Latest Updates
-
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು!
ಕಾಯಿಲೆ ಬಂದಾಗ ಈ ಜ್ಯೂಸ್ಗಳನ್ನು ಕುಡಿದರೆ ಬೇಗನೆ ಚೇತರಿಸಿಕೊಳ್ಳುವಿರಿ
ನಮಗೆ ಕಾಯಿಲೆ ಬಂದಾಗ ಕಾಯಿಲೆ ಗುಣವಾದರೂ ಅದರ ಸುಸ್ತು, ಮೈಕೈ ನೋವು ಹೋಗಲು ಒಂದೆರಡು ದಿನ ಬೇಕು, ಇನ್ನು ಕೆಲವೊಮ್ಮೆ ವಾರವಾದರೂ ಸುಸ್ತು ಕಡಿಮೆಯಾಗುವುದಿಲ್ಲ. ಇನ್ನು ಮಾತ್ರೆ ಇನ್ನೂ ತಗೊಳುತ್ತಿದ್ದರೆ ಸುಸ್ತು ಜೊತೆಗೆ ತುಂಬಾ ನಿದ್ದೆ ಬರುವುದು, ಯಾವಾಗಪ್ಪ ಈ ಸುಸ್ತು ಹೋಗುವುದು ಎಂದು ಅನಿಸುವುದು. ಕಾಯಿಲೆ ಬಂದಾಗ ನೀವು ಎಷ್ಟು ನೀರು ಅಥವಾ ದ್ರವಾಂಶ ತೆಗೆದುಕೊಳ್ಳುತ್ತೀರೋ ಅಷ್ಟು ಬೇಗ ಸುಸ್ತು ಕಡಿಮೆಯಾಗುವುದು.

ಸೂಪ್ಗಳು, ಜ್ಯೂಸ್ಗಳು ಮೈ ಸುಸ್ತು ಕಡಿಮೆ ಮಾಡುವಲ್ಲಿ ತುಂಬಾನೇ ಸಹಕಾರಿ. ನಾವಿಲ್ಲಿ ಸುಸ್ತು ಬೇಗನೆ ಕಡಿಮೆ ಮಾಡಿ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೆಲವೊಂದು ಜ್ಯೂಸ್ಗಳ ಬಗ್ಗೆ ಹೇಳಿದ್ದೇವೆ ನೋಡಿ:

1. ದಾಳಿಂಬೆ ಜ್ಯೂಸ್
ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಅಧಿಕವಿರುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ನಿಮಗೆ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ ಮತ್ತು ಫಾಲಿಕ್ ಆಮ್ಲ ಇರುವುದರಿಂದ ದೇಹಕ್ಕೆ ಶಕ್ತಿಯನ್ನು ತುಂಬುವುದನ್ನು ಹಾಗೂ ಕಾಯಿಲೆಯಿಂದ ಬೇಗನೆ ಚೇತರಿಸಿಕೊಳ್ಳಲು ಸಹಕಾರಿ.

2. ಟೊಮೆಟೊ-ಕ್ಯಾರೆಟ್ ಜ್ಯೂಸ್
ಈ ಜ್ಯೂಸ್ ಕೂಡ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಂಬಾನೇ ಸಹಕಾರಿ. ಇದರಲ್ಲಿ ವಿಟಮಿನ್ ಸಿ ಮತ್ತು ಎ ಇರುವುದರಿಂದ ಸೋಂಕು ತಡೆಗಟ್ಟಲು ಸಹಕಾರಿಯಾಗಿದೆ.

3. ಗೋಧಿ ಹುಲ್ಲಿನ ಜ್ಯೂಸ್
ಗೋಧಿ ಹುಲ್ಲಿನ ಜ್ಯೂಸ್ನಲ್ಲಿ ಕೂಡ ಅನೇಕ ರೋಗಗಳನ್ನು ಗುಣಪಡಿಸುವ ಔಷಧೀಯ ಗುಣಗಳಿವೆ. ಇದರಲ್ಲಿ ವಿಟಮಿನ್ಗಳಾ ಎ, ಬಿ-ಕಾಂಪ್ಲೆಕ್ಸ್, ಸಿ, ಇ, ಕೆ ಇದ್ದು , ಗ್ಲುಟೇನ್ ಫ್ರೀ ಆಗಿದೆ. ಗೋಧಿ ಹುಲ್ಲಿನ ಜ್ಯೂಸ್ ಮಾಡಿ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ಮತ್ತಷ್ಟು ಒಳ್ಳೆಯದು.

4. ಕ್ರೇನ್ ಬರ್ರಿ ಜ್ಯೂಸ್
ಕ್ರೇನ್ಬರ್ರಿ ಜ್ಯೂಸ್ ಗಂಟಲು ಕೆರೆತ, ಶೀತದ ವಿರುದ್ಧ ಹೋರಾಡುತ್ತದೆ. ಚಕ್ಕೆ, ಲವಂಗ ಹಾಕಿ ಮಾಡುವ ಕ್ರೇನ್ ಬರ್ರಿ ಟೀ ಸಾಮಾನ್ಯ ಶೀತ, ಕೆಮ್ಮಿನ ಸಮಸ್ಯೆಯನ್ನು ಮೈಲಿ ದೂರ ಓಡಿಸುತ್ತದೆ.

5.ಕಲ್ಲಂಗಡಿ ಹಣ್ಣು ಹಾಗೂ ಶಿಯಾ ಬೀಜಗಳನ್ನು ಹಾಕಿ ಮಾಡಿದ ಜ್ಯೂಸ್
ಕಾಯಿಲೆ ಬಿದ್ದಾಗ ಬಾಯಿ ರುಚಿ ಹಾಳಾಗಿರುತ್ತದೆ. ಈ ಜ್ಯೂಸ್ ನಿಮ್ಮ ಬಾಯಿ ರುಚಿ ಹೆಚ್ಚಿಸುವುದು ಹಾಗೂ ಆರೋಗ್ಯಕ್ಕೂ ಒಳ್ಳೆಯದು. ಈ ಜ್ಯೂಸ್ನಲ್ಲಿ ವಿಟಮಿನ್ 2, ಸಿ, ಬಿ6 ಇದ್ದು ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಉರಿಯೂತದ ಸಮಸ್ಯೆ ಇರುವವರಿಗೆ ಈ ಜ್ಯೂಸ್ ತುಂಬಾನೇ ಪ್ರಯೋಜನಕಾರಿ.

6. ಕಿವಿ ಜ್ಯೂಸ್
ಕಿವಿ ಹಣ್ಣಿನ ಜ್ಯೂಸ್ ಕೂಡ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿ. ಡೆಂಗ್ಯೂ, ಚಿಕನ್ಗುನ್ಯಾ, ಟೈಫಾಯ್ಡ್ ಮುಂತಾದ ಆರೋಗ್ಯ ಸಮಸ್ಯೆ ಉಂಟಾದಾಗ ಕಿವಿ ಹಣ್ಣಿನ ಜ್ಯೂಸ್ ಪ್ರತಿದಿನ ಕುಡಿಯುವುದರಿಂದ ಬೇಗನೆ ಚೇತರಿಸಿಕೊಳ್ಳಲು ಸಹಕಾರಿ. ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ರಕ್ತದೊತ್ತಡ ನಿಯಂತ್ರಿಸುತ್ತದೆ, ಗಾಯವಿದ್ದರೆ ಅದು ಬೇಗನೆ ಒಣಗಲು ಸಹಕಾರಿ ಹಾಗೂ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.



Click it and Unblock the Notifications