Latest Updates
-
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ?
ಕೊರೊನಾ ಲಸಿಕೆ ಹಾಕಿಕೊಳ್ಳಿ ಎಂದು ಒತ್ತಾಯ ಮಾಡುವಂತಿಲ್ಲ: ಸುಪ್ರೀಂಕೋರ್ಟ್ನಿಂದ ಮಹತ್ತರದ ಆದೇಶ
ಕೊರೊನಾ ಲಸಿಕೆ ಹಾಕುವಂತೆ ಯಾರನ್ನೂ ಬಲವಂತ ಪಡಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ತರದ ಆದೇಶ ಹೊರಡಿಸಿದೆ. ಅಲ್ಲದೆ ಕೇಂದ್ರ ಸರ್ಕಾರಕ್ಕೆ ಕೊರೊನಾ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ವರದಿ ಪ್ರಕಟಿಸುವಂತೆ ಹೇಳಿದೆ.

ಸಮಸ್ತ ದೇಹವು ಕಾನೂನಿನ ಅಡಿಯಲ್ಲಿ ರಕ್ಷಿಸಲ್ಪಟ್ಟಿದೆ, ಯಾರೂ ಲಸಿಕೆ ಪಡೆಯುವಂತೆ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ. ಆದರೆ ವೈಯಕ್ತಿಯ ಹಕ್ಕಿನಲ್ಲಿ ಕೆಲವೊಂದು ಇತಿಮಿತಿಗಳಿವೆ. ಸಮುದಾಯದ ಆರೋಗ್ಯದ ದೃಷ್ಟಿಯಿಂದ ಕೆಲವೊಂದು ನಿರ್ಬಂಧಗಳನ್ನು ವಿಧಿಸಬಹುದು ಎಂದು ಹೇಳಿದೆ.

ಕೊರೊನಾ ಲಸಿಕೆ ಹಾಕದವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧ ಹಾಕಬಾರದು
ಒಂದು ವೇಳೆ ಕೊರೊನಾ ಕೇಸ್ಗಳು ಮಿತಿಯಲ್ಲಿದ್ದರೆ ಕೊರೊನಾ ನಿಯಮಗಳನ್ನು ಪಾಲಿಸಿರುವ ಕೊರೊನಾ ಲಸಿಕೆ ಹಾಕದೇ ಇರುವ ವ್ಯಕ್ತಿಗೆ ಸಾರ್ವಜನಿಕ ಸ್ಥಳಗಳಿಗೆ ಬರುವುದಕ್ಕೆ ನಿರ್ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೊರೊನಾ ಲಸಿಕೆ ಹಾಕದೇ ಇರುವವರು ತಮ್ಮ ಕಾರ್ಯಗಳನ್ನು ನಿರ್ವಹಿಸಲು ಯಾವುದೇ ಅಡೆತಡೆಯಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಈ ತೀರ್ಪು ಕೋವಿಡ್ ನಿಯಮಗಳಿಗೆ ಅನ್ವಹಿಸುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಂತಾದ ಕೊರೊನಾ ನಿಯಮಗಳಿದ್ದರೆ ಅದನ್ನು ಪಾಲಿಸಬೇಕಾಗುತ್ತದೆ.

ಲಸಿಕೆ ಅಡ್ಡ ಪರಿಣಾಮದ ಬಗ್ಗೆ ಮಾಹಿತಿ ನೀಡಿ
ಲಸಿಕೆ ಕುರಿತು ನಡೆಸಿದ ಕ್ಲಿನಿಕಲ್ ಅಧ್ಯಯನ ವರದಿ, ಈ ಹಿಂದೆ ನಡೆದ ಪರೀಕ್ಷೆಗಳು, ಈಗ ನಡೆಸುತ್ತಿರುವ ಪರೀಕ್ಷೆಗಳು, ಲಸಿಕೆಯ ಅಡ್ಡಪರಿಣಾಗಳು ಎಲ್ಲದರ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಹೇಳಿದೆ.

ಮಕ್ಕಳಿಗೆ ನೀಡುವ ಲಸಿಕೆ ಜಾಗತಿಕ ಮಾನದಂಡ ಹೊಂದಿರಬೇಕು
ಮಕ್ಕಳಿಗೆ ಲಸಿಕೆ ನೀಡುವಾಗ ತಜ್ಞರಲ್ಲಿ ಎರಡನೇ ಅಭಿಪ್ರಾಯ ಇರಬಾರದು, ಲಸಿಕೆ ಜಾಗತಿಕ ಮಾನದಂಡವನ್ನು ಹೊಂದಿರಬೇಕು, ಇದರ ಅಡ್ಡಪರಿಣಾಮಗಳ ಕುರಿತು ಆದಷ್ಟು ಬೇಗ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.



Click it and Unblock the Notifications











