Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಈ ಭಾರತೀಯ ಸಂಪ್ರದಾಯಗಳನ್ನು ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ
ಹಿರಿಯರು ಮಾಡುವ ಎಷ್ಟೋ ಕಾರ್ಯಗಳನ್ನು ಕಿರಿಯರು ಗೊಡ್ಡು ಸಂಪ್ರದಾಯವೆಂಬಂತೆ ಮೂಗು ಮುರಿಯುತ್ತಾರೆ. ಅತಿಯಾದ ಮಡಿಯನ್ನು ಈಗ ಯಾರೂ ಇಷ್ಟಪಡುವುದಿಲ್ಲ.
ಹೊರಗಡೆ ಹೋಗಿ ಬಂದ ತಕ್ಷಣ ಕಾಲುಕೈ ತೊಳೆದು ಒಳಗೆ ಬರಬೇಕು, ಬಂದ ತಕ್ಷಣ ಬಟ್ಟೆಗಳನ್ನು ಬದಲಾಯಿಸಬೇಕು ಊಟ ಮಾಡುವಾಗ ನೆಲದಲ್ಲಿ ಕೂತು ಊಟ ಮಾಡಬೇಕು ಈ ರೀತಿಯಲ್ಲಾ ಹೇಳಿವಾಗ ಈಗಿನವರು ಅವುಗಳನ್ನು ಕೇಳುವುದು ಅಷ್ಟಾಗಿ ಇಷ್ಟಪಡುವುದಿಲ್ಲ.

ಆದರೆ ಸ್ವಲ್ಪ ಸೂಕ್ಷ್ಮವಾಗಿ ನೋಡಿದರೆ ನಮ್ಮ ಹಿರಿಯರು ಮಾಡುವ ಕೆಲವೊಂದು ಸಂಪ್ರದಾಯ, ಆಚರಣೆಗಳು ವೈಜ್ಞಾನಿಕ ದೃಷ್ಟಿಯಿಂದಲೂ ತುಂಬಾ ಆರೋಗ್ಯಕರವಾಗಿರುತ್ತದೆ. ಆದರೆ ನಾವು ಆ ನಿಟ್ಟಿನಲ್ಲಿ ಯೋಚಿಸಿರುವುದಿಲ್ಲ.
ಇಲ್ಲಿ ನಾವು ನಮ್ಮ ಹಿರಿಯರು ಪಾಲಿಸಲು ಹೇಳುವ ಕೆಲವೊಂದು ಸಂಪ್ರದಾಯಗು ಹಾಗೂ ಅವುಗಳನ್ನು ಪಾಲಿಸುವುದರಿಂದ ಆಗುವ ಪ್ರಯೋಜನಗಳೇನು ಎಂಬುವುದರ ಬಗ್ಗೆ ಮಾಹಿತಿ ನೀಡಿದ್ದೇವೆ ನೋಡಿ:

ಸ್ವಚ್ಛತೆ
ಬೆಳಗ್ಗೆ ಎದ್ದ ತಕ್ಷಣ ಮನೆಯೆಲ್ಲಾ ಗುಡಿಸಿ ಸ್ವಚ್ಛ ಮಾಡಬೇಕು, ಮನೆಯ ಸುತ್ತ ಮುತ್ತಲಿನ ಪರಿಸರ ಸ್ವಚ್ಛವಾಗಿಡಬೇಕು. ಆಹಾರ ಸೇವಿಸುವ ಮುನ್ನ ಕೈ ತೊಳೆಯಬೇಕು, ಒಂದೇ ಪ್ಲೇಟ್ನಲ್ಲಿ ಆಹಾರವನ್ನು ಸೇವಿಸಬೇಡಿ, ಒಬ್ಬರು ತಿಂದ ಆಹಾರ ಸೇವಿಸಬೇಡಿ, ಬಾತ್ ರೂಂಗೆ ಹೋಗಿ ಬಂದ ಬಳಿಕ ಕೈಗಳನ್ನುತೊಳೆಯಿರಿ ಎಂದೆಲ್ಲಾ ಹೇಳುತ್ತಾರೆ. ಆದರೆ ಇವೆಲ್ಲಾ ಮೊದಲು ನೋಡಿದಾಗ ಅತಿಯಾದ ಮಡಿ, ಮೈಲಿಗೆ ಎಂದು ಯೋಚಿಸುತ್ತಿದ್ದರು. ಆದರೆ ಈಗ ನೋಡಿದರೆ ಆಚರಣೆಯ ಹಿಂದಿರುವ ಅರ್ಥ ತಿಳಿಯುತ್ತದೆ ಅಲ್ಲವೇ?

ಆಯುರ್ವೇದ
ಹಿರಿಯರು ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗಲು ಇಚ್ಛೆ ಪಡುವುದಿಲ್ಲ. ಬದಲಿಗೆ ಮನೆಯಲ್ಲಿಯೇ ಔಷಧ ಮಾಡುತ್ತಾರೆ. ಆದ್ದರಿಂದಲೇ ನಮ್ಮಲ್ಲಿ ಆಯುರ್ವೇದ ಔಷಧಿಗೆ ತುಂಬಾ ಪ್ರಾಶಸ್ತ್ಯ. ಈಗಲೂ ಅಷ್ಟೇ ಕೊರೊನಾ ತಡೆಗಟ್ಟಲು ಆಯುಷ್ ನೀಡಿರುವ ಸಲಹೆ ಪಾಲಿಸುವಂತೆ ಪ್ರಧಾನಿ ಮಂತ್ರಿಗಳು ಸೂಚಿಸಿದ್ದಾರೆ. ಕೊರೊನಾ ಬಾರದಂತೆ ತಡೆಗಟ್ಟಲು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಜನರು ಕೂಡ ಕಷಾಯ ಮಾಡಿ ಸೇವಿಸುತ್ತಿದ್ದಾರೆ.

ಸಂಬಾರ ಪದಾರ್ಥಗಳು
ನಮ್ಮ ಭಾರತೀಯರ ಅಡುಗೆಯಲ್ಲಿ ಸಂಬಾರ ಪದಾರ್ಥಗಳದ್ದೇ ಮೇಲುಗೈ. ಆಹಾರ ರುಚಿ ಹೆಚ್ಚಿಸುವುದೇ ಈ ಆಹಾರ ಪದಾರ್ಥಗಳು. ಸಂಬಾರ ಪದಾರ್ಥಗಳಾದ ಅರಿಶಿಣ, ಚಕ್ಕೆ, ಲವಂಗ, ಕಾಳುಮೆಣಸು ಇವುಗಳಲ್ಲಿ ರುಚಿ ಹೆಚ್ಚಿಸುವ ಗುಣ ಮಾತ್ರವಲ್ಲ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣವೂ ಇದೆ.

ಸಮತೋಲನದ ಆಹಾರ ಸೇವನೆ
ಅತಿಯಾದ ಆಹಾರ ಸೇವನೆ ಒಳ್ಳೆಯದಲ್ಲ, ಮಿತಿಯಾದ ಆಹಾರ ತಿನ್ನಬೇಕೆಂದು ಹಿರಿಯರು ಹೇಳುತ್ತಾರೆ. ಇದು ಆರೋಗ್ಯದ ದೃಷ್ಟಿಯಿಂದಲೂ ತುಂಬಾ ಒಳ್ಳೆಯದು. ನಾವೆಲ್ಲಾ ರೆಸ್ಟೋರೆಂಟ್ಗೆ ಹೋದಾಗ ಅಥವಾ ಪಾರ್ಟಿ ಮಾಡುವಾಗ ಸೇವಿಸುವ ಆಹಾರವೇನು, ಎಷ್ಟು ತಿನ್ನುತ್ತಿದ್ದೇವೆ ಎಂದು ಗಮನಿಸುವುದೇ ಇಲ್ಲ, ಪರಿಣಾಮ ಚಿಕ್ಕ ಪ್ರಾಯದಲ್ಲಿಯೇ ಬೊಜ್ಜು ಸಮಸ್ಯೆ ಕಾಡುವುದು, ನಂತರ ಒಂದೊಂದೇ ಸಮಸ್ಯೆ ಕಾಡುವುದು.

ನೆಲದಲ್ಲಿ ಕೂತು ತಿನ್ನಬೇಕು?
ಈಗ ಎಲ್ಲರೂ ಡೈನಿಂಗ್ ಟೇಬಲ್ ಮೇಲೆ ತಿನ್ನುತ್ತಾರೆ. ಆದರೆ ಹಿಂದೆ ಎಲ್ಲರೂ ನೆಲದಲ್ಲಿ ಕೂತು ತಿನ್ನುತ್ತಿದ್ದರು. ನೆಲದಲ್ಲಿ ಕೂತು ತಿನ್ನುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ನಡೆಯುತ್ತದೆ, ಇದರಿಂದ ಆರೋಗ್ಯ ವೃದ್ಧಿಯಾಗುವುದು.



Click it and Unblock the Notifications
