜನಿಕ ಸ್ಥಳಗಳಿಗೆ ಬರುವುದಕ್ಕೆ ನಿರ್ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೊರೊನಾ ಲಸಿಕೆ ಹಾಕದೇ ಇರುವವರು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಯಾವುದೇ ಅಡೆತಡೆಯಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಈ ತೀರ್ಪು ಕೋವಿಡ್ ನಿಯಮಗಳಿಗೆ ಅನ್ವಹಿಸುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಂತಾದ ಕೊರೊನಾ ನಿಯಮಗಳಿದ್ದರೆ ಅದನ್ನು ಪಾಲಿಸಬೇಕಾಗುತ್ತದೆ.
ಲಸಿಕೆ ಅಡ್ಡ ಪರಿಣಾಮದ ಬಗ್ಗೆ ಮಾಹಿತಿ ನೀಡಿ
ಲಸಿಕೆ ಕುರಿತು ನಡೆಸಿದ ಕ್ಲಿನಿಕಲ್ ಅಧ್ಯಯನ ವರದಿ, ಈ ಹಿಂದೆ ನಡೆದ ಪರೀಕ್ಷೆಗಳು, ಈಗ ನಡೆಸುತ್ತಿರುವ ಪರೀಕ್ಷೆಗಳು, ಲಸಿಕೆಯ ಅಡ್ಡಪರಿಣಾಗಳು ಎಲ್ಲದರ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಹೇಳಿದೆ.
ಮಕ್ಕಳಿಗೆ ನೀಡುವ ಲಸಿಕೆ ಜಾಗತಿಕ ಮಾನದಂಡ ಹೊಂದಿರಬೇಕು
ಮಕ್ಕಳಿಗೆ ಲಸಿಕೆ ನೀಡುವಾಗ ತಜ್ಞರಲ್ಲಿ ಎರಡನೇ ಅಭಿಪ್ರಾಯ ಇರಬಾರದು, ಲಸಿಕೆ ಜಾಗತಿಕ ಮಾನದಂಡವನ್ನು ಹೊಂದಿರಬೇಕು, ಇದರ ಅಡ್ಡಪರಿಣಾಮಗಳ ಕುರಿತು ಆದಷ್ಟು ಬೇಗ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.