Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಈ ಜೂನ್ನಲ್ಲಿ ಹೆಚ್ಚಾಗಲಿದೆ ಕೊರೊನಾ: ಕರ್ನಾಟಕ ಆರೋಗ್ಯ ಮಂತ್ರಿ ಡಾ. ಕೆ ಸುಧಾಕರ್
ಭಾರತದಲ್ಲೀಗ ಕೊರೊನಾ ನಾಲ್ಕನೇ ಅಲೆಯ ಆತಂಕ ಶುರುವಾಗಿದೆ. ದಿನೇ ದಿನೇ ಕೇಸ್ಗಳು ಶೇ.90ರಷ್ಟು ವೇಗದಲ್ಲಿ ಹರಡುತ್ತಿದೆ, ಈಗ ಕೊರೊನಾ ಹರಡುವುದನ್ನು ತಡೆಗಟ್ಟಗಳು ಆಯಾ ರಾಜ್ಯ ಸರ್ಕಾರಗಳು ಮುಂದಾಗಿವೆ. ಕರ್ನಾಟಕ ಕೂಡ ಈ ಕುರಿತು ಕಟ್ಟುನಿಟ್ಟಿನ ಎಚ್ಚರವಹಿಸಲು ಮುಂದಾಗಿದೆ. ಅದರಲ್ಲೂ ಹೊರ ದೇಶದಿಂದ ಬರುವವರ ಮೇಲೆ ನಿಗಾ ಇಡಲು ಮುಂದಾಗಿದೆ. ಅವರ ಕಾಂಟ್ಯಾಕ್ಟ್ ನಂಬರ್ ಹಾಗೂ ವಿಳಾಸ ತೆಗೆದುಕೊಂಡು ಅವರ ಆರೋಗ್ಯದ ಮೇಲೆ ನಿಗಾ ಇಡುತ್ತಿದೆ.
ಕರ್ನಾಟಕದಲ್ಲಿ ಜನರ ಸುರಕ್ಷತೆಗೆ ಏನೆಲ್ಲಾ ಕ್ರಮ ಕೈಗೊಂಡಿದೆ, ಆರೋಗ್ಯ ಮಂತ್ರಿ ಡಾ. ಕೆ ಸುಧಾಕರ್ ಹೇಳಿರುವುದೇನು ಎಂದು ನೋಡೋಣ ಬನ್ನಿ:

ಜೂನ್ನಲ್ಲಿ ಹೆಚ್ಚಾಗಲಿದೆ ಕೊರೊನಾ
ಆರೋಗ್ಯ ಮಂತ್ರಿ ಡಾ. ಕೆ ಸುಧಾಕರ್ ತಜ್ಞರ ಸಮಿತಿಯ ಸಲಹೆಯ ಬಳಿಕ ಕೊರೊನಾ ಬಗ್ಗೆ ಮಾತನಾಡಿದ್ದಾರೆ. ಕೊರೊನಾ ನಾಲ್ಕನೇ ಅಲೆ ಭಾರತದಲ್ಲಿ ಜೂನ್ನಲ್ಲಿ ಹೆಚ್ಚಾಗಲಿದೆ ಇದರ ಪ್ರಬಾವ ಅಕ್ಟೋಬರ್ವರೆಗೆ ಇರಲಿದೆ. ಆದ್ದರಿಂದ ಜನರು ಮುನ್ನೆಚ್ಚರಿಕೆವಹಿಸಬೇಕೆಂದು ಹೇಳಿದ್ದಾರೆ.

IIT ಕಾನ್ಪುರ್ ಅಧ್ಯಯನ ಈ ಮೊದಲೇ ಎಚ್ಚರಿಸಿತ್ತು
IIT ಕಾನ್ಪುರ್ ಅಧ್ಯಯನ ವರದಿಯೂ ಈ ಹಿಂದೆಯೇ ಜೂನ್ ಕೊನೆಯ ವಾರದಲ್ಲಿ ಭಾರತದಲ್ಲಿ ಕೊರೊನಾ ನಾಲ್ಕನೇ ಅಲೆ ಬರಲಿದೆ ಎಂದು ಹೇಳಿತ್ತು. ಆದರೆ ಈಗ ತಿಂಗಳ ಮುಂಚೆಯೇ ಬಂದಿದೆ. ಇದರ ಪ್ರಭಾವ ಅಕ್ಟೋಬರ್ವರೆಗೆ ಇರಲಿದೆ.

ಕೋವಿಡ್ 19 ಜೊತೆ ಬದುಕಲು ಕಲಿಯಬೇಕಾಗಿದೆ
ಕೊರೊನಾ ಈಗ ಹೊಸತಲ್ಲ. ಕಳೆದ ಎರಡು ವರ್ಷಗಳಿಂದ ಕೊರೊನಾ ಸೋಂಕು ಬಂದು ಹೋಗುತ್ತಿರುವುದನ್ನು ನೋಡಿದ್ದೇವೆ ಹಾಗೂ ಅದು ಬೀರಿರುವ ದುಷ್ಪಾರಿಣಾಮ ನೋಡಿದ್ದೇವೆ. ಕೊರೊನಾ ತಡೆಗಟ್ಟಲು ಜನರು ಮುಖ್ಯವಾಗಿ ಮಾಡಬೇಕಾಗಿರುವುದು ಮುನ್ನೆಚ್ಚರಿಕೆವಹಿಸುವುದು. ಹೌದು ಜಾಗ್ರತೆಯಿಂದ ಕೊರೊನಾವನ್ನು ತಡೆಟ್ಟಬಹುದಾಗಿದೆ. ಆದ್ದರಿಂದ ಮತ್ತೆ ಕೊರೊನಾ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ, ಹಾಗೇ ಮಾಡಿದರೆ ಲಾಕ್ಡೌನ್, ಆರ್ಥಿಕ ನಷ್ಟಗಳನ್ನು ತಡೆಗಟ್ಟಬಹುದು.

ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿದೆ
ರಾಜ್ಯ ಸರ್ಕಾರವು ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿದೆ. ಹೊರಗಡೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅದರಲ್ಲೂ ಡಬಲ್ ಮಾಸ್ಕ್ ಧರಿಸುವುದು ಒಳ್ಳೆಯದು. ಜೊತೆಗೆ ಕೈಗಳಿಗೆ ಸ್ಯಾನಿಟೈಸರ್ ಬಳಸಿ.

ಕೊರೊನಾ ಲಕ್ಷಣಗಳು ಕಂಡು ಬಂದರೆ ಐಸೋಲೇಟ್ ಆಗಿ
ಕೊರೊನಾ ಲಕ್ಷಣಗಳು ಕಂಡು ಬಂದ ತಕ್ಷಣ ಸುಮ್ಮನೆ ತಿರುಗಾಡಬೇಡಿ, ನಿಮ್ಮ ಆರೋಗ್ಯ ಜೊತೆಗೆ ಇತರರ ಆರೋಗ್ಯ ಅಪಾಯಕ್ಕೆ ದೂಡಬೇಡಿ. ರೋಗ ಲಕ್ಷಣಗಳು ಕಂಡು ಬಂದ ತಕ್ಷಣ ಪ್ರತ್ಯೇಕವಾಗಿ ಹಾಗೂ ಚಿಕಿತ್ಸೆ ಮಾಡಿಸಿ. ರೋಗ ಲಕ್ಷಣಗಳು ಗಂಭೀರವಾಗುವ ಮೊದಲೇ ಚಿಕಿತ್ಸೆ ಪಡೆಯಿರಿ.



Click it and Unblock the Notifications