Latest Updates
-
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್
ಕಾಯಿಲೆ ಬಂದಾಗ ಈ ಜ್ಯೂಸ್ಗಳನ್ನು ಕುಡಿದರೆ ಬೇಗನೆ ಚೇತರಿಸಿಕೊಳ್ಳುವಿರಿ
ನಮಗೆ ಕಾಯಿಲೆ ಬಂದಾಗ ಕಾಯಿಲೆ ಗುಣವಾದರೂ ಅದರ ಸುಸ್ತು, ಮೈಕೈ ನೋವು ಹೋಗಲು ಒಂದೆರಡು ದಿನ ಬೇಕು, ಇನ್ನು ಕೆಲವೊಮ್ಮೆ ವಾರವಾದರೂ ಸುಸ್ತು ಕಡಿಮೆಯಾಗುವುದಿಲ್ಲ. ಇನ್ನು ಮಾತ್ರೆ ಇನ್ನೂ ತಗೊಳುತ್ತಿದ್ದರೆ ಸುಸ್ತು ಜೊತೆಗೆ ತುಂಬಾ ನಿದ್ದೆ ಬರುವುದು, ಯಾವಾಗಪ್ಪ ಈ ಸುಸ್ತು ಹೋಗುವುದು ಎಂದು ಅನಿಸುವುದು. ಕಾಯಿಲೆ ಬಂದಾಗ ನೀವು ಎಷ್ಟು ನೀರು ಅಥವಾ ದ್ರವಾಂಶ ತೆಗೆದುಕೊಳ್ಳುತ್ತೀರೋ ಅಷ್ಟು ಬೇಗ ಸುಸ್ತು ಕಡಿಮೆಯಾಗುವುದು.

ಸೂಪ್ಗಳು, ಜ್ಯೂಸ್ಗಳು ಮೈ ಸುಸ್ತು ಕಡಿಮೆ ಮಾಡುವಲ್ಲಿ ತುಂಬಾನೇ ಸಹಕಾರಿ. ನಾವಿಲ್ಲಿ ಸುಸ್ತು ಬೇಗನೆ ಕಡಿಮೆ ಮಾಡಿ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೆಲವೊಂದು ಜ್ಯೂಸ್ಗಳ ಬಗ್ಗೆ ಹೇಳಿದ್ದೇವೆ ನೋಡಿ:

1. ದಾಳಿಂಬೆ ಜ್ಯೂಸ್
ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಅಧಿಕವಿರುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ನಿಮಗೆ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ ಮತ್ತು ಫಾಲಿಕ್ ಆಮ್ಲ ಇರುವುದರಿಂದ ದೇಹಕ್ಕೆ ಶಕ್ತಿಯನ್ನು ತುಂಬುವುದನ್ನು ಹಾಗೂ ಕಾಯಿಲೆಯಿಂದ ಬೇಗನೆ ಚೇತರಿಸಿಕೊಳ್ಳಲು ಸಹಕಾರಿ.

2. ಟೊಮೆಟೊ-ಕ್ಯಾರೆಟ್ ಜ್ಯೂಸ್
ಈ ಜ್ಯೂಸ್ ಕೂಡ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಂಬಾನೇ ಸಹಕಾರಿ. ಇದರಲ್ಲಿ ವಿಟಮಿನ್ ಸಿ ಮತ್ತು ಎ ಇರುವುದರಿಂದ ಸೋಂಕು ತಡೆಗಟ್ಟಲು ಸಹಕಾರಿಯಾಗಿದೆ.

3. ಗೋಧಿ ಹುಲ್ಲಿನ ಜ್ಯೂಸ್
ಗೋಧಿ ಹುಲ್ಲಿನ ಜ್ಯೂಸ್ನಲ್ಲಿ ಕೂಡ ಅನೇಕ ರೋಗಗಳನ್ನು ಗುಣಪಡಿಸುವ ಔಷಧೀಯ ಗುಣಗಳಿವೆ. ಇದರಲ್ಲಿ ವಿಟಮಿನ್ಗಳಾ ಎ, ಬಿ-ಕಾಂಪ್ಲೆಕ್ಸ್, ಸಿ, ಇ, ಕೆ ಇದ್ದು , ಗ್ಲುಟೇನ್ ಫ್ರೀ ಆಗಿದೆ. ಗೋಧಿ ಹುಲ್ಲಿನ ಜ್ಯೂಸ್ ಮಾಡಿ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ಮತ್ತಷ್ಟು ಒಳ್ಳೆಯದು.

4. ಕ್ರೇನ್ ಬರ್ರಿ ಜ್ಯೂಸ್
ಕ್ರೇನ್ಬರ್ರಿ ಜ್ಯೂಸ್ ಗಂಟಲು ಕೆರೆತ, ಶೀತದ ವಿರುದ್ಧ ಹೋರಾಡುತ್ತದೆ. ಚಕ್ಕೆ, ಲವಂಗ ಹಾಕಿ ಮಾಡುವ ಕ್ರೇನ್ ಬರ್ರಿ ಟೀ ಸಾಮಾನ್ಯ ಶೀತ, ಕೆಮ್ಮಿನ ಸಮಸ್ಯೆಯನ್ನು ಮೈಲಿ ದೂರ ಓಡಿಸುತ್ತದೆ.

5.ಕಲ್ಲಂಗಡಿ ಹಣ್ಣು ಹಾಗೂ ಶಿಯಾ ಬೀಜಗಳನ್ನು ಹಾಕಿ ಮಾಡಿದ ಜ್ಯೂಸ್
ಕಾಯಿಲೆ ಬಿದ್ದಾಗ ಬಾಯಿ ರುಚಿ ಹಾಳಾಗಿರುತ್ತದೆ. ಈ ಜ್ಯೂಸ್ ನಿಮ್ಮ ಬಾಯಿ ರುಚಿ ಹೆಚ್ಚಿಸುವುದು ಹಾಗೂ ಆರೋಗ್ಯಕ್ಕೂ ಒಳ್ಳೆಯದು. ಈ ಜ್ಯೂಸ್ನಲ್ಲಿ ವಿಟಮಿನ್ 2, ಸಿ, ಬಿ6 ಇದ್ದು ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಉರಿಯೂತದ ಸಮಸ್ಯೆ ಇರುವವರಿಗೆ ಈ ಜ್ಯೂಸ್ ತುಂಬಾನೇ ಪ್ರಯೋಜನಕಾರಿ.

6. ಕಿವಿ ಜ್ಯೂಸ್
ಕಿವಿ ಹಣ್ಣಿನ ಜ್ಯೂಸ್ ಕೂಡ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿ. ಡೆಂಗ್ಯೂ, ಚಿಕನ್ಗುನ್ಯಾ, ಟೈಫಾಯ್ಡ್ ಮುಂತಾದ ಆರೋಗ್ಯ ಸಮಸ್ಯೆ ಉಂಟಾದಾಗ ಕಿವಿ ಹಣ್ಣಿನ ಜ್ಯೂಸ್ ಪ್ರತಿದಿನ ಕುಡಿಯುವುದರಿಂದ ಬೇಗನೆ ಚೇತರಿಸಿಕೊಳ್ಳಲು ಸಹಕಾರಿ. ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ರಕ್ತದೊತ್ತಡ ನಿಯಂತ್ರಿಸುತ್ತದೆ, ಗಾಯವಿದ್ದರೆ ಅದು ಬೇಗನೆ ಒಣಗಲು ಸಹಕಾರಿ ಹಾಗೂ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.



Click it and Unblock the Notifications











