Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಕಾಯಿಲೆ ಬಂದಾಗ ಈ ಜ್ಯೂಸ್ಗಳನ್ನು ಕುಡಿದರೆ ಬೇಗನೆ ಚೇತರಿಸಿಕೊಳ್ಳುವಿರಿ
ನಮಗೆ ಕಾಯಿಲೆ ಬಂದಾಗ ಕಾಯಿಲೆ ಗುಣವಾದರೂ ಅದರ ಸುಸ್ತು, ಮೈಕೈ ನೋವು ಹೋಗಲು ಒಂದೆರಡು ದಿನ ಬೇಕು, ಇನ್ನು ಕೆಲವೊಮ್ಮೆ ವಾರವಾದರೂ ಸುಸ್ತು ಕಡಿಮೆಯಾಗುವುದಿಲ್ಲ. ಇನ್ನು ಮಾತ್ರೆ ಇನ್ನೂ ತಗೊಳುತ್ತಿದ್ದರೆ ಸುಸ್ತು ಜೊತೆಗೆ ತುಂಬಾ ನಿದ್ದೆ ಬರುವುದು, ಯಾವಾಗಪ್ಪ ಈ ಸುಸ್ತು ಹೋಗುವುದು ಎಂದು ಅನಿಸುವುದು. ಕಾಯಿಲೆ ಬಂದಾಗ ನೀವು ಎಷ್ಟು ನೀರು ಅಥವಾ ದ್ರವಾಂಶ ತೆಗೆದುಕೊಳ್ಳುತ್ತೀರೋ ಅಷ್ಟು ಬೇಗ ಸುಸ್ತು ಕಡಿಮೆಯಾಗುವುದು.

ಸೂಪ್ಗಳು, ಜ್ಯೂಸ್ಗಳು ಮೈ ಸುಸ್ತು ಕಡಿಮೆ ಮಾಡುವಲ್ಲಿ ತುಂಬಾನೇ ಸಹಕಾರಿ. ನಾವಿಲ್ಲಿ ಸುಸ್ತು ಬೇಗನೆ ಕಡಿಮೆ ಮಾಡಿ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೆಲವೊಂದು ಜ್ಯೂಸ್ಗಳ ಬಗ್ಗೆ ಹೇಳಿದ್ದೇವೆ ನೋಡಿ:

1. ದಾಳಿಂಬೆ ಜ್ಯೂಸ್
ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಅಧಿಕವಿರುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ನಿಮಗೆ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ ಮತ್ತು ಫಾಲಿಕ್ ಆಮ್ಲ ಇರುವುದರಿಂದ ದೇಹಕ್ಕೆ ಶಕ್ತಿಯನ್ನು ತುಂಬುವುದನ್ನು ಹಾಗೂ ಕಾಯಿಲೆಯಿಂದ ಬೇಗನೆ ಚೇತರಿಸಿಕೊಳ್ಳಲು ಸಹಕಾರಿ.

2. ಟೊಮೆಟೊ-ಕ್ಯಾರೆಟ್ ಜ್ಯೂಸ್
ಈ ಜ್ಯೂಸ್ ಕೂಡ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಂಬಾನೇ ಸಹಕಾರಿ. ಇದರಲ್ಲಿ ವಿಟಮಿನ್ ಸಿ ಮತ್ತು ಎ ಇರುವುದರಿಂದ ಸೋಂಕು ತಡೆಗಟ್ಟಲು ಸಹಕಾರಿಯಾಗಿದೆ.

3. ಗೋಧಿ ಹುಲ್ಲಿನ ಜ್ಯೂಸ್
ಗೋಧಿ ಹುಲ್ಲಿನ ಜ್ಯೂಸ್ನಲ್ಲಿ ಕೂಡ ಅನೇಕ ರೋಗಗಳನ್ನು ಗುಣಪಡಿಸುವ ಔಷಧೀಯ ಗುಣಗಳಿವೆ. ಇದರಲ್ಲಿ ವಿಟಮಿನ್ಗಳಾ ಎ, ಬಿ-ಕಾಂಪ್ಲೆಕ್ಸ್, ಸಿ, ಇ, ಕೆ ಇದ್ದು , ಗ್ಲುಟೇನ್ ಫ್ರೀ ಆಗಿದೆ. ಗೋಧಿ ಹುಲ್ಲಿನ ಜ್ಯೂಸ್ ಮಾಡಿ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ಮತ್ತಷ್ಟು ಒಳ್ಳೆಯದು.

4. ಕ್ರೇನ್ ಬರ್ರಿ ಜ್ಯೂಸ್
ಕ್ರೇನ್ಬರ್ರಿ ಜ್ಯೂಸ್ ಗಂಟಲು ಕೆರೆತ, ಶೀತದ ವಿರುದ್ಧ ಹೋರಾಡುತ್ತದೆ. ಚಕ್ಕೆ, ಲವಂಗ ಹಾಕಿ ಮಾಡುವ ಕ್ರೇನ್ ಬರ್ರಿ ಟೀ ಸಾಮಾನ್ಯ ಶೀತ, ಕೆಮ್ಮಿನ ಸಮಸ್ಯೆಯನ್ನು ಮೈಲಿ ದೂರ ಓಡಿಸುತ್ತದೆ.

5.ಕಲ್ಲಂಗಡಿ ಹಣ್ಣು ಹಾಗೂ ಶಿಯಾ ಬೀಜಗಳನ್ನು ಹಾಕಿ ಮಾಡಿದ ಜ್ಯೂಸ್
ಕಾಯಿಲೆ ಬಿದ್ದಾಗ ಬಾಯಿ ರುಚಿ ಹಾಳಾಗಿರುತ್ತದೆ. ಈ ಜ್ಯೂಸ್ ನಿಮ್ಮ ಬಾಯಿ ರುಚಿ ಹೆಚ್ಚಿಸುವುದು ಹಾಗೂ ಆರೋಗ್ಯಕ್ಕೂ ಒಳ್ಳೆಯದು. ಈ ಜ್ಯೂಸ್ನಲ್ಲಿ ವಿಟಮಿನ್ 2, ಸಿ, ಬಿ6 ಇದ್ದು ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಉರಿಯೂತದ ಸಮಸ್ಯೆ ಇರುವವರಿಗೆ ಈ ಜ್ಯೂಸ್ ತುಂಬಾನೇ ಪ್ರಯೋಜನಕಾರಿ.

6. ಕಿವಿ ಜ್ಯೂಸ್
ಕಿವಿ ಹಣ್ಣಿನ ಜ್ಯೂಸ್ ಕೂಡ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿ. ಡೆಂಗ್ಯೂ, ಚಿಕನ್ಗುನ್ಯಾ, ಟೈಫಾಯ್ಡ್ ಮುಂತಾದ ಆರೋಗ್ಯ ಸಮಸ್ಯೆ ಉಂಟಾದಾಗ ಕಿವಿ ಹಣ್ಣಿನ ಜ್ಯೂಸ್ ಪ್ರತಿದಿನ ಕುಡಿಯುವುದರಿಂದ ಬೇಗನೆ ಚೇತರಿಸಿಕೊಳ್ಳಲು ಸಹಕಾರಿ. ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ರಕ್ತದೊತ್ತಡ ನಿಯಂತ್ರಿಸುತ್ತದೆ, ಗಾಯವಿದ್ದರೆ ಅದು ಬೇಗನೆ ಒಣಗಲು ಸಹಕಾರಿ ಹಾಗೂ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.



Click it and Unblock the Notifications